ಚಿಕ್ಕಬಳ್ಳಾಪುರ | ಅಂತಾರಾಷ್ಟ್ರೀಯ ಸಸ್ಯ ಆರೋಗ್ಯ ದಿನಾಚರಣೆ

Date:

ಹೇಗೆ ಸಸ್ಯಗಳ ಆರೋಗ್ಯವನ್ನು ರಕ್ಷಿಸುವುದರಿಂದಾಗಿ ಅದು ಜನರ ಹಸಿವನ್ನು ನಿವಾರಿಸಿ ಬಡತನವನ್ನು ಕಡಿಮೆ ಮಾಡುವುದರ ಜತೆಗೆ ಜೀವವೈವಿಧ್ಯತೆ ಮತ್ತು ಪರಿಸರವನ್ನೂ ರಕ್ಷಿಸುತ್ತದೆ ಮತ್ತು ಈ ಮೂಲಕ ಆರ್ಥಿಕ ಅಭಿವೃದ್ಧಿಗೂ ಇದು ಸಹಾಯ ಮಾಡುತ್ತದೆ ಎಂಬುದರ ಕುರಿತು ಜಾಗತಿಕ ಜಾಗೃತಿ ಮೂಡಿಸಲು ವಿಶ್ವಸಂಸ್ಥೆಯು ಪ್ರತಿ ವರ್ಷ ಮೇ 12ರಂದು ಅಂತಾರಾಷ್ಟ್ರೀಯ ಸಸ್ಯ ಆರೋಗ್ಯ ದಿನ ಎಂದು ಘೋಷಿಸಿದೆ.

ಈ ಅಂತಾರಾಷ್ಟ್ರೀಯ ಸಸ್ಯ ಆರೋಗ್ಯ ದಿನ 2024ರ ಅಂಗವಾಗಿ ಮೇ 10ರಿಂದು 14ರವರೆಗೆ ಸಮಗ್ರ ಸಸ್ಯಪೀಡಾ ನಿರ್ವಹಣಾ ಕೇಂದ್ರ, ಬೆಂಗಳೂರು ಇವರಿಂದ ಕೋಲಾರದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲ ಕಾರ್ಯಕ್ರಮಗಳನ್ನು ಸಸ್ಯಪೀಡಾ ನಿರ್ವಹಣಾ ಕೇಂದ್ರ, ಬೆಂಗಳೂರು ಮುಖ್ಯಸ್ಥ ಡಾ. ಅಲಂಗೀರ್ ಸಿದ್ದಿಕಿ ಇವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವರ್ಗದವರು ಯಶಸ್ವಿಯಾಗಿ ಆಯೋಜಿಸಿದ್ದರು. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಳ್ಳಹಳ್ಳಿ ಗ್ರಾಮದಲ್ಲಿ ಅನೇಕ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು.

ಸಸ್ಯ ಆರೋಗ್ಯ ದಿನಾಚರಣೆ 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರಿಗಾಗಿ ಜೈವಿಕ ಕೀಟನಾಶಕಗಳು, ವಿವಿಧ ಬಗೆಯ ಪರೋಪಕಾರಿ ಕೀಟಗಳು ಮತ್ತು ಪರಭಕ್ಷಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಇದರ ಕುರಿತು ನುರಿತ ತಜ್ಞರು ರೈತರಿಗೆ ಮಾಹಿತಿ ನೀಡಿದರು. ರೈತ ಸಮ್ಮೇಳನದಲ್ಲಿ ಸಮಗ್ರ ಸಸ್ಯಪೀಡಾ ನಿರ್ವಹಣಾ ಕೇಂದ್ರದ ತಜ್ಞರು ಹಾಗೂ ಡಾ ನರಸರೆಡ್ಡಿ, ಸಹಾಯಕ ಪ್ರಾಧ್ಯಾಪಕರು, ಕೃಷಿ ಕಾಲೇಜು, ಚಿಂತಾಮಣಿ ಹಾಜರಿದ್ದು ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸಿದರು.

ಸಸ್ಯ ಆರೋಗ್ಯ ದಿನಾಚರಣೆ 2

ಈ ಕಾರ್ಯಕ್ರಮದ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಮುಳ್ಳಹಳ್ಳಿ ಗ್ರಾಮ ಚಿಂತಾಮಣಿ ತಾಲೂಕು ಮತ್ತು ಶ್ರೀ ವಿದ್ಯಾನಿಕೇತನ ಶಾಲೆ, ಮೆಡಹಳ್ಳಿ, ಬೆಂಗಳೂರು, ಶಾಲಾ ಮಕ್ಕಳಿಗೆ ಚಿತ್ರಕಲೆ, ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ 60 ಮಕ್ಕಳು ಪಾಲ್ಗೊಂಡಿದ್ದರು. ವಿಜೇತರಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಲೋಕಾಯುಕ್ತ ದಾಳಿ; ಸಿ ಎಸ್ ಪುರದ ಕಂದಾಯ ನಿರೀಕ್ಷಕರ ಬಂಧನ

ಮೇ 14ರಂದು ರೈತರಿಗಾಗಿ ಕೀಟನಾಶಕಗಳ ಸುರಕ್ಷಿತ ಬಳಕೆ ಮತ್ತು ಜೇನುಸಾಕಣೆ ಬಗ್ಗೆ ಅಂತರ್ಜಾಲದ ಮೂಲಕ ವೆಬಿನಾರ್ ಅನ್ನು ಆಯೋಜಿಸಲಾಗಿತ್ತು. ರಾಜ್ಯದ ಹಲವು ಜಿಲ್ಲೆಗಳಿಂದ ರೈತರು ಭಾಗವಹಿಸಿ ಮಾಹಿತಿಯನ್ನು ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...