ಚಿಕ್ಕಬಳ್ಳಾಪುರ | ಸರ್ಕಾರಿ ನೌಕರರು ತಮ್ಮ ಹುದ್ದೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು: ಷಡಕ್ಷರಿ

Date:

ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದಿಲ್ಲ‌. ಸರ್ಕಾರಿ ನೌಕರಿ ಎಂದರೆ ಶ್ರೇಷ್ಠ ಹಾಗೂ ಪವಿತ್ರವಾದ ಹುದ್ದೆಯಾಗಿದ್ದು, ಸರ್ಕಾರಿ ನೌಕರರು ತಮ್ಮ ಹುದ್ದೆಗಳ ಪವಿತ್ರತೆಯನ್ನು ಕಾಪಾಡಬೇಕು ಎಂದು ಚಿಕ್ಕಬಳ್ಳಾಪುರ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ತಟ್ಟಹಳ್ಳಿ ಕ್ರಾಸ್ ಬಳಿಯಿರುವ ಕೋಮುಲ್ ಗಾರ್ಡನ್ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಶಿಕ್ಷಕ ಕೆ ವಿ ನಾರಾಯಣಸ್ವಾಮಿಯವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

“ಸರ್ಕಾರಿ ನೌಕರಿ ಸಿಕ್ಕ ಅವಕಾಶವನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು. ತಾವು ಅಲಂಕರಿಸುವಂತಹ ಹುದ್ದೆಗೆ ನ್ಯಾಯ ಒದಗಿಸಿಕೊಡಬೇಕು. ಇತ್ತಿಚಿಗೆ ಸರ್ಕಾರಿ ನೌಕರರು ಸಾಕಷ್ಟು ಸಮಸ್ಯೆಗಳು ಹಾಗೂ ಸವಾಲುಗಳನ್ನೂ ಕೂಡ ಎದುರಿಸುತ್ತಿದ್ದಾರೆ. ಅವುಗಳನ್ನು ಬಗೆಹರಿಸಲು ಸರ್ಕಾರಿ ನೌಕರರ ಸಂಘ ನಿರಂತರವಾಗಿ ಶ್ರಮಿಸುತ್ತಿದೆ. ವ್ಯವಸ್ಥೆಯಲ್ಲಿ ತುಂಬಾನೆ ಬದಲಾವಣೆಗಳಾಗುತ್ತಿವೆ. ಕೆಲಸದಲ್ಲಿ ತಂತ್ರಜ್ಞಾನವೂ ಹೆಚ್ಚಾಗುತ್ತಿದೆ. ಎಲ್ಲವನ್ನೂ ಅಳವಡಿಸಿಕೊಂಡು ಕೆಲಸ ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾವಿರಾರು ಸಂಖ್ಯೆ ನೌಕರರು ಒಪಿಎಸ್ ಜಾರಿಗಾಗಿ ಹೋರಾಟ ಮಾಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಒಪಿಎಸ್ ಯೋಜನೆಯನ್ನು ಜಾರಿ ಮಾಡುವಂತೆ ನೌಕರರ ಸಂಘ ಒತ್ತಾಯ ಮಾಡುತ್ತದೆ. ಇನ್ನೂ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿದ್ದಂತಹ ಕೆ ವಿ ನಾರಾಯಣಸ್ವಾಮಿಯವರು ಇದೀಗ ವಯೋನಿವೃತ್ತಿ ಹೊಂದಿದ್ದು, ನಮ್ಮ ಸಂಘಕ್ಕೂ ಕೂಡ ನಷ್ಟವಾಗಿದೆ. ಅವರಂತೆಯೇ ನೌಕರರ ಸಂಘದ ಪದಾಧಿಕಾರಿಗಳು ಸಂಘವನ್ನು ಮುನ್ನೆಡೆಸಿಕೊಂಡು ಹೋಗಬೇಕು” ಎಂದರು.

ಬಳಿಕ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಮಾತನಾಡಿ, “ಇಂದು ನಿವೃತ್ತಿಯಾಗಿರುವ ಕೆ ವಿ ನಾರಾಯಣಸ್ವಾಮಿಯವರು, ತಮ್ಮ ಅಧಿಕಾರಾವಧಿಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಇಂದು ಅವರ ಕೆಲಸ ಇಡೀ ಜಿಲ್ಲೆಗೆ ಮಾದರಿಯಾಗಿದೆ. ಸದಾ ಸರ್ಕಾರಿ ನೌಕರರಿಗಾಗಿ ದುಡಿದ ನಾರಾಯಣಸ್ವಾಮಿಯವರು ನಿವೃತ್ತಿಯಾಗಿದ್ದೇನೆಂದು ಸುಮ್ಮನಿರದೇ, ಸಮಾಜದಲ್ಲಿ ತೊಡಗಿಸಿಕೊಂಡು ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅವರ ನಿವೃತ್ತಿ ಜೀವನ ಸುಖಮಯ ಹಾಗೂ ಆರೋಗ್ಯಕರವಾಗಿರಲಿ” ಎಂದು ಶುಭ ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿದ್ದರಾಮಯ್ಯ ಚಾಲನೆ

ಇನ್ನೂ ಇದೇ ಕಾರ್ಯಕ್ರಮದಲ್ಲಿ ಗುಡಿಬಂಡೆ ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಶಿಕ್ಷಕ ಮುನಿಕೃಷ್ಣಪ್ಪ ಹಾಗೂ ಖಜಾಂಚಿಯಾಗಿ ಪಶುಸಂಗೋಪನೆ ಇಲಾಖೆಯ ನಟರಾಜ್ ಅವರುಗಳಿಗೆ ನೇಮಕಾತಿ ಪತ್ರವನ್ನು ನೌಕರರ ಸಂಘದ ರಾಜ್ಯಾಧ್ಯಕ್ಷರು ನೀಡಿದರು. ನಿವೃತ್ತಿಯಾದ ಕೆ ವಿ ನಾರಾಯಣಸ್ವಾಮಿ ಅವರನ್ನು ವೇದಿಕೆಯಲ್ಲಿದ್ದ ಗಣ್ಯರು ಆತ್ಮೀಯವಾಗಿ ಸನ್ಮಾನಿಸಿದರು.

ಈ ವೇಳೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸರ್ಕಾರಿ ನೌಕರರು, ವಿವಿಧ ಮುಖಂಡರು, ವಿವಿಧ ತಾಲೂಕುಗಳ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಗುಡಿಬಂಡೆ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...