ಚಿಕ್ಕಬಳ್ಳಾಪುರ | ಒಕ್ಕಲಿಗ ಸಮುದಾಯದ ಸ್ಥಳೀಯ ನಾಯಕರಿಗೆ ಟಿಕೆಟ್ ನೀಡಿ: ಕೋನಪ್ಪ ರೆಡ್ಡಿ ಒತ್ತಾಯ

Date:

ಯಾವ ಪಕ್ಷ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡುತ್ತದೆಯೋ, ಅಂತಹ ಪಕ್ಷಕ್ಕೆ ನಮ್ಮ ಸಮುದಾಯ ಬೆಂಬಲ ನೀಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಕೋನಪ್ಪ ರೆಡ್ಡಿ ಕರೆ ನೀಡಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಪ್ರಸ್ತುತ ಬಿಜೆಪಿಯು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಕ್ರಿಯಾಶೀಲ ನಾಯಕ ಪ್ರತಾಪ್ ಸಿಂಹ ಸೇರಿದಂತೆ ಮುಂತಾದವರಿಗೆ ಟಿಕೆಟ್ ಕೊಡದೆ ಸಮುದಾಯವನ್ನು ಕಡೆಗಣಿಸಿದೆ. ಸ್ಥಳೀಯ ಒಕ್ಕಲಿಗ ನಾಯಕರಿಗೆ ಆದ್ಯತೆ ಕೊಟ್ಟಿಲ್ಲ. ಹಾಗಾಗಿ ನಮಗೆ ಎಲ್ಲಿ, ಯಾವ ಪಕ್ಷ, ಯಾವ ಸರ್ಕಾರ ಆದ್ಯತೆ ನೀಡುತ್ತದೆಯೋ ಅಂತಹ ಪಕ್ಷಕ್ಕೆ ನಾವು ಬೆಂಬಲ ಕೊಡುತ್ತೇವೆ” ಎಂದು ಪುನರು‌ಚ್ಛರಿಸಿದರು.

“ಸಮುದಾಯ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ನಮ್ಮ ಸಮುದಾಯವನ್ನು ನಿರ್ಲಕ್ಷಿಸುವ ಪಕ್ಷವನ್ನು ನಮ್ಮ ಸಮುದಾಯ ನಿರ್ಲಕ್ಷ್ಯ ಮಾಡುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಶೇ.16ರಷ್ಟು ಮಂದಿ ಒಕ್ಕಲಿಗ ಸಮುದಾಯದವರಿದ್ದಾರೆ. ನಮಗೆ ಪ್ರಾತಿನಿಧ್ಯ ಕೊಡಬೇಕು. ಕೊಡದಿದ್ದಲ್ಲಿ ನಮಗೆ ಆಧ್ಯತೆ ನೀಡುವ ಕಡೆ ಸಮುದಾಯ ಹೋಗಬೇಕು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು 7.45 ಲಕ್ಷ ಒಕ್ಕಲಿಗ ಮತದಾರರಿದ್ದಾರೆ. ಬಿಜೆಪಿಯಲ್ಲಿ ಉಳಿದಿರುವುದು ಚಿಕ್ಕಬಳ್ಳಾಪುರ ಕ್ಷೇತ್ರ ಒಂದೇ. ಆದ್ದರಿಂದ ಈ ಬಾರಿ ಒಕ್ಕಲಿಗ ಸಮುದಾಯದ ಸ್ಥಳೀಯರಿಗೆ ಟಿಕೆಟ್ ನೀಡಬೇಕು” ಎಂದು ಒತ್ತಾಯಿಸಿದರು.

“ಸರ್ಕಾರದ ಜಾತಿಗಣತಿ ನಿರ್ಧಾರ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ಇದರಿಂದ ನಮ್ಮ ಸಮುದಾಯಕ್ಕೆ ಸರ್ಕಾರಿ ಕೆಲಸ ಗಗನಕುಸುಮ ಆಗುತ್ತದೆ. ಇಷ್ಟು ದಿನ ಸ್ವತಃ ಡಿಸಿಎಂ ಡಿಕೆಶಿ ಅವರೇ ಜಾತಿಗಣತಿಯನ್ನು ಮಾಡದಂತೆ ತಡೆದಿದ್ದಾರೆ. ಜಾತಿ ಗಣತಿಗೆ ನಮ್ಮ ಸಮುದಾಯದ ಸಂಪೂರ್ಣ ವಿರೋಧವಿದೆ” ಎಂದು ಸರ್ಕಾರದ ನಡೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದೇಸು ಗೇಮು ಚವ್ಹಾಣ ಕಾಂಗ್ರೆಸ್‌ಗೆ ಮರು ಸೇರ್ಪಡೆ

ಸುದ್ದಿಗೋಷ್ಟಿಯಲ್ಲಿ ಶಿವಾರೆಡ್ಡಿ, ನಾಗರಾಜ ರೆಡ್ಡಿ, ಕೃಷ್ಣ ರಾಜ ರೆಡ್ಡಿ, ಒಕ್ಕಲಿಗ ಸಂಘದ ಮತ್ತೊಬ್ಬ ನಿರ್ದೇಶಕ, ಒಕ್ಕಲಿಗ ಸಮುದಾಯ ಭವನದ ಕಾರ್ಯದರ್ಶಿ ಬೈರಾರೆಡ್ಡಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...