ಚಿಕ್ಕಮಗಳೂರು | ಕೋಟೆ ಗ್ರಾಮದ ರೈತರಿಂದ ಲಕ್ಕೆ ಹಬ್ಬ ಆಚರಣೆ

Date:

ಚಿಕ್ಕಮಗಳೂರು ಜಿಲ್ಲೆಯ ಕೋಟೆ ಗ್ರಾಮದಲ್ಲಿ ರೈತಾಪಿ ವರ್ಗದವರೇ ಹೆಚ್ಚಾಗಿ ವಾಸಿಸುತ್ತಿದ್ದು, ದೀಪಾವಳಿಯ ಅಂದರೆ ನರಕಚತುರ್ದಶಿಯ ಹಿಂದಿನ ದಿನ ರೈತರು ತಮ್ಮ ತಮ್ಮ ಜಮೀನುಗಳಿಗೆ ಹೋಗಿ ಮೊದಲು ಭೂಮಿಗೆ ಲಕ್ಕೆ ಸೊಪ್ಪು ಮತ್ತು ಹೂವನ್ನು ಇಟ್ಟು ಪೂಜೆಯನ್ನು ಮಾಡಿ, ಮನೆಗೆ ಲಕ್ಕೆಯನ್ನು ಸಡಗರ ಸಂಭ್ರಮದಿಂದ ತರುವ ಹಬ್ಬವೇ ಲಕ್ಕೆಹಬ್ಬ. ಈ ಹಬ್ಬವನ್ನು ನಮ್ಮ ಹಿರಿಕರು ಹೇಗೆ ನಡೆಸಿಕೊಂಡು ಬಂದಿದ್ದಾರೆ. ಹಾಗೆಯೇ ನಾವೂ ಕೂಡ ಮುಂದುವರಿಸಿಕೊಂಡು ಬರುತ್ತಿದ್ದೇವೆ ಎಂದು ಚಿಕ್ಕಮಗಳೂರು ಜಿಲ್ಲಾ ಹಳ್ಳಿಕಾರ ಯುವಕರ ಸಂಘದ ಅಧ್ಯಕ್ಷ ಕೋಟೆ ಸೋಮಣ್ಣ ಹೇಳಿಕೊಂಡಿದ್ದಾರೆ.

ರೈತರು ಬೆಳೆದಿರುವ ದವಸಧಾನ್ಯಗಳಾದ ಭತ್ತ, ರಾಗಿ, ಜೋಳ, ಕಬ್ಬು, ನವಣೆ, ಲಕ್ಕೆ ಸೊಪ್ಪು, ಹುಲ್ಲು, ಉತ್ರಾಣಿ ಕಡ್ಡಿ, ಸಿರಿಧಾನ್ಯಗಳು ಸೇರಿದಂತೆ ಇನ್ನು ಹಲವು ತರಹದ ಸಸ್ಯಗಳನ್ನು ಸೇರಿಸಿ ಕಟ್ಟಿಕೊಂಡು ಗ್ರಾಮಕ್ಕೆ ತಂದು ಬೆಳಿಗ್ಗೆ ಲಕ್ಕೆಯನ್ನು “ನಮ್ಮ ಹಬ್ಬ, ನಮ್ಮ ಸಂಸ್ಕೃತಿ, ನಮ್ಮ ಹೆಮ್ಮೆ” ಎಂದು ಕೋಟೆ ಗ್ರಾಮದಲ್ಲಿ ಚಿಕ್ಕವರು ದೊಡ್ಡವರು ಎನ್ನದೆ ಹಲವಾರು ವರ್ಷಗಳಿಂದ ಸಾಂಪ್ರದಾಯಿಕವಾಗಿ ಎಲ್ಲರೂ ಸೇರಿ ಲಕ್ಕೆಯನ್ನು ಹೊತ್ತು ಕೋಟೆಯ ಪ್ರಮುಖ ಬೀದಿಗಳಲ್ಲಿ ʼನಾಸಿಕ್ ಡ್ರಂ ಸೆಟ್‌ʼನೊಂದಿಗೆ ಮೆರವಣಿಗೆ ಹೊರಟು, ಗ್ರಾಮದಲ್ಲಿರುವ ಕರಿಗಲ್ಲು, ಶ್ರೀ ರಾಮಾಂಜನೇಯ ಸ್ವಾಮಿ, ಚೌಡಮ್ಮ, ಭೂತಪ್ಪ, ಉಗ್ರಾಣದಮ್ಮ, ಎಲ್ಲಮ್ಮ ದೇವಿ, ಶ್ರೀ ವೀರಭದ್ರೇಶ್ವರ ಸ್ವಾಮಿ, ಶ್ರೀ ಪಾತಾಳೇಶ್ವರ ಸ್ವಾಮಿ ಹಾಗೂ ಕೋಟೆಯ ರಾಜಬೀದಿ ಎಂದೇ ಕರೆಸಿಕೊಳ್ಳುವ ಕೋಟೆಯ ಐತಿಹಾಸಿಕ ಸುಗ್ಗಿಕಲ್ಲಿನ ಹತ್ತಿರ ಇರುವ ಶ್ರೀ ಹರಿಹರೇಶ್ವರ ಸ್ವಾಮಿ ದೇವಸ್ಥಾನಗಳಿಗೆ ಪ್ರದಕ್ಷಿಣೆ ಹಾಕಿ ಲಕ್ಕೆಯನ್ನು ಅರ್ಪಿಸಲಾಗುತ್ತದೆ. ದೇವರಲ್ಲಿ ಈ ಗ್ರಾಮಕ್ಕೆ ಮತ್ತು ನಾಡಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತ ಕಾರ್ಯಕ್ರಮವನ್ನು ಕೊನೆಗೊಳಿಸಲಾಗುತ್ತದೆ.

ಮೆರವಣಿಗೆಯ ಉದ್ದಕ್ಕೂ “ಲಕ್ಕೆ ಲಕ್ಕ್ಯೋ.. ಗದ್ದೆಗೆ ಲಕ್ಕ್ಯೋ, ಗಾಣಕ್ಕೆ ಲಕ್ಕ್ಯೋ, ಭೂಮಿ ತಾಯಿಗೆ ಲಕ್ಕ್ಯೋ, ಎಂದು ಘೋಷಣೆ ಕೂಗುತ್ತ ಮೆರವಣಿಗೆಯ ಮೂಲಕ ಅವರ ಮನೆಗಳಿಗೆ ತೆಗೆದುಕೊಂಡು ಹೋಗಿ ಮಣೆಯ ಮೇಲೆ ಇರಿಸಿ, ಲಕ್ಕೆಗೆ ನೀರು ಮತ್ತು ಹಾಲನ್ನು, ಪ್ರೋಕ್ಷಣೆ ಮಾಡಿ ಪೂಜೆ ಸಲ್ಲಿಸಿ ಮನೆಯ ಮೇಲೆ ಹಾಕಿ ಸಂತೋಷ ಸಡಗರದಿಂದ ದೀಪಾವಳಿ ಆಚರಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ? ಚಾಮರಾಜನಗರ | ದೇವಸ್ಥಾನಕ್ಕೆ ದಲಿತರ ಪ್ರವೇಶ ನಿರಾಕರಣೆ, ಜಾತಿ ನಿಂದನೆ: 17 ಮಂದಿ ವಿರುದ್ಧ ಕೇಸ್ ದಾಖಲು

ಜೀವನದಲ್ಲಿ ಕಷ್ಟ, ಸುಖ, ಏಳು, ಬೀಳುಗಳನ್ನು ಎಲ್ಲರೂ ಕಂಡಿರುತ್ತೇವೆ. ಆದರೆ ವರ್ಷದಲ್ಲಿ ಒಮ್ಮೆ ಬರುವ ಹಬ್ಬ ಹರಿದಿನಗಳು ಎಲ್ಲರನ್ನೂ ತಕ್ಕಮಟ್ಟಿಗೆ ನೆಮ್ಮದಿಪಡಿಸುವ ಶುಭ ದಿನಗಳಾಗಿರುತ್ತವೆ. ಹಾಗೆಯೇ ಈ ದೀಪಾವಳಿ ಎಲ್ಲರ ಬಾಳಲ್ಲಿ ಸದಾ ಬೆಳಕಾಗಿರಲಿ ಎಂದು ಸ್ಥಳೀಯರು ಹಾರೈಸಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ರಂಗನಾಥ್, ನಗರಸಭೆ ಮಾಜಿ ಉಪಾಧ್ಯಕ್ಷ ಭುಜೇಂದ್ರ ರಾಜ್ ಅರಸ್, ಜಿಲ್ಲಾ ಹಳ್ಳಿಕಾರ ಯುವಕರ ಸಂಘದ ಅಧ್ಯಕ್ಷ ಕೋಟೆ ಸೋಮಣ್ಣ, ಹೇಮರಾಜ್, ಜೀವನ್, ರಘು ಬಾಲಯ್ಯ, ತೇಜು, ದ್ವಾರಕೀಶ್, ಮಿಲ್ಟ್ರಿ ಚಂದ್ರು, ತಿಮ್ಮಯ್ಯ, ಆನಂದ್, ಕಾರ್ಗಿಲ್ ಸೋಮಣ್ಣ, ರಘು ಸುಬ್ಬಣ್ಣ, ಶೈಲೇಂದ್ರ, ಚಂದ್ರು, ಕಿಟ್ಟಿ, ಈಶ್ವರ್ ಸೇರಿದಂತೆ ಹಲವು ಮುಖಂಡರು ಹಾಗೂ ಕೋಟೆ ಗ್ರಾಮದ ರೈತರು, ಗ್ರಾಮಸ್ಥರು, ಮೆರವಣಿಗೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...