ಚಿಕ್ಕಬಳ್ಳಾಪುರ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

Date:

ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘವು ರಾಜ್ಯವ್ಯಾಪ್ತಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ.

ಕನಿಷ್ಠ ವೇತನ, ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಬೇಕು, ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಾಹಣ ಮೌಲ್ಯಮಾಪನ ಕೈಬಿಡಬೇಕು, ನಗರ ಆಶಾಗಳಿಗೆ 2000 ಗೌರವಧನ ಹೆಚ್ಚಳ ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ಚಿಕ್ಕಬಳ್ಳಾಪುರ ನಗರ ಹೊರವಲಯದಲ್ಲಿರುವ ಜಿಲ್ಲಾಡಳಿತದ ಭವನದ ಎದುರು ಆಶಾ ಕಾರ್ಯಕರ್ತೆಯರು ಮೂರು ದಿನಗಳ ಕಾಲ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ. ನೂರಾರು ಆಶಾ ಕಾರ್ಯಕರ್ತೆಯರು ನಮ್ಮ ಕಷ್ಟಗಳನ್ನು ಸರ್ಕಾರ ನೋಡಲಿ ನಾವು ಪಡುವ ಶ್ರಮದ ಪ್ರತಿಫಲ ಕನಿಷ್ಠ ವೇತನ ಸರ್ಕಾರ ನೀಡಲೆಂದು ಸರ್ಕಾರಕ್ಕೆ ಇದೆ ವೇಳೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷೆ ಸರಸ್ವತಮ್ಮ ಹಾಗೂ ಕಾರ್ಯಕರ್ತೆ ಪಾರ್ವತಮ್ಮ ಮಾತನಾಡಿ ಎಷ್ಟೇ ಒತ್ತಡ ಇದ್ದರೂ ಆರೋಗ್ಯ ಸಮಸ್ಯೆ ಇದ್ದರೂ ಕೂಡ ಆಶಾ ಕಾರ್ಯಕರ್ತೆಯರು ತಮ್ಮ ಕೆಲಸಗಳ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಇನ್ನು ಕೋವಿಡ್ ಸಮಯದಲ್ಲಿ ಎಲ್ಲರೂ ಮನೆಯಲಿದ್ದರೆ ಆಶಾ ಕಾರ್ಯಕರ್ತೆಯರು ಬೀದಿಯಲ್ಲಿ ಜನರ ಸೇವೆ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 13 at 12.18.58 PM

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಜಿ.ಪಂ. ಕಾರು ಚಾಲಕ ಬಾಬು ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ: ಕಾಂಗ್ರೆಸ್‌ನಿಂದ ಪ್ರತಿಭಟನೆ

ಇನ್ನೂ ಹಗಲಿರುಳು ಶ್ರಮಿಸಿರುವ ನಮ್ಮ ಶ್ರಮದ ಪ್ರತಿಫಲ ನೀಡಲು ಸರ್ಕಾರಕ್ಕೆ ಕಾಳಜಿಯಿಲ್ಲ ಇಂತಹ ಪರಿಸ್ಥಿತಿಯಲ್ಲಿ ನಮ್ಮ ನೋವು ಯಾರ ಬಳಿ ತೋರಿಕೊಳ್ಳಲ್ಲಿ ಎಂದು ಅಳಲು ತೋಡಿಕೊಂಡ ಅವರು ಕನಿಷ್ಠ ವೇತನ ಜೊತೆಗೆ ಗೌರವ ಧನ ಹೆಚ್ಚಿಸಬೇಕು,ಜನರ ಸೇವೆಗೆ ಸದಾ ಮುಂದಿರುವ ಆಶಾ ಕಾರ್ಯಕರ್ತೆಯರಿಗ ಗೌರವಪೂರ್ವಕವಾಗಿ ಸರ್ಕಾರ ನಡೆಸಿಕೊಳ್ಳಬೇಕು ಎಂದರು.

ಜಿಲ್ಲಾ ಕಾರ್ಯದರ್ಶಿ ರೇಷ್ಮ, ಮಂಜುಳಾ, ಲಕ್ಷ್ಮಿ, ಜಯಮ್ಮ, ಸುಶೀಲಮ್ಮ, ಸುಜಾತ, ಯುವಜನ ಮುಖಂಡರಾದ ಜಯಣ್ಣ, ರಾಜಶೇಖರ್ ಮತ್ತು ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...