ಚಿಕ್ಕಮಗಳೂರು | ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿ, ಒತ್ತುವರಿ ತೆರವು ಕೈಬಿಡಿ: ಭೂ ಸಾಗುವಳಿ ಹೋರಾಟ ಸಮಿತಿ ಆಗ್ರಹ

Date:

ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಅರಣ್ಯ ಭೂಮಿ ಒತ್ತುವರಿ ತೆರವು ಕೈಬಿಡುವಂತೆ ಭೂ ಸಾಗುವಳಿ ಹೋರಾಟ ಸಮಿತಿಯಿಂದ ಮಂಗಳವಾರದಂದು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಕಡವಂತಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದಪ್ರತಿಭಟನಾಕಾರರು ಗ್ರಾ.ಪಂ. ಅಧ್ಯಕ್ಷರು, ಪಿಡಿಒ ಮತ್ತು ಮುಖ್ಯಮಂತ್ರಿ ಸಿದ್ದರಾಮ್ಯನವರಿಗೆ ಮನವಿ ಸಲ್ಲಿಸಿದ್ದಾರೆ.

“ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈಗಾಗಲೇ ಅರಣ್ಯ ಒತ್ತುವರಿ ತೆರವು ಕಾರ್ಯವನ್ನು ಕೈಗೆತ್ತಿಕೊಂಡಿದೆ. ಇದರಿಂದ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡಿರುವವರ ಬದುಕು ಆತಂತ್ರವಾಗಲಿದೆ. ಬಹುರಾಷ್ಟ್ರೀಯ ಕಂಪನಿಗಳಿಗೆ, ಕಾರ್ಪೊರೇಟ್ ಕುಟುಂಬಗಳಿಗೆ, ರಾಜಕಾರಣಿಗಳಿಗೆ ನೂರಾರು, ಸಾವಿರಾರು ಎಕರೆ ಭೂಮಿಯನ್ನು ಯಾವುದೇ ಷರತ್ತುಗಳಿಲ್ಲದೆ ಆಳೆದುಕೊಡುವ ಸರ್ಕಾರಗಳು, ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡಿರುವವರನ್ನು, ಅರಣ್ಯ ಡೀಮ್ಸ್, ಸೆಕ್ಷನ್ 4(1) ಇತ್ಯಾದಿ ಹೆಸರಲ್ಲಿ ಸಣ್ಣ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿವೆ” ಎಂದು ಪ್ತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಓಟ್ ಬ್ಯಾಂಕ್‌ಗಾಗಿ ಬಳಸಿಕೊಳ್ಳುವ ರಾಜಕೀಯ ಪಕ್ಷಗಳು ಜನರ ಜೀವನ ಭದ್ರತೆ ವಿಷಯದಲ್ಲಿ ಜಾಣ ಕುರುಡು ಪ್ರದರ್ಶಿಸುತ್ತವೆ. ಅರಣ್ಯ ಕಂದಾಯ ಇಲಾಖೆಗಳ ನಡುವೆ ಭೂಮಿಗೊಂದಲವಿದ್ದು, ಜಂಟಿ ಸರ್ವೆ ನಡೆಸದೆ ಅರಣ್ಯ ಒತ್ತುವರಿ ತೆರವಿಗೆ ಮುಂದಾಗಿದೆ. ನೂರಾರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಫಾರಂ 53, 57ರ ಆಡಿ ಅರ್ಜಿ ಸಲ್ಲಿಸಿ ಸಾಗುವಳಿ ಪತ್ರಕ್ಕಾಗಿ ಹೋರಾಟ ನಡೆಸುತ್ತಿರುವ ಸಾಗುವಳಿದಾರರಿಗೆ ಸರ್ಕಾರ ಹಕ್ಕುಪತ್ರ ನೀಡದೆ, ಅರಣ್ಯ ತೆರವು ಕಾರ್ಯಕ್ಕೆ ಮುಂದಾಗಿರುವುದು ಅವೈಜ್ಞಾನಿಕವಾಗಿದೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ದೊಡ್ಡ ಮಟ್ಟದ ಹೋರಾಟವನ್ನು ನಡೆಸುತ್ತೇವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಸೆ.5ರಂದು ಜಿ ಒ ಮಹಂತಪ್ಪನವರಿಗೆ ಶ್ರದ್ಧಾಂಜಲಿ, ನುಡಿನಮನ

ಭೂ ಸಾಗುವಳಿ ಹೋರಾಟ ಸಮಿತಿ ಉಮೇಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿದವರನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಬಾರದು. ಅರಣ್ಯ ಕಂದಾಯ ಜಂಟಿ ಸರ್ವೆ ನಡೆಸಿ, ಗಡಿ ಗುರುತಿಸಬೇಕು. ಡೀಮ್ಸ್ ಅಥವಾ ಸೆಕ್ಷನ್ 4(1) ಕೈ ಬಿಡಬೇಕು. ನೂರಾರು ವರ್ಷಗಳಿಂದ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡಿರುವವರಿಗೆ ಕೂಡಲೇ ಸಾಗುವಳಿ ಪತ್ರ ವಿತರಿಸಬೇಕು” ಎಂದು ಆಗ್ರಹಿಸಿದರು.

ಕಡವಂತಿ ಪಂಚಾಯಿತಿ ವ್ಯಾಪ್ತಿಯ ಬೊಗಸೆ, ಬಿಳುಗುಳ, ಕಡವಂತಿ, ಬಾಸಾಪುರ ಗ್ರಾಮದ ಗ್ರಾಮಸ್ಥರು, ಹೋರಾಟ ಸಮಿತಿಯ ಶಿವಣ್ಣ ಗೌಡ, ಶಿವಶಂಕರ ಗೌಡ, ಹಿರಿಯಣ್ಣ ಗೌಡ, ಮಂಜಪ್ಪ ಗೌಡ, ಬಾಸಾಪುರ ಅಣ್ಣಪ್ಪ, ಕೆ ಆರ್ ಅಣ್ಣೇಗೌಡ, ಬಿ ಎನ್ ವಿಶ್ವನಾಥ್, ಬೊಗಸೆ ಪರಮೇಶ್, ಉಮೇಶ್, ಮುಳ್ಳೇಶ್ ಗೌಡ, ಮುಕುಂದ ಶೆಟ್ಟಿ, ವಿನೋದ, ಬಿಳಗೊಳ ವಾಸು, ಬಸಾಪುರದ ಮನೋಜ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...