ಚಿಕ್ಕಮಗಳೂರು | ಎರಡು ವರ್ಷದಿಂದ ಗ್ರಾ.ಪಂ. ಉಪಾಧ್ಯಕ್ಷನಲ್ಲೇ ಉಳಿದ ಅಂಗನವಾಡಿ ಶೌಚಾಲಯದ ಬೀಗದ ಕೀಲಿ!

Date:

ಅಂಗನವಾಡಿ ಶೌಚಾಲಯದ ಬೀಗದ ಕೀಲಿ ಎರಡು ವರ್ಷದಿಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಕೈಯಲ್ಲೇ ಉಳಿದಿದ್ದು, ಮಕ್ಕಳಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದಾಗಿದೆ. ಮಕ್ಕಳು ಶೌಚಾಲಯಕ್ಕೆ ಹೋಗಬೇಕೆಂದರೆ ಆ ಕಾಡಿನ ಮಧ್ಯೆ ಹಾಗೂ ಹಸಿರು ಗಿಡಗಂಟಿ, ಪೊದೆಗಳ ಮಧ್ಯೆ ಹೋಗಬೇಕಿದೆ.

ಅಂಗನವಾಡಿ ಬೆಳಗೋಡು

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿರುವ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಬೆಳಗೋಡು ಗ್ರಾಮ. ಈ ಗ್ರಾಮದಲ್ಲಿ ಸುಮಾರು 35ರಿಂದ 40ಕ್ಕೂ ಅಧಿಕ ಕುಟುಂಬಗಳು ವಾಸವಾಗಿವೆ. ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ಈ ಬೆಳಗೋಡು ಗ್ರಾಮದಿಂದ 15ಕ್ಕಿಂತ ಹೆಚ್ಚು ಮಕ್ಕಳು ಅಂಗನವಾಡಿಗೆ ಬರುತ್ತಾರೆ.

ಬೆಳಗೋಡು 1 1

ಸ್ಥಳೀಯ ನಿವಾಸಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಆ ಜಾಗಗಳಲ್ಲಿ ಹಾವು ಉಪಟಳಗಳು ಹಾಗೂ ಕೀಟಗಳ ಕಾಟ ಎದುರಾಗಿದೆ. ನಾವು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದೇವೆ. ನಮ್ಮ ಮಕ್ಕಳಿಗೆ ಸುರಕ್ಷತೆ ಹಾಗೂ ಅಕ್ಷರಭ್ಯಾಸ ಮಾಡಿಸುತ್ತಾರೆಂದು ಅಂಗನವಾಡಿಗೆ ಕಳುಹಿಸುತ್ತೇವೆ. ಆದರೆ ಇಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಹಾಗೂ ವಿದ್ಯುತ್ ವ್ಯವಸ್ಥೆ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗನವಾಡಿ ಶಿಕ್ಷಕಿ ದಾಕ್ಷಾಯಿಣಿ ಈ ದಿನ.ಕಾಮ್ ಜತೆಗೆ ಮಾತನಾಡಿ, “ಅಂಗನವಾಡಿಯಲ್ಲಿ ಸರಿಯಾಗಿ ಕುರ್ಚಿ, ಟೇಬಲ್ ವ್ಯವಸ್ಥೆ ಇಲ್ಲ. ಅಡುಗೆ ಮನೆಯ ಪಕ್ಕದಲ್ಲಿಯೇ ಅರ್ಧಂಬರ್ದ ನಿರ್ಮಿಸಿರುವ ಶೌಚಾಲಯವಿದೆ. ಇದರ ನೀರು ಹಾಗೂ ತೆರೆದಿರುವ ಪಿಟ್ ಗುಂಡಿಯಲ್ಲಿನ ನೀರು ಸೋರಿಕೆಯಿಂದ ದುರ್ವಾಸನೆ ಬೀರುತ್ತದೆ. ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದೆ. ಇಲ್ಲಿನ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಎರಡು ವರ್ಷದಿಂದ ಶೌಚಾಲಯದ ಬೀಗದ ಕೀ ಕೊಡದೆ ಅವರೇ ಇಟ್ಟುಕೊಂಡಿದ್ದಾರೆ” ಎಂದು ಆರೋಪಿಸಿದರು.

ಬೆಳಗೋಡು ಅಂಗನವಾಡಿ 1

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಲಾಡ್ಜ್‌ನಲ್ಲಿ ಕುಕ್ಕರ್ ಸ್ಫೋಟ; ದೇವಿ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಗಾಯ

“ಇತ್ತೀಚಿನ ದಿನಗಳಲ್ಲಿ ಡೆಂಘೀ ಹಾಗೂ ಮಲೇರಿಯಾದಂತಹ ರೋಗಗಳು ಎಲ್ಲೆಡೆ ಹರಡುತ್ತಿವೆ. ರಾಜ್ಯದೆಲ್ಲೆಡೆ ರೋಗಗಳು ಉಲ್ಬಣಗೊಳ್ಳುತ್ತಿವೆ. ಇಂತಹ ಸಮಯದಲ್ಲಿ ಇಲ್ಲಿನ ಅಂಗನವಾಡಿ ಸ್ಥಿತಿ ಹೇಳತೀರದಾಗಿದೆ. ಹಾಗಾಗಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸಂಬಂದಪಟ್ಟ ಅಧಿಕಾರಿಗಳು ಕೂಡಲೇ ಬೆಳಗೋಡು ಅಂಗನವಾಡಿಯತ್ತ ಹರಿಸಬೇಕು. ಸೂಕ್ತ ಕ್ರಮ ಕೈಗೊಂಡು ಅಂಗನವಾಡಿಗೆ ಮತ್ತು ಬೆಳಗೋಡು ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದರು.

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...