ಚಿಕ್ಕಮಗಳೂರು | ಮತದಾರರ ಓಲೈಕೆಗೆ ಧಾರ್ಮಿಕ ಕಾರ್ಯಕ್ರಮಗಳ ಮೊರೆ

Date:

  • ಚುನಾವಣೆಯಲ್ಲಿ ತಮ್ಮನ್ನೇ ಬೆಂಬಲಿಸುವಂತೆ ಮತದಾರರಿಂದ ಆಣೆ-ಪ್ರಮಾಣ
  • ಮತ ಸೆಳೆಯಲು ಮಹಿಳೆಯರಿಗೆ ಬಾಗಿನ ನೀಡುತ್ತಿರುವ ರಾಜಕೀಯ ಮುಖಂಡರು

ವಿಧಾನಸಭಾ ಚುನಾವಣೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿರುವ ನಾನಾ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ಓಲೈಕೆಗೆ ಧಾರ್ಮಿಕ ಕಾರ್ಯಕ್ರಮಗಳ ಮೊರೆ ಹೋಗುತ್ತಿದ್ದಾರೆ.

ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಸತ್ಯನಾರಾಯಣ ಪೂಜೆ ಮತ್ತು ಮಹಿಳೆಯರಿಗೆ ಬಾಗಿನ ವಿತರಣೆಯಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ. ಶೃಂಗೇರಿ ವಿಧಾನಸಭಾ ಕ್ಷೇತ್ರವು ಶಾರದಾ ಪೀಠ ಇರುವ ಧಾರ್ಮಿಕ ಸ್ಥಳವಾಗಿದೆ. ಈ ಭಾಗದ ಜನರು ಮಠಗಳು ಮತ್ತು ಧಾರ್ಮಿಕ ಸಂಸ್ಥೆಗಳ ಮೇಲೆ ಹೆಚ್ಚು ನಂಬಿಕೆ ಹೊಂದಿದ್ದಾರೆ. ಜನರ ಈ ನಂಬಿಕೆಗಳನ್ನು ರಾಜಕೀಯ ಮುಖಂಡರು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಹುನ್ನಾರ ನಡೆಸುತ್ತಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಸತ್ಯನಾರಾಯಣ ಪೂಜೆ ಆಯೋಜಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರನ್ನು ಆಹ್ವಾನಿಸಿದರೆ, ಜೆಡಿಎಸ್ ನಾಯಕರು ಮತದಾರರಿಗೆ ಬಾಗಿನ ನೀಡಿದ್ದಾರೆ. ಮತದಾರರು ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಬೆಂಬಲಿಸುವಂತೆ ದೇವರ ಹೆಸರಿನಲ್ಲಿ ಕೆಲವು ರಾಜಕೀಯ ಮುಖಂಡರು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಷವೊಂದು ಆಯೋಜಿಸಿದ್ದ ಪೂಜೆಯಲ್ಲಿ ಪಾಲ್ಗೊಂಡಿದ್ದೆವು. ಅಲ್ಲಿ ನಾಯಕರು ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಿಸುತ್ತಿದ್ದಾರೆ. ಇದರಿಂದ ರಾಜಕೀಯ ನಾಯಕರಿಗೆ ಮತದಾರರ ಮೇಲೆ ನಂಬಿಕೆ ಇಲ್ಲದಿರುವುದು ಕಂಡುಬರುತ್ತಿದೆ. ಜನರು ಇದನ್ನು ಅರ್ಥಮಾಡಿಕೊಳ್ಳಬೇಕು” ಎಂದು ಶೃಂಗೇರಿಯ ನಿವಾಸಿ ಶಿವರಾಜ್ ಹೇಳಿದ್ದಾರೆ.

“ಪಕ್ಷಗಳು ಮತದಾರರನ್ನು ಆಕರ್ಷಿಸುವುದು ಮತ್ತು ಮನವೊಲಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ರಾಜಕೀಯ ಪಕ್ಷಗಳು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ. ನಾವು ಅಂತಹ ಚಟುವಟಿಕೆಗಳಲ್ಲಿ ಭಾಗಿಯಾಗದಿದ್ದರೆ ಮತದಾರರು ನಮ್ಮನ್ನು ಪ್ರಶ್ನಿಸುತ್ತಾರೆ” ಎಂದು ರಾಜಕೀಯ ಮುಖಂಡರೊಬ್ಬರು ಹೇಳಿದ್ದಾರೆ.

ಶೃಂಗೇರಿ ಕ್ಷೇತ್ರದಿಂದ ಬಿಜೆಪಿಯಿಂದ ಡಿ ಎನ್ ಜೀವರಾಜ್, ಕಾಂಗ್ರೆಸ್ ನಿಂದ ಟಿ ಡಿ ರಾಜೇಗೌಡ, ಜೆಡಿಎಸ್‌ನಿಂದ ಸುಧಾಕರ್ ಎಸ್ ಶೆಟ್ಟಿ ಕಣದಲ್ಲಿದ್ದಾರೆ. ಈ ಮೂವರಲ್ಲಿ ಜೀವರಾಜ್ ಮತ್ತು ರಾಜೇಗೌಡ ಈ ಹಿಂದೆ ಸ್ಪರ್ಧಿಸಿದ್ದರೆ, ಶೆಟ್ಟಿ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.

ಜೀವರಾಜ್ ಅವರು ಪ್ರಸ್ತುತದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದು, 1994ರಿಂದ ಈವರೆಗೆ ಆರು ಬಾರಿ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಮೂರು ಬಾರಿ ಆಯ್ಕೆಯಾಗಿ ಸಚಿವರೂ ಆಗಿದ್ದಾರೆ. ಟಿ ಡಿ ರಾಜೇಗೌಡ ಹಾಲಿ ಶಾಸಕ. ಸುಧಾಕರ ಎಸ್ ಶೆಟ್ಟಿ ಅವರು ಕೈಗಾರಿಕೋದ್ಯಮಿಯಾಗಿದ್ದು, ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಜೀವರಾಜ್ ಅವರಿಗೆ ಇದು ಏಳನೇ ಚುನಾವಣೆ ಮತ್ತು ರಾಜೇಗೌಡರಿಗೆ ಇದು ಮೂರನೇ ಚುನಾವಣೆಯಾಗಿದೆ. ಶೆಟ್ಟಿ ಅವರು ಕೊಪ್ಪ ತಾಲೂಕಿನವರಾಗಿದ್ದರೂ, ಮೈಸೂರಿನಲ್ಲಿ ನೆಲೆಸಿದ್ದರಿಂದ ವಿಧಾನಸಭಾ ಕ್ಷೇತ್ರಕ್ಕೆ ಹೊಸ ಪರಿಚಯವಾಗಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...