ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಗೆಲುವಿನ ಬಗ್ಗೆ ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ವಿಧಾನಪರಿಷತ್ ಸದಸ್ಯರಾದ ಸಿ.ಟಿ. ರವಿ ಹಾಗೂ ಎಸ್.ಎಲ್. ಭೋಜೇಗೌಡ ವಿರುದ್ಧ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡಿಸಿದರು.
ರಾಜಕಾರಣದಲ್ಲಿ ಸ್ವಾಭಿಮಾನ ಎನ್ನುವುದು ಮುಖ್ಯವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿ.ಟಿ. ರವಿ ಅವರನ್ನು ಸೋಲಿಸಿದ ಖುಷಿಯಲ್ಲಿ ಹಾಲಿನ ಅಭಿಷೇಕ ಮಾಡಿಸಿಕೊಂಡಿದ್ದ ಭೋಜೇಗೌಡರು, ಇಂದು ಅದೇ ರವಿ ಅವರ ಹೆಗಲ ಮೇಲೆ ಕೈಹಾಕಿಕೊಂಡು ‘ಭಾಯ್ ಭಾಯ್’ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ, ನಾಲ್ಕು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ ಕೆಲಸ ಮಾಡಿದ ಅನುಭವವಿರುವ ಸಿ.ಟಿ. ರವಿ ಅವರು ಕಾರ್ಯಕರ್ತರು ಸ್ಪರ್ಧಿಸಬೇಕಾದ ಚುನಾವಣೆಯಲ್ಲಿ ತಾವೇ ಕಣಕ್ಕಿಳಿದಿರುವುದು ಅವರ ರಾಜಕೀಯ ತೋರಿಸುತ್ತದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಜ. 21ರಂದು ವಿದ್ಯುತ್ ವ್ಯತ್ಯಯ
ಸಿ.ಟಿ. ರವಿಯನ್ನು ಮರಿ ಎಂದು ಭಾವಿಸಿದ್ದೆವು, ಆದರೆ ಅವರೀಗ ಸ್ವಯಂಘೋಷಿತ ಕುರಿ ಮರಿಯಾಗಿದ್ದಾರೆ. ಅವರಿಗೆ ಅಷ್ಟೊಂದು ಆಸೆಯಿದ್ದರೆ ತಮ್ಮ ಮಗನನ್ನು ಪಿಸಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿಸಲಿ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್ ದೇವರಾಜ್ ಅಣುಕಿಸಿದರು. ಈ ವೇಳೆ ಕಾಂಗ್ರೆಸ್ ತಾಲೂಕು ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತಿಯಲ್ಲಿದ್ದರು.





