ಚಿಕ್ಕಬಳ್ಳಾಪುರ | ಅಂತರ್ಜಲ ಮಟ್ಟ ಕುಸಿತ; ಬರದ ನಡುವೆ ಜಲಕ್ಷಾಮದ ಭೀತಿ

Date:

ರಾಜ್ಯಾದ್ಯಂತ ಬರದ ಛಾಯೆ ಆವರಿಸಿರುವ ನಡುವೆ ಬೇಸಿಗೆಯ ಆರಂಭದಲ್ಲೇ ಹಲವೆಡೆ ಜಲಕ್ಷಾಮದ ಭೀತಿ ಶುರುವಾಗಿದೆ. ಮಿತಿಮೀರಿದ ಅಂತರ್ಜಲ ಬಳಕೆಯಿಂದ ಅಂತರ್ಜಲ ಮಟ್ಟದಲ್ಲಿ ವರ್ಷದಿಂದ ವರ್ಷಕ್ಕೆ ಕುಸಿತ ಕಾಣುತ್ತಿದೆ ಎಂದು ಅಂತರ್ಜಲ ಮೌಲೀಕರಣ ವರದಿಯಿಂದ ತಿಳಿದುಬಂದಿದೆ.

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಅತಿಯಾದ ಅಂತರ್ಜಲ ಬಳಕೆಯಾಗಿರುವುದು ಅಂತರ್ಜಲ ಮಟ್ಟ ಕುಸಿತಕ್ಕೆ ಕಾರಣ ಎಂದು ಅಂತರ್ಜಲ ಮೌಲೀಕರಣ ವರದಿಗಳು ಹೇಳಿವೆ.

ಅಂತರ್ಜಲ ಮೌಲೀಕರಣ ವರದಿಯ ಪ್ರಕಾರ ಚಿಕ್ಕಬಳ್ಳಾಪುರ ಜಿಲ್ಲೆಯ 6 ತಾಲೂಕುಗಳಲ್ಲಿ ಫೆಬ್ರವರಿ 2023ರಲ್ಲಿ 17.52 ಮೀಟರ್ ಇದ್ದ ಸರಾಸರಿ ಸ್ಥಿರ ಅಂತರ್ಜಲ ನೀರಿನ ಮಟ್ಟವು, ಫೆಬ್ರವರಿ 2024ರಲ್ಲಿ 32.66 ಮೀಟರ್‌ನಷ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಫೆಬ್ರವರಿ 2023ರ ವರ್ಷಕ್ಕೆ ಹೋಲಿಸಿದರೆ 2024ರ ಫೆಬ್ರವರಿ ವರ್ಷದಲ್ಲಿ ಅಂತರ್ಜಲ ಮಟ್ಟ ಇಳಿಕೆಯಾಗಿರುವುದು ಕಂಡುಬಂದಿದ್ದು, ಸರಾಸರಿ -18.14ರಷ್ಟು ಅಂತರ್ಜಲ ಮಟ್ಟ ಇಳಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲಾಖೆ ಮಾಹಿತಿ ಪ್ರಕಾರ ಬಾಗೇಪಲ್ಲಿ ತಾಲೂಕಿನಲ್ಲಿ- 4.05, ಚಿಂತಾಮಣಿ ತಾಲೂಕಿನಲ್ಲಿ- 14.75, ಚಿಕ್ಕಬಳ್ಳಾಪುರ ತಾಲೂಕಿನಲ್ಲಿ- 22.45, ಗುಡಿಬಂಡೆ ತಾಲೂಕಿನಲ್ಲಿ- 13.23, ಗೌರಿಬಿದನೂರು ತಾಲೂಕಿನಲ್ಲಿ- 13.33, ಶಿಡ್ಲಘಟ್ಟ ತಾಲೂಕಿನಲ್ಲಿ- 41.05ರಷ್ಟು ಅಂತರ್ಜಲ ಮಟ್ಟ ಇಳಿಕೆ ಕಂಡಿದೆ.

ಅಂತರ್ಜಲ ಇಳಿಕೆಗೆ ಕಾರಣ : ಕಳೆದ ಎರಡ್ಮೂರು ವರ್ಷಗಳಲ್ಲಿ ಅತಿಯಾದ ಮಳೆಯಿಂದ ಕೆರೆ-ಕಟ್ಟೆಗಳು ತುಂಬಿದ್ದವು. ನೀರಿನ ಅಭಾವ ಕಂಡಿರಲಿಲ್ಲ. ಆದರೆ, ಈ ಬಾರಿ ಸಮಯಕ್ಕೆ ಆಗಬೇಕಾದ ಮಳೆ ಆಗದೆ, ರಾಜ್ಯಾದ್ಯಂತ ಬರಗಾಲ ಆವರಿಸಿದೆ. ಇದೀಗ ಬೇಸಿಗೆಯ ಬಿಸಿಲು ಆರಂಭವಾಗಿದೆ. ಕೆರೆ ಕಟ್ಟೆಗಳು ಬರಿದಾಗಿವೆ. ಈ ಕಾರಣದಿಂದ ರೈತರು ತೋಟ, ಬೆಳೆದ ಬೆಳೆಯನ್ನು ಉಳಿಸಿಕೊಳ್ಳಲು ಕೃಷಿ ಪಂಪ್‌ಸೆಟ್‌ಗಳನ್ನೇ ಅವಲಂಬಿಸಿದ್ದು, ಹೆಚ್ಚಿನ ಅಂತರ್ಜಲ ಬಳಕೆಯಾಗುತ್ತಿದೆ. ಇದರಿಂದ ಅಂತರ್ಜಲ ಮಟ್ಟ ಕುಸಿತಗೊಂಡಿದೆ ಎಂಬುದು ಭೂ ವಿಜ್ಞಾನಿಗಳ ಅಭಿಪ್ರಾಯ.

ಅಂತರ್ಜಲ ಅಸಮತೋಲನದ ನಿವಾರಣೆ ಹೇಗೆ : ಕುಸಿತ ಕಂಡಿರುವ ಅಂತರ್ಜಲವನ್ನು ಹೆಚ್ಚಳ ಮಾಡಲು ಅಂತರ್ಜಲ ಮರುಪೂರಣ ವಿಧಾನಗಳನ್ನು ಅನುಸರಿಸಬೇಕು. ಮಳೆ ನೀರು ಇಂಗಿಸುವಿಕೆ, ಚೆಕ್‌ ಡ್ಯಾಂ, ಇಂಗು ಗುಂಡಿ, ಕೃಷಿಹೊಂಡ, ಬದು ನಿರ್ಮಾಣ ಇತ್ಯಾದಿ ವಿಧಾನಗಳನ್ನು ಅನುಸರಿಸುವ ಮೂಲಕ ಅಂತರ್ಜಲ ಅಸಮತೋಲವನ್ನು ನಿವಾರಿಸಬಹುದು.

“ಎರಡು ವರ್ಷದ ಹಿಂದೆ ಅತಿಯಾದ ಮಳೆ ಮತ್ತು ಮರುಪೂರಣ ಮಾಡಿದ ಹಿನ್ನೆಲೆ ಸರಾಸರಿ 50 ಮೀಟರ್‌ ನೀರು ಇತ್ತು. ಕಳೆದ ಬಾರಿಯಂತೆ ಈ ವರ್ಷ ಮಳೆಯಾಗಿಲ್ಲದ ಕಾರಣ ಅಂತರ್ಜಲ ಮಟ್ಟದಲ್ಲಿ ಕುಸಿತ ಕಂಡುಬಂದಿದೆ. ಅಂತರ್ಜಲ ಬಳಕೆ ಕಡಿಮೆಯಾಗಬೇಕು. ಮರುಪೂರಣ ವಿಧಾನಗಳಿಂದ ಅಂತರ್ಜಲ ಮಟ್ಟದಲ್ಲಿ ಸುಧಾರಣೆ ಕಾಣಬಹುದು” ಎನ್ನುತ್ತಾರೆ ಹಿರಿಯ ಭೂ ವಿಜ್ಞಾನಿ ಬೋರಪ್ಪ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಮಾಜದಲ್ಲಿ ಸಮಾನತೆ, ಭಾತೃತ್ವ ಮೂಡಿಸುವುದು ಪ್ರತಿಯೊಬ್ಬ ಮಹಿಳೆಯ ಪಾತ್ರ: ಮೈತ್ರೇಯಿ ಕೆ

ಒಟ್ಟಾರೆಯಾಗಿ, ಬರಗಾಲ, ಕೆರೆಗಳ ಬತ್ತುವಿಕೆ ಮತ್ತು ಅಂತರ್ಜಲದ ಅತಿಯಾದ ದುರ್ಬಳಕೆಯಿಂದ ಅಂತರ್ಜಲ ಕುಸಿತ ಕಂಡಿದ್ದು, ಜಲಕ್ಷಾಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಂತರ್ಜಲದ ಹಿತಮಿತ ಬಳಕೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಅಂತರ್ಜಲ ಮಟ್ಟದ ಸುಧಾರಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...