ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

Date:

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಸಾಹಿತ್ಯ ಸೇವಕ, ಸಂಶೋಧಕ, ಸಂಘಟಕ ಡಾ.ಕೈವಾರ ಶ್ರೀನಿವಾಸ್ ಅವರಿಗೆ ಪ್ರತಿಷ್ಠಿತ ʼಕನ್ನಡಸಿರಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಸಮ್ಮೇಳನದ ಉದ್ಘಾಟನೆಯನ್ನು ಪೀಠಾಧಿಪತಿ ಸುಬುದೇಂದ್ರ ತೀರ್ಥ ಮಹಾಸ್ವಾಮಿಗಳು ನೆರವೇರಿಸಿದರು.

ಡಾ. ಕೈವಾರ ಶ್ರೀನಿವಾಸ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ʼಮನೆಯಂಗಳದಲ್ಲಿ ನುಡಿಸಿರಿ, ಶಾಲೆಯಂಗಳದಲ್ಲಿ ನುಡಿಸಿರಿ, ಕಸಾಪ ನಡಿಗೆ, ವನಸಿರಿ ನುಡಿಸಿರಿ, ತತ್ವಾಮೃತ ಉದ್ಯಾನವನದಲ್ಲಿ ಸಂಧ್ಯಾರಾಗ ಗಾನಸಿರಿʼ ಕಾರ್ಯಕ್ರಮಗಳ ಮೂಲಕ ಕನ್ನಡವನ್ನು ಜನಜೀವನದ ನಿತ್ಯೋತ್ಸವವಾಗಿ ಹರಡಿದ ಶ್ರಮಕ್ಕೆ ಈ ಗೌರವ ಸಂದಿದೆ. ಅವರು ಗುಡಿಬಂಡೆ ಸಿರಿ, ಚಿಕ್ಕಬಳ್ಳಾಪುರ ಸಿರಿ, ಕೈವಾರ ಸಿರಿ, ಚಿಕ್ಕಬಳ್ಳಾಪುರ ಜಿಲ್ಲಾ ಕಸಾಪ ಹೆಜ್ಜೆ ಗುರುತುಗಳು ಮುಂತಾದ ಅನೇಕ ಕೃತಿಗಳ ಕತೃ. ಜತೆಗೆ ಭೂತಾನ್ ದೇಶದ ಸಾಂಸ್ಕೃತಿಕ ಉತ್ಸವದಲ್ಲಿ ʼಮ್ಯಾನ್ ಆಫ್ ದಿ ಇಯರ್ʼ, ಚಾಮರಾಜನಗರ ಕನ್ನಡ ಸಾಹಿತ್ಯ ಪರಿಷತ್ತಿನಿಂದ ʼಗಡಿಸೇನಾನಿʼ, ಗುರುಕುಲ ಪ್ರತಿಷ್ಠಾನದಿಂದ ʼಸಾಹಿತ್ಯ ರತ್ನʼ ಅಲ್ಲದೆ ಕನ್ನಡ ಸೇವಾಮಾಣಿಕ್ಯ, ಕನ್ನಡ ಪಯಸ್ವಿನಿ, ಕನ್ನಡ ಸೇವಾರತ್ನ, ಹೆಮ್ಮೆಯ ಕನ್ನಡಿಗ, ಕೃಷ್ಣದೇವರಾಯ ಪ್ರಶಸ್ತಿ, ಬಲಿಜ ತರಂಗಿಣಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರು ಅನೇಕ ಸಂಘ-ಸಂಸ್ಥೆಗಳ ನೂರಾರು ಗೌರವ ಸನ್ಮಾನಗಳಿಗೂ ಕೂಡ ಭಾಜನರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮ್ಮೇಳನದಲ್ಲಿ ಮುಂದಿನ ಅಂತಾರಾಜ್ಯ ಸಮ್ಮೇಳನವನ್ನು ಗೋವಾ ಸಮುದ್ರದ ನಡುವೆ ಹಡಗಿನಲ್ಲಿ ಆಯೋಜಿಸಲಾಗುವುದೆಂದು ಚಿಕ್ಕಮಗಳೂರು ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ಘೋಷಣೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತಿಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಿರುಗೇಟು

ವಿಶೇಷ ಅತಿಥಿಗಳಾಗಿ ಅಯೋಧ್ಯ ರಾಮಲಲ್ಲಾ ಶಿಲ್ಪಿ ಡಾ.ಅರುಣ್ ಯೋಗಿರಾಜ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ, ಗೌರವ ಕಾರ್ಯದರ್ಶಿ ಮದನಗೌಡ, ಸಮ್ಮೇಳನಾಧ್ಯಕ್ಷ ಡಾ.ಪ್ರದೀಪ್ ಕುಮಾರ್ ಹೆಬ್ರಿ, ಆಂಧ್ರ ಘಟಕದ ಅಧ್ಯಕ್ಷ ವಕೀಲ ಅಂಜನ್ ಕುಮಾರ್, ತೆಲಂಗಾಣ ಘಟಕದ ಅಧ್ಯಕ್ಷ ಡಾ.ಗುಡಗುಂಟಿ ವಿಠ್ಠಲ್ ಜೋಶಿ, ಚಿಕ್ಕಮಗಳೂರು ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್, ಮಹಾರಾಷ್ಟ್ರ ಘಟಕದ ಅಧ್ಯಕ್ಷ ಸೋಮಶೇಖರ ಜಮಶೆಟ್ಟಿ, ಗೋವಾ ಘಟಕದ ಅಧ್ಯಕ್ಷ ಡಾ.ಸಿದ್ದಣ್ಣ ಸಂಗಪ್ಪ ಮೇಟಿ ಮುಂತಾದ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...