ಚಿಕ್ಕಮಗಳೂರು | ಆದಿವಾಸಿಗಳ ಬದುಕು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿಯಬೇಕು: ಚೇತನ್ ಅಹಿಂಸಾ

Date:

ಆದಿವಾಸಿ ಸಮುದಾಯಗಳಿಗೆ ನ್ಯಾಯ ಸಿಗಬೇಕು. ಸಾಂಸ್ಕೃತಿಕ ಆದಿವಾಸಿ ಆಧ್ಯಾತ್ಮಿಕ ವಿಷಗಳನ್ನು ಅರಿಯಬೇಕು ಎಂದು ಆದಿವಾಸಿ ಜನರ ಬದುಕು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿಯಬೇಕು ಎಂದು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾತನಾಡಿ, “ಇತಿಹಾಸವನ್ನು ಅರ್ಥ ಮಾಡಿಕೊಳ್ಳಬೇಕು ಅಂತ ಬಾಬಾ ಸಾಹೇಬರು ಒಂದು ಮಾತು ಹೇಳ್ತಾರೆ, ಇಂದಿಗೆ 2 ಲಕ್ಷ ವರ್ಷಗಳ ಇತಿಹಾಸ ನೋಡುತ್ತಿದ್ದೇವೆ. ಇದರಲ್ಲಿ ಮುಕ್ತವಾಗಿ ಮೂಲ ನಿವಾಸಿಗಳು ಅಥವಾ ಆದಿವಾಸಿಗಳು ಇದ್ದಾರೆ. ಇವರು ಇಂದಿಗೂ ತಳಮಟ್ಟದಲ್ಲಿ ಬದುಕುತ್ತಿದ್ದಾರೆ” ಎಂದು ಹೇಳಿದರು.

“ಅಮೆರಿಕ ಅನ್ನೋ ದೇಶ ಶ್ರೀಮಂತವಾಗಿದೆ ಎಂದರೆ, ಆದಿವಾಸಿ ಸಮುದಾಯಗಳ ಭೂಮಿಗಳನ್ನು ಕಿತ್ತುಕೊಂಡು ನರಮೇಧಗಳನ್ನಾಗಿ ಮಾಡಿ ಅವರ ಕೈಯಲ್ಲಿ ಕೆಲಸ ಮಾಡಿಸಿಕೊಂಡು
ಅವರ ಭೂಮಿಯನ್ನು ಬಂಡವಾಳ ಶಾಹಿಗಳು ಹಾಗೂ ಕಾರ್ಪೊರೇಟರ್ ಕಂಪನಿಗಳಿಗೆ ನೀಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಿವಾಸಿ ಸಮಾಗಮ 1

“10 ಸಾವಿರ ವರ್ಷಗಳಿಂದ ಪ್ರತಿರೋಧ ಆಗಿದೆ. ಬ್ರಾಹ್ಮಣ ಅಸಮಾನತೆ, ಹಿಂದೂಗಳ ಅಸಮಾನತೆ, ಭ್ರಷ್ಟಾಚಾರ, ಜಾತಿ, ವರ್ಗ, ಲಿಂಗ ತಾರತಮ್ಯ ಪ್ರಸ್ತುತ ದಿನದಲ್ಲಿ ಹೆಚ್ಚಾಗಿದೆ. ದಲಿತ, ಪ್ರತಿರೋಧವಾಗಿ ಪಾಪಾ ಪುಣ್ಯ ಇಲ್ಲದಂತಾಗಿದೆ” ಎಂದು ಹೇಳಿದರು.

“ಬಾಬಾ ಸಾಹೇಬ್, ಬಸವಣ್ಣ,‌ ಬುದ್ಧ ಅವರ ತತ್ವದೊಂದಿಗೆ ಇರಬೇಕಾಗಿದೆ. ರಾಜ್ಯ ಸರ್ಕಾರಗಳು ದಲಿತ ಆದಿವಾಸಿಗಳ ₹11 ಸಾವಿರ ಕೋಟಿ ಅನುದಾನವನ್ನು ವ್ಯಯ ಮಾಡುತ್ತಿದ್ದಾರೆ. ದಲಿತ, ಆದಿವಾಸಿಗಳಿಗೆ ಮೀಸಲಿಡಬೇಕಾದ ಅನುದಾನವನ್ನು ವ್ಯರ್ಥ ಮಾಡುತ್ತಿದ್ದಾರೆ. ಮೀಸಲಾತಿಗಳನ್ನು ಬಳಸದೆ ಜನರಿಗೆ ಮಣ್ಣೆರಚುತ್ತಿದ್ದಾರೆ” ಎಂದರು.

“ಹಾಲು ಮತದ ಕುರುಬ, ಮತ್ತಿ ಕುರುಬ ಇವರನ್ನೆಲ್ಲ ಎಸ್‌ಟಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ದಿಡ್ಡಳ್ಳಿ ಹೋರಾಟದಲ್ಲಿ ಆದಿವಾಸಿಗಳ ಗುಡಿಸಲು ಕಿತ್ತು ಎಸೆದರು. ಅದರೂ ನಿರಂತರ ಹೋರಾಟದಿಂದ ಅವರ ಬದುಕು ಕಟ್ಟಿಕೊಳ್ಳಲು ಅವಕಾಶ ಸಿಕ್ಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಲಿಂಗ ಅಸಮಾನತೆ ಭೇದಿಸಲು ಮಹಿಳೆಯರು ರಾಜಕೀಯಕ್ಕೆ ಬರಬೇಕು: ಡಾ. ವೆನ್ನೆಲ ಗದ್ದರ್

“ಆದಿವಾಸಿ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿಯಬೇಕು. ಇತ್ತೀಚೆಗೆ ಬಂದಿರುವ ಕಾಂತಾರ ಸಿನಿಮಾವನ್ನು ಹಿಂದೂ ಸಂಸ್ಕೃತಿಯೆಂದು ಹೇಳಿದರು. ಆದರೆ ಅದು ಪಂಜುರ್ಲಿ ಎನ್ನುವ ದೈವ. ಆ ದೈವಕ್ಕೆ ಆದಿವಾಸಿಗಳ 5 ಸಾವಿರ ವರ್ಷಗಳ ಇತಿಹಾಸವಿದೆ. ಸಮಾನತೆ, ನ್ಯಾಯ, ವೈಜ್ಞಾನಿಕತೆ ಮೂರು ಮುಖ್ಯವಾದ ಅಂಶವಾಗಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...