ಚಿಕ್ಕಮಗಳೂರು | ಶಾಸಕರಿಗೆ ಪದೇಪದೆ ಮನವಿ ಮಾಡಿದರೂ, ಡಾಂಬರೀಕರಣವಾಗದ ರಸ್ತೆ

Date:

ಪ್ರಕೃತಿ ಸೌಂದರ್ಯ ಪ್ರವಾಸಿ ತಾಣವಾಗಿರುವ ಮಲೆನಾಡಿನ ಚಿಕ್ಕಮಗಳೂರು ಭಾಗದಲ್ಲಿ ವಾಸ ಮಾಡುತ್ತಿರುವ ಜನರು ಅದೆಷ್ಟೋ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ನಾವು ಪ್ರತಿದಿನ ನೋಡಬಹುದು.

Screenshot 2025 01 31 12 28 13 70 6012fa4d4ddec268fc5c7112cbb265e7
ಇಲ್ಲಿಯವರೆಗೂ ಡಾಂಬರೀಕರಣ ಕಾಣದ ರಸ್ತೆ.

ಚಿಕ್ಕಮಗಳೂರು ಜಿಲ್ಲೆಯ, ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗಲಗಂಚಿ ಗ್ರಾಮದ ನಿವಾಸಿಗಳು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಅದರಲ್ಲೂ ನಿತ್ಯ ಓಡಾಡಲು ಹಾಗೂ ದಿನಸಿ ಸಾಮಗ್ರಿಗಳನ್ನು ಕೊಂಡೊಯ್ಯಲು ಸೂಕ್ತವಾದ ರಸ್ತೆ ಎನ್ನುವುದನ್ನೇ ಇಲ್ಲಿನ ನಿವಾಸಿಗಳು ಕಂಡಿಲ್ಲ.

Screenshot 2025 01 31 12 28 21 34 6012fa4d4ddec268fc5c7112cbb265e7
ವಿದ್ಯಾರ್ಥಿಗಳು ಶಾಲಾ,ಕಾಲೇಜಿಗೆ ಹೋಗಲು ಸೂಕ್ತ ರಸ್ತೆ ಇಲ್ಲದೆ ಪರದಾಡುತ್ತಿರುವ ದೃಶ್ಯ.

“ಹಾಗಲಗಂಚಿ ಗ್ರಾಮದಲ್ಲಿ ಸುಮಾರು 70ಕ್ಕೂ ಅಧಿಕ ಕುಟುಂಬದವರು ವಾಸ ಮಾಡುತ್ತಿದ್ದಾರೆ. ಎಂಟರಿಂದ ಹತ್ತು ಗ್ರಾಮಗಳ ಜನರು ಹಾಗಲಗಂಚಿ ಗ್ರಾಮದ ಮಾರ್ಗವಾಗಿಯೇ ಸಾಗಬೇಕು. ಹಾಗೆಯೇ ಶೃಂಗೇರಿ ಮತ್ತು ಕೊಪ್ಪ ತಾಲೂಕಿಗೆ ಹಾದು ಹೋಗುವ ಸಂಪರ್ಕ ರಸ್ತೆಯಾಗಿದೆ. ಸಾವಿರಾರು ಸಂಖ್ಯೆಯ ಜನರು ಈ ಜಾಗದಲ್ಲಿ ಓಡಾಡುತ್ತಾರೆ. ನೂರಾರು ಜನರು ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ಆದರೆ ನಮಗೆ ಈವರೆಗೂ ಯಾವುದೇ ಸರ್ಕಾರದಿಂದ ಸವಲತ್ತು ಸಿಕ್ಕಿಲ್ಲ. ಅದರಲ್ಲೂ ರಸ್ತೆಗಳು ಹಳ್ಳ, ದಿಣ್ಣೆಗಳಿಂದ ಕೂಡಿವೆ. ಮಳೆಗಾಲ ಬಂತೆಂದರೆ ಇಲ್ಲಿ ಪರಿಸ್ಥಿತಿ ನೋಡಲಾಗುವುದೇ ಇಲ್ಲ. ಏಕೆಂದರೆ ಮಕ್ಕಳ ಪಠ್ಯ ಪುಸ್ತಕಗಳಿಗೆ ಕೆಸರು ಅಂಟಿರುತ್ತದೆ, ರಸ್ತೆಯ ಅವ್ಯವಸ್ಥೆ ಕಂಡು ಆಟೋದವರು ನಮ್ಮ ಗ್ರಾಮಕ್ಕೆ ಬರುವುದಿಲ್ಲ” ಎಂದು ಗ್ರಾಮಸ್ಥರು ಈ ದಿನ.ಕಾಮ್ನೊಂದಿಗೆ ತಮ್ಮ ನೋವನ್ನು ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 01 31 12 28 39 95 6012fa4d4ddec268fc5c7112cbb265e7
ಸರಿಯಾದ ರಸ್ತೆ ಇಲ್ಲದ ಕಾರಣ ಹಾಗೂ ವಾಹನಗಳು ಬಾರದೆ ಇರುವುದರಿಂದ, ರಸ್ತೆಯಲ್ಲಿರುವ ಕಲ್ಲುಗಳನ್ನು ಸರಿಸಿ ನಡೆದುಕೊಂಡು ಹೋಗುತ್ತಿರುವ ವಿದ್ಯಾರ್ಥಿಗಳು.

“ಆಟೋದವರಿಗೆ, ನಾವು ನಮ್ಮ ಗ್ರಾಮಕ್ಕೆ ಏಕೆ ಬರುವುದಿಲ್ಲವೆಂದರೆ. ʼನಿಮ್ಮ ಗ್ರಾಮಕ್ಕೆ ಬಾಡಿಗೆ ಬಂದರೆ ₹100ರಿಂದ ₹300 ಬಾಡಿಗೆ ಪಡೆಯುತ್ತೇವೆ. ಗಾಡಿ ಕೆಟ್ಟು ನಿಂತರೆ ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗುತ್ತದೆʼ ಎನ್ನುತ್ತಾರೆ. ಸದ್ಯದ ಮಟ್ಟಿಗಿನ ಸಾರಿಗೆ ವ್ಯವಸ್ಥೆಗೆ ನಮ್ಮ ಊರಿನ ಕಾರ್ತಿಕ್ ಎಂಬುವವರು ಆಟೋ ತೆಗೆದುಕೊಂಡಿದ್ದಾರೆ. ಅವರ ಹೊಸ ಗಾಡಿಗೂ ಸಮಸ್ಯೆಯಾಗಿದೆ. ನಮ್ಮೂರಿಂದ ಬಸ್ ಬರುವ ಜಾಗಕ್ಕೆ ಹೋಗಬೇಕಂದ್ರೆ 5 ನಿಮಿಷ ಸಾಕು. ಆದರೆ ಈ ರಸ್ತೆಯಿಲ್ಲಿ ತಲುಪಲು 30-40 ನಿಮಿಷ ಬೇಕಾಗುತ್ತದೆ” ಎಂದು ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದರು.

Screenshot 2025 01 31 12 28 50 80 6012fa4d4ddec268fc5c7112cbb265e7 1
ನನ್ನ ಮಗಳು ಗರ್ಭವತಿಯಾದರೂ, ಈ ರಸ್ತಯಿಂದ ತವರು ಮನೆಗೆ ಬರುವ ಆಸೆ ಮಣ್ಣು ಪಾಲಾಗಿದೆ: ಗ್ರಾಮದ ಶಾರದಮ್ಮ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮುಖ್ಯವಾಹಿನಿಗೆ 6 ಜನ ನಕ್ಸಲ್: ಶ್ರಮಿಸಿದ ಪ್ರತಿಯೊಬ್ಬರಿಗೆ ಅಭಿನಂದನೆ ಸಲ್ಲಿಸಿದ ಶಾಂತಿಗಾಗಿ ನಾಗರಿಕ ವೇದಿಕೆ

“ವೃದ್ಧರು ಈ ರಸ್ತೆಯಿಲ್ಲಿ ತುಂಬಾ ಸಲ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಹಾಗೆಯೇ ನಮ್ಮ ಗ್ರಾಮದ ಅನಾರೋಗ್ಯ ಪೀಡಿತರನ್ನು ಈ ರಸ್ತೆಯ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಿಲ್ಲ. ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅದೆಷ್ಟೋ ಮಂದಿ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ” ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಇನ್ನು ಮುಂದೆಯಾದರೂ, ಈ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶೃಂಗೇರಿ ಕ್ಷೇತ್ರದ ಶಾಸಕರು ಗಮನವಹಿಸಿ ಹಾಗಲಗಂಚಿ ಗ್ರಾಮದ ಸಮಸ್ಯೆಯನ್ನು ಬಗೆಹರಿಸುವರೇ ಎಂಬುದನ್ನು ಕಾದು ನೋಡಬೇಕಿದೆ” ಎಂದರು.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...