ಚಿಕ್ಕಬಳ್ಳಾಪುರ | ಪ್ರವಾದಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಶಾಂತಿ, ಸೌಹಾರ್ದತೆ ಸಂದೇಶ

Date:

ಪ್ರತಿ ಧರ್ಮವು ಶಾಂತಿ, ಸೌಹಾರ್ದತೆ ಸಂದೇಶವನ್ನು ಸಾರುತ್ತದೆಯಾದರೂ, ಕೆಲ ಕಿಡಿಗೇಡಿಗಳ ಪಿತೂರಿಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಅಂತಹವರ ಮಾತುಗಳಿಗೆ ಕಿವಿಗೊಡದೆ, ಎಲ್ಲರೂ ಒಗ್ಗಟ್ಟಾಗಿ ಶಾಂತಿಯ ಸಂದೇಶ ಸಾರಬೇಕು. ಪ್ರತಿ ಹಬ್ಬಗಳನ್ನು ಜಾತಿ-ಭೇದಭಾವ ಮರೆತು ಎಲ್ಲರೂ ಒಟ್ಟಾಗಿ ಆಚರಿಸುತ್ತಿದ್ದೇವೆ. ನಮ್ಮಲ್ಲಿ ವಿಷಬೀಜ ಬಿತ್ತಲು ಯತ್ನಿಸುವವರ ಮಾತು ಕೇಳದೆ, ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಸಾಗಿದರೆ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವೆಂದು ಡಾ. ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ರಾಜ್ಯದಕ್ಷ ಎಂ ಎಂ ಭಾಷ ತಿಳಿಸಿದರು.

ಚಿಕ್ಕಬಳ್ಳಾಪುರದಲ್ಲಿ ಈದ್ ಮಿಲಾದ್ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅಬ್ದುಲ್ ಕಲಾಂ ಫೌಂಡೇಶನ್ ಹಾಗೂ ಆಲ್ ಇಂಡಿಯಾ ಮಿಲಿ ಕೌನ್ಸಿಲ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದರು.

“ಇಸ್ಲಾಂ ಧರ್ಮವೇ ಶಾಂತಿ, ಸೌಹಾರ್ದತೆ, ಮಾನವೀಯತೆ ಎಂಬ ಸಂದೇಶವನ್ನು ಸಾರುತ್ತದೆ. ಪ್ರವಾದಿ ಮುಹಮ್ಮದ್ ಅವರು ಸಮಾಜ ಪರಿವರ್ತನೆಗಾಗಿ ಸೌಮ್ಯದ ಮಾರ್ಗವನ್ನು ಅನುಸರಿಸಿ, ಎಲ್ಲೆಡೆ ಶಾಂತಿ ನೆಲಸಬೇಕು ಎಂಬುದೇ ಅವರ ಆಶಯವಾಗಿತ್ತು. ನಾವೂ ಕೂಡ ಅವರ ಹಾದಿಯಲ್ಲಿ ನಡೆಯಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1500ನೇ ಈದ್ ಮಿಲಾದ್ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಶಾಂತಿ ಸಂದೇಶ ಸಾರಲಾಯಿಗಿದ್ದು, ದಯೆ, ಒಗ್ಗಟ್ಟು, ಪ್ರೀತಿ, ಬದ್ಧತೆ ಇಸ್ಲಾಂ ಧರ್ಮದ ಮೂಲ ತತ್ವಗಳಾಗಿದ್ದು, ಗಳಿಕೆಯ ಒಂದು ಭಾಗವನ್ನು ಬಡವರಿಗೆ ನೀಡುವಂತೆ ಇಸ್ಲಾಂ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗಣೇಶ ವಿಸರ್ಜನೆ ದಿನ ಡಿಜೆ ಬಳಸಿದರೂ ಎಸ್‌ಪಿ ಮೌನ: ಸಾರ್ವಜನಿಕರ ಆಕ್ರೋಶ

“ನಿರ್ಗತಿಕರು ಹಾಗೂ ಅನಾಥರ ಜೀವನದಲ್ಲಿ ಬೆಳಕನ್ನು ತರುವಂತೆ, ಅವರನ್ನು ಉತ್ತಮ ಜೀವನ ಸಾಗಿಸಲು ಪ್ರೇರೇಪಿಸುವ ಧರ್ಮವೇ ಇಸ್ಲಾಂ” ಎಂದು ಹೇಳಿದರು.

ಈ ವೇಳೆ ಅಬ್ದುಲ್ ರೆಹಮಾನ್ ಸಾಬ್, ಸೈದ್ ಅಮಾನುಲ್ಲಾ,ರಾಜಶೇಖರ್, ಹಾಶಿಂ ಬನ್ನೂರು, ಅಲಿಪೂರ್ ಜರಾರ್ ಹುಸೇನ್, ಕಳವಾರ ಶ್ರೀಧರ್, ಇಬ್ರಾಹಿಂ, ತಬಕೀರ್, ಅಮ್ಜದ್, ಸಫೀರ್, ಅರ್ಬಾಜ್, ಅಬುಬಕರ್, ನವಾಜ಼್, ರಹಮತ್, ಆಲ್ತಾಫ್, ರೋಷನ್ ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...