ಮದ್ಯ ಸೇವಿಸಿ ಆಪರೇಷನ್ ವಾರ್ಡ್‌ನಲ್ಲಿ ನಿದ್ರೆಗೆ ಜಾರಿದ ವೈದ್ಯ; ರೋಗಿಗಳ ಪರದಾಟ

Date:

ಶಸ್ತ್ರಚಿಕಿತ್ಸೆ ಮಾಡಲು ತೆರಳಿದ್ದ ವೈದ್ಯ ಕುಸಿದು ಬಿದ್ದಿದ್ದು, ಆತ ಆಸ್ಪತ್ರೆಗೆ ಮದ್ಯ ಸೇವಿಸಿ ಬಂದಿದ್ದಾರೆಂದು ರೋಗಿಗಳು ಮತ್ತು ಅವರ ಪೋಷಕರು ಆರೋಪಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ನಡೆದಿದೆ.

ಬುಧವಾರ, ಒಂಬತ್ತು ಮಹಿಳೆಯರು ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಅನಸ್ತೇಷಿಯಾ ಕೂಡ ನೀಡಲಾಗಿತ್ತು. ಆಪರೇಷನ್‌ ಮಾಡಲು ಬಂದ ವೈದ್ಯ ಬಾಲಕೃಷ್ಣ ಶಸ್ತ್ರಚಿಕಿತ್ಸಾ ವಾರ್ಡ್‌ನಲ್ಲಿಯೇ ಕುಸಿದುಬಿದ್ದಿದ್ದಾರೆ. ಪರಿಣಾಮ ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ.

ವೈದ್ಯ ಬಾಲಕೃಷ್ಣ ಆಸ್ಪತ್ರೆಯಲ್ಲಿಯೇ ಮದ್ಯಪಾನ ಮಾಡಿ ಬಂದಿದ್ದರು. ಮದ್ಯದ ಅಮಲಿನಲ್ಲಿ ಕುಸಿದು ಬಿದ್ದಿದ್ದಾರೆ. ಮಹಿಳೆಯರಿಗೆ ಬೆಳಗ್ಗೆ 8 ಗಂಟೆಗೆ ಅನಸ್ತೇಷಿಯಾ ಕೊಟ್ಟಿದ್ದರು. ಆದರೆ, ಮಧ್ಯಾಹ್ನ 2 ಗಂಟೆಯಾದರೂ ಆಪರೇಷನ್ ಮಾಡಿರಲಿಲ್ಲ. ಏನಾಯಿತೆಂದು ವಾರ್ಡ್‌ಗೆ ತೆರಳಿ ನೋಡಿದರೆ, ವೈದ್ಯ ನಿದ್ರೆ ಮಾಡುತ್ತಿದ್ದರು ಎಂದು ಮಹಿಳೆಯರ ಸಂಬಂಧಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈದ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅಸ್ವಸ್ಥಗೊಂಡಿದ್ದ ವೈದ್ಯನನ್ನು ಆಸ್ಪತ್ರೆಯ ಸಿಬ್ಬಂದಿಗಳು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.

“ವೈದ್ಯನ ವಿರುದ್ಧ ಮದ್ಯಪಾನ ಮಾಡಿದ ಆರೋಪ ಕೇಳಿಬಂದಿದೆ. ಘಟನೆ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಉಮೇಶ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...