ಚಿಕ್ಕಬಳ್ಳಾಪುರ | ಸುಧಾಕರ್ ದುರ್ವರ್ತನೆಗೆ ಬೇಸತ್ತು ಪಕ್ಷಾಂತರ: ಮಾಜಿ ಶಾಸಕ ಬಚ್ಚೇಗೌಡ

Date:

ಮಾಜಿ ಸಚಿವ ಸುಧಾಕರ್ ಅವರು ಹಲವು ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿ, ಕಿರುಕುಳ ಕೊಟ್ಟಿದ್ದಾರೆ. ಇದರಿಂದ ನಮ್ಮ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ‌ಹಾಗಾಗಿ ನನ್ನೊಂದಿಗೆ ಹಲವು ಕಾರ್ಯಕರ್ತರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎಂದು ಮಾಜಿ ಶಾಸಕ ಕೆ ಪಿ ಬಚ್ಚೇಗೌಡ ಹೇಳಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಈ ಹಿಂದೆ ಸುಧಾಕರ್ ಸಚಿವರಾಗಿದ್ದಾಗ ನಮ್ಮ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ನಮ್ಮ ನಾಯಕ ಕುಮಾರಸ್ವಾಮಿ ಅವರ ಸೋಲಿಗೂ ಅವರೇ ಪ್ರಮುಖ ಕಾರಣ. ಕುಮಾರಸ್ವಾಮಿ ಅವರು ಕ್ಷಮಿಸಿರಬಹುದು. ಆದರೆ ನಾವು ಕ್ಷಮಿಸಿಲ್ಲ. ಆದ್ದರಿಂದ ಯಾವುದೇ ಕಾರಣಕ್ಕೂ ಸುಧಾಕರ್‌ಗೆ ಮತ ನೀಡುವುದಿಲ್ಲ. ಅವರಿಗೆ ಮತ್ತೊಮ್ಮೆ ಮತ ನೀಡಿ ಕಿರುಕುಳ ಅನುಭವಿಸಲು ನಾವು ತಯಾರಿಲ್ಲ” ಎಂದು ಬೇಸರದಿಂದ ನುಡಿದರು.

“ಇದೇ ಕಾರಣಕ್ಕೆ ಪಕ್ಷದ ಹಲವು ಸಭೆಗಳಲ್ಲಿ ನಾನು ಭಾಗವಹಿಸಲಿಲ್ಲ. ವರಿಷ್ಠ ದೇವೇಗೌಡರು ಸುಧಾಕರ್‌ಗೆ ಟಿಕೆಟ್ ಸಿಗುವುದಿಲ್ಲ ಎಂದಿದ್ದರು. ಆದರೆ ಈಗ ಅವರ ಮಾತು ಸುಳ್ಳಾಗಿದೆ. ಆದ ಕಾರಣ ನಮಗೆ ಸುಧಾಕರ್ ಗೆಲ್ಲಿಸಲು ಮನಸಿಲ್ಲ. ಸಭೆಯಲ್ಲಿ ನಮ್ಮ ಕಾರ್ಯಕರ್ತರ ತೀರ್ಮಾನದಂತೆ ನಾವು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಯೋಜನೆ ಇದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೈತ್ರಿ ಅಭ್ಯರ್ಥಿ ಈವರೆಗೂ ನಮ್ಮನ್ನು ಭೇಟಿ ಮಾಡಿಲ್ಲ. ಕಾಂಗ್ರೆಸ್ ಅಭ್ಯರ್ಥಿ ನಮ್ಮನ್ನು ಭೇಟಿ ಮಾಡಿ ಸಹಕಾರ ಕೋರಿದ್ದಾರೆ. ಅವರಿಗೆ ನಮ್ಮ ಸಹಕಾರ ನೀಡುತ್ತೇವೆ. ಆದರೆ, ಸುಧಾಕರ್ ಉದ್ಧಟತನ ತೋರಿದ್ದಾರೆ. ಅಂತಹವರಿಗೆ ನಾವು ಯಾವುದೇ ಕಾರಣಕ್ಕೂ ಬೆಂಬಲ ಕೊಡುವುದಿಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ-ಚಿಕ್ಕಮಗಳೂರು ಸೇರಿದಂತೆ 14 ಕ್ಷೇತ್ರಗಳಲ್ಲಿ ಕೆಆರ್‌ಎಸ್‌ ಪಕ್ಷದಿಂದ ನಾಮಪತ್ರ ಸಲ್ಲಿಕೆ

“ಸ್ವಪಕ್ಷೀಯರಲ್ಲೇ ವಿರೋಧವಿದೆ. ಯಲಹಂಕ ಶಾಸಕ ವಿಶ್ವನಾಥ್ ಅವರ ಮನೆ ಬಾಗಿಲಿಗೆ ತೆರಳಿದರೂ ಬಾಗಿಲು ತೆರೆದಿಲ್ಲ. ಹೀಗಿರುವಾಗ ನಾವು ಬೆಂಬಲ ಕೊಡುವುದಿಲ್ಲ. ನಮಗೆ ಅಧಿಕಾರದ ಆಸೆ ಇಲ್ಲ. ಇಂದು ಪಕ್ಷ ಬಿಡುವ ಪರಿಸ್ಥಿತಿ ಬಂದಿದೆ. ಹಾಗಾಗಿ ಬಹಳ ನೋವಿನಿಂದ ಪಕ್ಷ ತೊರೆಯುತ್ತಿದ್ದೇವೆ” ಎಂದು ನೋವಿನಿಂದ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಜೆಡಿಎಸ್‌ನ ಹಲವು ಕಾರ್ಯಕರ್ತ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...