ಚಿಕ್ಕಮಗಳೂರು | ಸಹಕಾರ ಮಹಾಮಂಡಳಿ ನಿರ್ದೇಶಕರಾಗಿ ಆಯ್ಕೆಯಾದ ಹೆಚ್ ಎಂ ನಾರಾಯಣ್‌ರಿಗೆ ಸನ್ಮಾನ

Date:

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಚಿಕ್ಕಮಗಳೂರು ಜಿಲ್ಲೆಯ ಹೆಚ್.ಎಂ ನಾರಾಯಣ್ ಅವರಿಗೆ ಕನ್ನಡ ಸೇನೆ ಕಚೇರಿಯಲ್ಲಿ ಕಾರ್ಯಕರ್ತರಿಂದ ಸನ್ಮಾನಿಸಿ ಗೌರವಿಸಲಾಯಿತು.

“ಕನ್ನಡ ಸೇವೆಯಲ್ಲಿ ನಿರಂತರ ಶ್ರಮಿಸಿದ ಅನೇಕರಿಗೆ ರಾಜ್ಯ ಮಟ್ಟದಲ್ಲಿ ಉನ್ನತ ಸ್ಥಾನಮಾನಗಳು ದೊರೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸಮಾಜದಲ್ಲಿ ಸನ್ನಡತೆ ಹಾಗೂ ಸಹಬಾಳ್ವೆ ಹೊಂದುವ ವ್ಯಕ್ತಿತ್ವದ ಮನುಷ್ಯ ಉನ್ನತ ಶ್ರೇಣಿಯಲ್ಲಿ ಸಾಧನೆ ಮಾಡಲು ಸಾಧ್ಯ. ಹಾಗಾಗಿ ನಾರಾಯಣ್ ಅವರು ಬಡವರು, ನಿವೇಶನ ರಹಿತರು, ಹಿಂದುಳಿದ ಹಾಗೂ ಶೋಷಿತರ ಪರವಾಗಿ ಉತ್ತಮ ಕೆಲಸ ನಿರ್ವಹಿಸಲಿ. ತಮ್ಮ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಕೀರ್ತಿ ಎತ್ತಿ ಹಿಡಿಯುವಂತಾಗಲಿ” ಎಂದು ಕನ್ನಡ ಸೇನೆ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ತಿಳಿಸಿದರು.

ರಾಜ್ಯದಲ್ಲಿ ಯಾವುದೇ ಮಂಡಳಿ, ಸರ್ಕಾರ ನೇಮಕಗೊಳಿಸುವ ಸ್ಥಾನಗಳಲ್ಲಿ ಅರ್ಹರಾದವರು ಸಮಸಮಾಜ ನಿರ್ಮಿಸುವ ದೃಷ್ಟಿಯಿಂದ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ಅಂಬೇಡ್ಕರ್, ಬಸವಣ್ಣ ಹಾಗೂ ಬುದ್ಧರ ಆಶಯಗಳನ್ನು ನೆಲೆಯೂರಿಸಲು ಸಾಧ್ಯ ಎಂದು ಕನ್ನಡ ಸೇನೆ ಜಿಲ್ಲಾ ವಕ್ತಾರ ಹುಣಸೇಮಕ್ಕಿ ಲಕ್ಷ್ಮಣ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ: ಚಿಕ್ಕಮಗಳೂರು | ಗೌರಿ ಲಂಕೇಶ್ ಕೊಲೆ ಪಾತಕರಿಗೆ ಸನ್ಮಾನ; ಎದ್ದೇಳು ಕರ್ನಾಟಕದಿಂದ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಕನ್ನಡ ಸೇನೆ ಚಿಕ್ಕಮಗಳೂರು ನಗರ ಘಟಕದ ಉಪಾಧ್ಯಕ್ಷ ಅನ್ವರ್, ಸಂಘಟನಾ ಕಾರ್ಯದರ್ಶಿ ಸತೀಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಚೈತ್ರ, ಕಾರ್ಯಕರ್ತರಾದ ಹರಿಶಂಕರ್, ದೇವರಾಜ್, ವಿನಯ್, ಶಾಹೀದ್, ಸುಜಿತ್, ರೋಹನ್, ಬಾಬಣ್ಣ ಇನ್ನಿತರರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...