ಚಿಕ್ಕಮಗಳೂರು | ಲೇಬರ್ ಕಾಲೋನಿಯಲ್ಲಿ ಮೂಲಸೌಕರ್ಯ ಮರೀಚಿಕೆ; ಶಿಕ್ಷಣದಿಂದ ವಂಚಿತರಾದ ಮಕ್ಕಳು

Date:

ದಟ್ಟವಾಗಿ ಕಾಡನ್ನು ಆವರಿಸಿಕೊಂಡಿರುವ ಕಳಸ ತಾಲೂಕು ನೋಡುಗರಿಗೆ ಪ್ರವಾಸಿ ತಾಣವಾಗಿ ಕಂಗೊಳಿಸುತ್ತದೆ. ಕಳಸ ತಾಲೂಕು ಕುದುರೆಮುಖ ವ್ಯಾಪ್ತಿಯಲ್ಲಿ ಬರುವ ವಿನೋಬ ನಗರ ಅಥವಾ ಕಂಪನಿಯ ಲಾಬಿಗೋಸ್ಕರ ಕೂಲಿ ಕೆಲಸ ಮಾಡಲು ಬಂದಂತಹ ಜನರು ಉಳಿದಿದ್ದರಿಂದ ಲೇಬರ್ ಕಾಲೋನಿ ಎಂಬ ಹೆಸರಿನ ಗ್ರಾಮವಾಗಿದೆ.

ಇಲ್ಲಿ ವಾಸಿಸುವ ಜನರು ಈ ಗ್ರಾಮಕ್ಕೆ ಬಂದು ಸುಮಾರು ಅರ್ಧ ಶತಕಗಳು ಕಳೆದಿವೆ. ಆದರೂ ಈ ಲೇಬರ್‌ ಕಾಲೋನಿಗೆ ಈವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. 1975ರಲ್ಲಿ ಕಂಪನಿಯೊಂದು ಗುಡ್ಡಗಳನ್ನು ಅಗೆದು ಗಣಿಗಾರಿಕೆ ಮಾಡುವುದಕ್ಕೆ ಶುರು ಮಾಡಿತ್ತು. ಆ ಸಂದರ್ಭದಲ್ಲಿ ಕೂಲಿ ಕೆಲಸ ಮಾಡಲು ವಲಸೆ ಬಂದಿರುವ ಅರ್ಧ ಜನರು ಇದ್ದಾರೆ ಹಾಗೂ ಇಲ್ಲೇ ಪೂರ್ವಜರ ಕಾಲದಿಂದಲೂ ವಾಸ ಮಾಡುತ್ತಿದ್ದ ಜನರೂ ಕೂಡ ಇಲ್ಲಿ ವಾಸ ಮಾಡುತ್ತಿದ್ದಾರೆ.

ಕಂಪನಿ ಶುರುವಾದಾಗ ಜನರಿಗೆ ಅಲ್ಪ ಸ್ವಲ್ಪ ವ್ಯವಸ್ಥೆ ಇತ್ತು. ಕಂಪನಿಯನ್ನು ಮುಚ್ಚಿದಾಗ ಆ ವ್ಯವಸ್ಥೆ ಕೂಡ ಇಲ್ಲದಾಗಿದೆ. ಸುಮಾರು 150 ಕುಟುಂಬದವರು ಮೂಲನಿವಾಸಿಗಳು ವಾಸವಾಗಿದ್ದರೂ ಅಂದಿನಿಂದಲೂ ಮೂಲಸೌಕರ್ಯವಿಲ್ಲದೆ ಜನರು ಬದುಕು ಅಸ್ತವ್ಯಸ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳಸಾ ಲೇಬರ್‌ ಕಾಲೋನಿ 1ಕಳಸಾ ಲೇಬರ್‌ ಕಾಲೋನಿ 2ಕಳಸಾ ಲೇಬರ್‌ ಕಾಲೋನಿ 3ಕಳಸಾ ಲೇಬರ್‌ ಕಾಲೋನಿ 4

ಕುಡಿಯಲು ನೀರಿಗಾಗಿ ಗುಡ್ಡಗಳಿಂದ ಝರಿಯ ಮೂಲವಾಗಿ ಹರಿದು ಬರುವ ನೀರನ್ನು ಶೇಖರಣೆ ಮಾಡಿಕೊಂಡು ಕುಡಿದು ಬದುಕುತ್ತಿದ್ದರು. ಈವರೆಗೂ ವಿದ್ಯುತ್ ಬೆಳಕನ್ನು ಕಾಣದೆ ಪರದಾಡುವ ಪರಿಸ್ಥಿತಿ ಇಲ್ಲಿಯ ಜನರ ಪಾಡಾಗಿದೆ. 45-50 ವರ್ಷಗಳ ಹಿಂದೆಲ್ಲ ತುಂಬ ಮಂದಿ ವಾಸ ಮಾಡುತ್ತಿದ್ದರು. ಬದುಕು ಕಟ್ಟಿಕೊಳ್ಳಲು ವ್ಯವಸ್ಥೆ ಇಲ್ಲದೆ ಅದೆಷ್ಟೋ ಜನರು ಊರು ತೊರೆದು ಹೋಗಿದ್ದಾರೆ.

ಕಳಸಾ ಲೇಬರ್‌ ಕಾಲೋನಿ

ಕಲ್ಲು ಮುಳ್ಳು ಹಾಗೂ ರಸ್ತೆ ಮಾರ್ಗ ಹೊಂಡದ ರೀತಿಯಲ್ಲಿ ತುಂಬಿರುವ ರಸ್ತೆಗಳೇ ಕಾಣಸಿಗುತ್ತವೆ. ಇದೀಗ ಇಲ್ಲಿ ಸುಮಾರು 35 ರಿಂದ 40 ಕುಟುಂಬದವರು ಮಾತ್ರ ವಾಸ ಮಾಡುತ್ತಿದ್ದಾರೆ. ಇಲ್ಲಿ ವಾಸಿಸುವ ಜನರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಾಗಿದ್ದು, ಎಲ್ಲ ಕೂಲಿ ಕೆಲಸವನ್ನೇ ಅವಲಂಬಿಸಿದ್ದಾರೆ.

ಕಾಡಂಚಿನಲ್ಲಿ ಸಿಗುವ ಸೊಪ್ಪು ಸೆದೆ ಕಾಡಿನ ಆಹಾರೋತ್ಪತ್ತಿಗಳನ್ನು ಬಳಸುತ್ತಾ ಬದುಕುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುತ್ತಿದ್ದಾರೆ. ಆದರೆ ಹಕ್ಕುಪತ್ರವಿಲ್ಲ, ಸರಿಯಾದ ಸೌಲಭ್ಯವಿಲ್ಲ. ಮಳೆ ಬಂದಾಗ ಮನೆಗಳು ಕುಸಿದು ನೀರು ಸೋರುತ್ತದೆ.

ಕಳಸಾ ಲೇಬರ್‌ ಕಾಲೋನಿ 5ಕಳಸಾ ಲೇಬರ್‌ ಕಾಲೋನಿ 6

ಲೇಬರ್ ಕಾಲೋನಿಯ ನಿವಾಸಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ವಿದ್ಯಾಭ್ಯಾಸಗಳಿಂದ ಅದೆಷ್ಟೋ ಮಕ್ಕಳು ವಂಚಿತರಾಗಿದ್ದಾರೆ. ಮತ ಹಾಕಿಸಿಕೊಳ್ಳುವಾಗ ಮಾತ್ರ ನಾವು ನೆನಪಾಗುತ್ತೇವೆ. ಇಲ್ಲಾಂದ್ರೆ ನಾವು ರಾಜಕಾರಣಿಗಳು ಹಾಗೂ ಅಧಿಕಾರಿಗಳ ಕಣ್ಣಿಗೆ ಕಾಣಿಸುವುದೇ ಇಲ್ಲ. ಇತ್ತೀಚಿನ ದಿನಗಳಲ್ಲಿ ಈ ಕ್ಷೇತ್ರಕ್ಕೆ ಆಯ್ಕೆಯಾಗಿರುವ ಶಾಸಕರು ಅಭಿವೃದ್ಧಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಅದು ಕೇವಲ ಭರವಸೆಯಾಗದೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವಂತಾಗಬೇಕು” ಎಂದು ತಮ್ಮ ಅಳಲು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸಾಮಾಜಿಕ ಭದ್ರತೆ ಯೋಜನೆಗಳ ನಿಯಮ ಸಡಿಲಿಸಿ ಮಾಸಿಕ ₹5,000ಕ್ಕೆ ಹೆಚ್ಚಿಸುವಂತೆ ಆಗ್ರಹ

“ಶಾಸಕರ ಜತೆಗೆ ಸಂಬಂದ ಪಟ್ಟ ಅಧಿಕಾರಿಗಳೂ ಕೂಡ ಇತ್ತ ಗಮನ ಹರಿಸಿ ಕೂಡಲೇ ಸಮಸ್ಯೆಗಳನ್ನು ಬಗೆಹರಿಸುವತ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...