ಚಿಕ್ಕಬಳ್ಳಾಪುರ | ಶೂನ್ಯದತ್ತ ಮಲೇರಿಯಾ ಪ್ರಕರಣಗಳು; ಸ್ವಚ್ಛತೆ ಕಾಪಾಡಿಕೊಳ್ಳಲು ಡಿಎಚ್‌ಒ ಸೂಚನೆ

Date:

2024ರ ಸಾಲಿನಲ್ಲಿ ಯಾವುದೇ ಮಲೇರಿಯಾ ಪ್ರಕರಣಗಳು ವರದಿಯಾಗಿಲ್ಲ. ಈ ಮೂಲಕ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಶೂನ್ಯದತ್ತ ಸಾಗಿದ್ದು, ಸೊಳ್ಳೆಗಳ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್ ಹೇಳಿದರು.

ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ (30) ಆಯೋಜಿಸಿದ್ದ ‘ವಿಶ್ವ ಮಲೇರಿಯಾ ದಿನಾಚರಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 2009ನೇ ಸಾಲಿನಲ್ಲಿ 1,554 ಮಲೇರಿಯಾ ಪ್ರಕರಣಗಳು ದಾಖಲಾಗಿದ್ದವು. 2023ರ ಸಾಲಿನಲ್ಲಿ ಕೇವಲ 3 ಪ್ರಕರಣಗಳು ದಾಖಲಾಗಿದ್ದು, ಮಲೇರಿಯಾ ಪ್ರಕರಣಗಳು ಬಹುತೇಕ ಇಳಿಮುಖವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಮಲೇರಿಯ ಪ್ರಕರಣಗಳಿಲ್ಲ ಎಂದು ಸಾರ್ವಜನಿಕರು ತಮ್ಮ ಸುತ್ತಮುತ್ತಲ ಸ್ವಚ್ಚತೆ ಕಾಪಾಡಿಕೊಳ್ಳುವುದನ್ನು ಕಡಿಮೆ ಮಾಡಬಾರದು. ಸೊಳ್ಳೆಗಳ ಉತ್ಪತ್ತಿ ತಾಣಗಳು, ನೀರು ನಿಲ್ಲುವ ತಾಣಗಳನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ನೀರಿನ ತೊಟ್ಟಿಗಳು, ಟ್ಯಾಂಕ್ ಗಳ, ಸಂಪುಗಳನ್ನು ಪ್ರತಿವಾರ ಸ್ವಚ್ಚಗೊಳಿಸಬೇಕು. ಮನೆಗಳಲ್ಲಿ ಪ್ರಿಜ್, ಏರ್ ಕೂಲರ್‌ಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ಜೈವಿಕ ವಿಧಾನಗಳಿಂದ ಮಲೇರಿಯ ತಡೆಗಟ್ಟಬೇಕು ಎಂದರು.

ಅನಿವಾರ್ಯ ಇದ್ದಾಗ ಮಾತ್ರ ಫಾಗಿಂಗ್ ಮಾಡಿಸಬೇಕು. ಇಲ್ಲವೆ ಬೇವಿನ ಹೊಗೆ ಹಾಕಿ ಸೊಳ್ಳೆಗಳನ್ನು ನಿಯಂತ್ರಿಸಬೇಕು. ಮನೆಗಳಲ್ಲಿ ಸೊಳ್ಳೆ ಪರದೆ ಹಾಗೂ ಇತರ ನಿರೋಧಕಗಳನ್ನು ಬಳಸಬೇಕು. ಪ್ರತಿ ಮನೆಯು ಮಲೇರಿಯ ಮುಕ್ತ ಆಗುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯು ಮಲೇರಿಯ ಮುಕ್ತ ಆಗಬೇಕು ಎಂದು ಸಲಹೆ ನೀಡಿದರು.

ಈಗಾಗಲೇ ಪ್ರಪಂಚದ 43 ದೇಶಗಳು ಮಲೇರಿಯ ಮುಕ್ತ ದೇಶಗಳಾಗಿವೆ. ಭಾರತವು ಆ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. 2025ರ ಮೇಳೆಗೆ ಕರ್ನಾಟಕ ರಾಜ್ಯದಲ್ಲಿ ಮಲೇರಿಯ ಪ್ರಕರಣಗಳ ಶೂನ್ಯ ಸಾಧನೆ ಉದ್ದೇಶದಿಂದ ಮಲೇರಿಯ ನಿಯಂತ್ರಣಕ್ಕೆ ಯುಕ್ತ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸೂಚಿಸಿದೆ. ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ 2025ರ ವೇಳೆಗೆ ಶೂನ್ಯ ಸ್ಥಳೀಯ ಮಲೇರಿಯ ಸಾಧನೆಯನ್ನು ಕೈಗೊಳ್ಳಬೇಕಿದೆ ಎಂದರು.

ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮಲೇರಿಯ ಮುಕ್ತ ಜಿಲ್ಲೆಯ ಸಾಧನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು. ಪೋಷಕರು ಹಾಗೂ ಸುತ್ತಮುತ್ತಲ ವಾಸಿಗಳಿಗೆ ಸೊಳ್ಳೆ ನಿಯಂತ್ರಣ ಕುರಿತು ವಿದ್ಯಾರ್ಥಿಗಳು ಅರಿವು ಮೂಡಿಸುವಂತೆ ಸಲಹೆ ನೀಡಿದರು.

ನಂದಿ ವೈದ್ಯಕೀಯ ಕಾಲೇಜಿನ ನಿರ್ದೇಶಕ ಮಂಜುನಾಥ ಮಾತನಾಡಿ, ಯಾವ ದೇಶದ ಆರೋಗ್ಯ ಸೂಚ್ಯಂಕ ಚೆನ್ನಾಗಿರುತ್ತದೋ ಆ ದೇಶ ಅಭಿವೃದ್ಧಿಯಲ್ಲಿ ಮುಂದಿರುತ್ತದೆ. ಅಧಿಕ ರಕ್ತದ ಒತ್ತಡ, ಮಧುಮೇಹ ಇಂದಿನ ಬದಲಾದ ಜೀವನ ವಿಧಾನದಿಂದ ಬರುವ ಸಾಧ್ಯತೆ ಹೆಚ್ಚಾಗಿದೆ. ಉತ್ತಮ ಜೀವನ ವಿಧಾನ, ವ್ಯಾಯಾಮ, ಪಾಲನೆಯಿಂದ ಇಂತಹ ರೋಗಗಳನ್ನು ತಡೆಗಟ್ಟಬಹುದು ಎಂದರು.

ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯ, ಡೆಂಗ್ಯು, ಚಿಕುನ್ ಗುನ್ಯ, ಆನೆ ಕಾಲು ರೋಗ ಇನ್ನು ಮುಂತಾದ ಕೀಟ ಜನ್ಯ ಕಾಯಿಲೆಗಳನ್ನು ನಿಯಂತ್ರಿಸಬಹುದು. ಚಳಿ ಜ್ವರ, ಮೈ ಕೈ ನೋವು, ಕಂಡು ಬಂದರೆ ಹತ್ತಿರದ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಮಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಲೇರಿಯಾ ಪ್ರಕರಣಗಳು ಜಾಸ್ತಿ ಇದ್ದು, ಆ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡರೆ ಹೆಚ್ಚು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿದ್ಯಾರ್ಥಿಗಳಿಗೆ  ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗ ನಿಯಂತ್ರಾಣಾಧಿಕಾರಿ ಡಾ.ಪ್ರಕಾಶ್, ಪಿ.ಪಿ.ಟಿ ಪ್ರದರ್ಶನದ ಮೂಲಕ ಮಲೇರಿಯಾ ನಿಯಂತ್ರಣದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಿ.ಡಿ. ಚಂದ್ರಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣ ಪ್ರಸಾದ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ್, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಶಿ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಮಂಜುಳ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಹರೀಶ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...