ಚಿಕ್ಕಬಳ್ಳಾಪುರ | ಸುಸೂತ್ರ ಅಂಚೆ ಮತದಾನಕ್ಕೆ ಎಡಿಸಿ ತಿಪ್ಪೇಸ್ವಾಮಿ ಸೂಚನೆ

Date:

ಮತದಾನದಿಂದ ಯಾವುದೇ ಅರ್ಹ ಮತದಾರರು ವಂಚಿತರಾಗಬಾರದು. ಇದನ್ನರಿತು ಅಂಚೆ ಮತದಾನದ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಚುನಾವಣಾ ಆಯೋಗದ ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು ಎಂದು ಚಿಕ್ಕಬಳ್ಳಾಪು ಅಪರ ಜಿಲ್ಲಾಧಿಕಾರಿ ಡಾ ಎನ್ ತಿಪ್ಪೇಸ್ವಾಮಿ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯಿತಿಯ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಅಂಚೆ ಮತದಾನದ ಕುರಿತ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

“ಚುನಾವಣೆಗಳು ನ್ಯಾಯಸಮ್ಮತವಾಗಿ, ಪಾರದರ್ಶಕವಾಗಿ, ಶಾಂತಿಯುತವಾಗಿ ಭಯಮುಕ್ತ ವಾತಾವರಣದಲ್ಲಿ ನಡೆಯುವುದು ಎಷ್ಟು ಮುಖ್ಯವೊ, ಪ್ರತಿ ಮತದಾರರೂ ಕೂಡ ಚುನಾವಣಾ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳುವಿಕೆಯೂ ಅತಿ ಮುಖ್ಯವಾಗಿರುತ್ತದೆ. ಆದ್ದರಿಂದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆ ಆಗುವ ಕೆಲವು ಅಧಿಕಾರಿಗಳು, ರಕ್ಷಣಾ ಪಡೆಗಳ ಅಧಿಕಾರಿಗಳು, ಸೈನಿಕರು 85 ವರ್ಷಕ್ಕೂ ಮೇಲ್ಪಟ್ಟವರ ಮತದಾನಕ್ಕಾಗಿ ಅಂಚೆ ಮತದಾನದ ವ್ಯವಸ್ಥೆ ಮಾಡುವಂತೆ ಚುನಾವಣಾ ಆಯೋಗ ಒಂದು ಸುವರ್ಣಾವಕಾಶವನ್ನು ಕಲ್ಪಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾ ಆಯೋಗ ಗುರುತಿಸುವ ಆಯ್ದ ಸೇವೆಗಳ ಮತದಾರರಿಗೆ ಅಂಚೆ ಮತದಾನ ಮಾಡಲು ನಮೂನೆಗಳನ್ನು ವಿತರಿಸುವ ಕಾರ್ಯದಿಂದ ಹಿಡಿದು ಮತದಾನ ಮತ್ತು ಮತ ಎಣಿಕೆ ಮಾಡುವವರೆಗಿನ ಪ್ರಕ್ರಿಯೆಗಳನ್ನು ಸುಸೂತ್ರವಾಗಿ ನಡೆಸಲು ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತಾವೆಲ್ಲರೂ ಚುನಾವಣಾ ಆಯೋಗ ನೀಡುವ ನಿರ್ದೇಶನಗಳು, ಸೂಚನೆಗಳನ್ನು ಕಾರ್ಯಾಗಾರದ ಮೂಲಕ ಅರಿತುಕೊಂಡು ತಮ್ಮ ಕಾರ್ಯಗಳನ್ನು ಕರಾರುವಕ್ಕಾಗಿ ನಿರ್ವಹಿಸಬೇಕು” ಎಂದು ಸೂಚಿಸಿದರು.

“ಅಂಚೆ ಮತದಾನಕ್ಕೆ ಅರ್ಹವಾಗಿರುವ ಅಂಗವಿಕಲರು, ರಕ್ಷಣಾ ಪಡೆಗಳ ವರ್ಗದವರು ಹಾಗೂ ಹಿರಿಯ ನಾಗರಿಕರ ಮಾಹಿತಿಯನ್ನು ಪಡೆದು ಅವರೆಲ್ಲರಿಗೂ ನಿಗದಿತ ನಮೂನೆಗಳನ್ನು ತಲುಪಿಸಿ ತಪ್ಪದೇ ಅಂಚೆ ಮತದಾನವನ್ನು ನಿಗದಿತ ನಿಯಮಗಳ ರೀತಿ ಮಾಡಿಸುವುದು ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು” ಎಂದು ತಿಳಿಸಿದರು.

ಚುನಾವಣಾ ಆಯೋಗದ ರಾಜ್ಯ ತರಬೇತುದಾರ ಶಂಕರ್ ರೆಡ್ಡಿ, ಅಂಚೆ ಮತದಾನ ಪ್ರಕ್ರಿಯೆ ಹಾಗೂ ಅದರ ಮಹತ್ವದ ಕುರಿತು ಸಮಗ್ರವಾಗಿ ಹಾಗೂ ಸವಿಸ್ತಾರವಾಗಿ ಪಿಪಿಟಿ ಮೂಲಕ ತಿಳಿಸಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ

ಕಾರ್ಯಾಗಾರದಲ್ಲಿ ಉಪವಿಭಾಗಾಧಿಕಾರಿ ಡಿ ಎಚ್ ಅಶ್ವಿನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುರೇಣುಕ, ಜಿಲ್ಲಾ ಉದ್ಯೋಗಾಧಿಕಾರಿ ಎಂ ಪ್ರಸಾದ್, ಚುನಾವಣಾ ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ ಹಾಗೂ ಅಂಚೆ ಮತದಾನದ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...