ಚಿಕ್ಕಬಳ್ಳಾಪುರ | ಒಡವೆ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

Date:

ಒಡವೆ ವಿಚಾರಕ್ಕೆ ಗಂಡ ಹೆಂಡತಿ ನಡುವೆ ನಡೆಯುತ್ತಿದ್ದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

ಗೌರಿಬಿದನೂರಿನ ಗಂಗಾನಗರದಲ್ಲಿ ವಾಸವಾಗಿದ್ದ ಲಕ್ಷ್ಮಿದೇವಿ ಮೃತ ದುರ್ದೈವಿ. ಅವರ ಮನೆ ಹೊರಗೆ ಕೆಟ್ಟ ವಾಸನೆ ಬಂದಿದ್ದರಿಂದ ಅನುಮಾನಗೊಂಡ ನೆರೆಹೊರೆಯವರು ಮನೆಯ ಕಿಟಕಿಯಲ್ಲಿ ಇಣುಕಿ ನೋಡಿದ್ದಾರೆ. ಬಳಿಕ ರೂಮಿನ ಮಂಚದ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಲಕ್ಷ್ಮಿದೇವಿ ಅವರ ಶವ ಪತ್ತೆಯಾಗಿದೆ. ತಲೆಗೆ ಬಲವಾದ ಏಟು ಬಿದ್ದಿದ್ದರಿಂದ ಲಕ್ಷ್ಮಿದೇವಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳೀಯರು ಕೂಡಲೇ ಲಕ್ಷ್ಮಿದೇವಿ ಅವರ ಮಕ್ಕಳಿಗೆ ಮತ್ತು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಗೌರಿಬಿದನೂರು ನಗರಠಾಣೆ ಪೊಲೀಸರು ಹಾಗೂ ಚಿಕ್ಕಬಳ್ಳಾಪುರ ಎಸ್‌ಪಿ ಡಿ.ಎಲ್ ನಾಗೇಶ್ ಅವರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ಷ್ಮಿದೇವಿ ಅವರ ಪತಿ ಕೃಷ್ಣಪ್ಪ(53) ಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ. ಆರ್ಥಿಕವಾಗಿ ಸದೃಢವಾಗಿದ್ದರು. ಆದರೆ ಕೃಷ್ಣಪ್ಪ ತುಂಬಾ ಜಿಪುಣ. ಪತ್ನಿ ಮತ್ತು ಮಕ್ಕಳ ಖರ್ಚಿಗೆ ಹಣ ನೀಡುತ್ತಿರಲಿಲ್ಲ. ಅವರ ಚಿನ್ನಾಭರಣಗಳನ್ನು ಬಳಸಲೂ ಬಿಡುತ್ತಿರಲಿಲ್ಲ. ಅವನ್ನೆಲ್ಲ ಬೀರುವಿನಲ್ಲಿ ಬಂಧಿಸಿದ್ದ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಜಗಳ ಆಗುತ್ತಿತ್ತು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ; ಆರು ಯುವತಿಯರ ರಕ್ಷಣೆ

“ಮೇ 19 ರಂದು ಲಕ್ಷ್ಮಿದೇವಿ ಅವರ ಮಕ್ಕಳು ಮನೆಗೆ ಬಂದಿದ್ದರು. ಈ ವೇಳೆ ಒಡವೆ ವಿಚಾರಕ್ಕೆ ಕೃಷ್ಣಪ್ಪ ಮಚ್ಚಿನಿಂದ ಹೆಂಡತಿಯನ್ನು ಹತ್ಯೆಗೈಯ್ಯಲು ಯತ್ನಿಸಿದ್ದ. ಇದನ್ನು ತಡೆದ ಮಕ್ಕಳು ಅಪ್ಪನಿಗೆ ಬುದ್ಧಿ ಹೇಳಿ ಹೋಗಿದ್ದರು.  ಆದರೆ ಇದೀಗ ಲಕ್ಷ್ಮಿದೇವಿ ಶವವಾಗಿದ್ದಾರೆ. ಇತ್ತ ಕೃಷ್ಣಪ್ಪ ತನ್ನ ಮೊಬೈಲ್ ಫೋನನ್ನು​ ಮಂಚದ ಮೇಲೆಯೇ ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ ಜಿಪುಣ ಗಂಡನೇ ಹೆಂಡತಿಯನ್ನು ಕೊಂದಿದ್ದಾನೆ” ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಗಳು ಲೀಲಾ ಕೃಷ್ಣಪ್ಪನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...