ಚಿಕ್ಕಮಗಳೂರಿನ ತಿಲಕ್ ಪಾರ್ಕ್ ಸಮೀಪವಿರುವ ಹಿಂದು ಸಮುದಾಯದ ಮನೆಯೊಂದರ ಮೇಲೆ ಮುಸ್ಲಿಂ ಯುವಕರು ಕಲ್ಲು ತೂರಿದ್ದಾರೆಂದು ಆರೋಪಿಸಲಾಗಿದೆ. ಅಲ್ಲದೆ, ಮುಸ್ಲಿಂ ಯುವಕರ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆಯನ್ನೂ ನಡೆದಿದ್ದಾರೆ. ಪರಿಣಾಮ, ನಗರದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದೆ.
ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸುತ್ತಿದ್ದರು ಎಂದು ಮನೆ ಮಾಲೀಕರು ಆರೋಪಿಸಿದ್ದಾರೆ. ಸೋಮವಾರ ರಾತ್ರಿಯೂ ಕಲ್ಲು ತೂರಾಟ ನಡೆದಿದೆ. ಈ ಬೆನ್ನಲ್ಲೇ, ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಥಳಿಸಿದ್ದಾರೆ ಮತ್ತು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.
ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಮೇಲೆ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳುಗಳು ಆಯೋಪಿಸಿದ್ದಾರೆ.
ಕಲ್ಲು ತೂರಾಟಕ್ಕೊಳಗಾದ ಮನೆಯ ಮಾಲೀಕ ಗಗನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. “ಕಳೆದ ಕೆಲ ದಿನಗಳಿಂದ ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮನೆ ಮೇಲೆ ಕಲ್ಲು ಎಸೆಯಲಾಗುತ್ತಿದೆ. ನಾವು ಭಯದಲ್ಲಿ ಜೀವನ ನಡೆಸುವಂತಾಗಿದೆ. ಸೋಮವಾರ ರಾತ್ರಿ ಕೂಡ ಮನೆ ಮೇಲೆ ಕಲ್ಲು ಎಸೆದಿದ್ದಾರೆ. ಅದನ್ನು ನನ್ನ ತಾಯಿ ಮತ್ತು ತಂಗಿ ಪ್ರಶ್ನಿಸಿದ್ದು, ಅವರೊಂದಿಗೆ ಯುವಕರು ಜಗಳ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.
ಎಂದು ಹೇಳಿದ್ದಾರೆ. ಸದ್ಯ ಪ್ರಕರಣದ ತನಿಖೆಯನ್ನು ಬಸವನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಕೈಗೊಂಡಿದ್ದಾರೆ.
ಕ್ಷುಲ್ಲಕ ಕಾರಣ ಮತ್ತು ಆರೋಪ ಮಾಡಿ, ಮುಸ್ಲಿಂ ಯುವಕರ ಮೇಲೆ ಬಜರಂಗದಳದ ಕಾರ್ಯಕರ್ಯರು ಹಲ್ಲೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಸ್ಎಇಪಿಐ ಒತ್ತಾಯಿಸಿದೆ.
ನಗರದ ತಿಲಕ್ ಪಾರ್ಕ್ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಎಂಎಸ್ಪಿ ಜಯಕುಮಾರ್ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಪೊಲೀಸ್ ಠಾಣೆ ಮತ್ತು ಆಸ್ಪತ್ರೆ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.




