ಚಿಕ್ಕಮಗಳೂರು | ಕಾಡಂಚಿನಲ್ಲಿ ವಾಸವಾಗಿದ್ದ ವೃದ್ದೆಯ ಸಂಕಷ್ಟಕ್ಕೆ ಸ್ಪಂದಿಸಿದ ಅಧಿಕಾರಿಗಳು

Date:

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸಮೀಪದ ಸಂಸೆ ಗ್ರಾಮ ವ್ಯಾಪ್ತಿಗೆ ಬರುವ ಕಾರ್ಲೆ ಗ್ರಾಮದಲ್ಲಿ ಸಂಕಷ್ಟದಿಂದ ದಿನದೂಡುತ್ತಿದ್ದ ವೃದ್ಧೆಯೋರ್ವರಿಗೆ ಅಧಿಕಾರಿಗಳು ಸ್ಪಂದಿಸಿದ್ದು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕಾಡಂಚಿನ ಕಾರ್ಲೆ ಗ್ರಾಮದ ನಿವಾಸಿಯಾಗಿರುವ ವೃದ್ಧೆ ಬೆಲ್ಲಮ್ಮನವರ ಮನೆಯ ಮೇಲೆ ಇತ್ತೀಚೆಗೆ ಗಾಳಿ ಮಳೆಯ ಬೃಹತ್ ಗಾತ್ರದ ಮರ ಬಿದ್ದಿತ್ತು. ಮನೆಯ ಮೇಲೆ ಮರ ಬಿದ್ದಿದ್ದರಿಂದ ಮನೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿತ್ತು. ಅಲ್ಲದೇ, ಘಟನೆಯ ಸಂದರ್ಭ ಮನೆಯೊಳಗಿದ್ದ ಬೆಲ್ಲಮ್ಮನವರು ಪ್ರಾಣಾಪಾಯದಿಂದ ಪಾರಾಗಿದ್ದರಾದರೂ, ಕಾಲಿಗೆ ಮರದ ಕೊಂಬೆ ತಾಗಿದ್ದರಿಂದ ಗಂಭೀರ ಗಾಯವಾಗಿತ್ತು.

WhatsApp Image 2024 08 22 at 3.29.32 PM 1

ಘಟನೆಯ ಬಳಿಕ ಕಳಸ ಸಾರ್ವಜನಿಕ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಗೆ ಓಡಾಡುತ್ತಿದ್ದರು. ದಿನನಿತ್ಯ ಆಸ್ಪತ್ರೆಗೆ ತೆರಳಬೇಕಾಗಿದ್ದರಿಂದ ಹಣದ ಸಮಸ್ಯೆ ಉಂಟಾಗಿತ್ತು. ಖರ್ಚಿಗೆ ಹಣವಿಲ್ಲದ್ದರಿಂದ ಇವರ ಕುಟುಂಬ, ಆಸ್ಪತ್ರೆಗೆ ತೆರಳುವುದನ್ನು ನಿಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಕಳೆದ ಒಂದು ವಾರದಿಂದ ಕಾಲು ನೋವು ಜಾಸ್ತಿಯಾಗಿತ್ತು. ಇದನ್ನು ಅರಿತ ಕಳಸ ತಾಲೂಕಿನ ಸಿಟಿಝನ್ ಜರ್ನಲಿಸ್ಟ್ ಆಗಿರುವ ಗಣೇಶ್ ಅವರು ಅಧಿಕಾರಿಗಳ ಗಮನ ಸೆಳೆಯಲು ಸ್ತಳೀಯ ಸುದ್ದಿ ವಾಹಿನಿಯಲ್ಲಿ ಬೆಲ್ಲಮ್ಮನವರ ಸಮಸ್ಯೆಯನ್ನು ಸುದ್ದಿ ಮಾಡಿದ್ದರು. ಈ ನಡುವೆ ಕೆಲವರು ಸರ್ಕಾರದಿಂದ ಪರಿಹಾರ ಸಿಗುವಂತೆ ಮಾಡಲು ಈ ರೀತಿ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು.

WhatsApp Image 2024 08 22 at 3.37.38 PM

“ಈ ವಿಚಾರ ಗಮನಕ್ಕೆ ಬಂದ ಕೂಡಲೇ ನೈಜ ಸಂಗತಿ ಅರಿತ ತಾಲೂಕಿನ ಅಧಿಕಾರಿಗಳು, ಬೆಲ್ಲಮ್ಮನವರ ಮನೆಗೆ ಭೇಟಿ ನೀಡಿದ್ದಲ್ಲದೇ, ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ದೊರೆಯುವಂತೆ ಮಾಡಿದ್ದಾರೆ. ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಈ ದಿನ.ಕಾಮ್‌ನ ಸಿಟಿಝನ್ ಜರ್ನಲಿಸ್ಟ್ ಗಣೇಶ್ ಮಾಹಿತಿ ನೀಡಿದ್ದಾರೆ.

ಕಳಸ ನೂತನ ತಹಶೀಲ್ದಾರ್ ಆಗಿರುವ ಕೆ ಎಸ್ ದಯಾನಂದ್ ಮತ್ತು ಉಪ ತಹಶೀಲ್ದಾರ್ ಎಂ ದಯಾವತಿ, ಕಂದಾಯ ಅಧಿಕಾರಿ ಪ್ರಕಾಶ್ ಪ್ರದೀಪ್ ಕುಮಾರ್ ಆಸ್ಪತ್ರೆಗೂ ಕೂಡ ಭೇಟಿ ನೀಡಿದ್ದು, ಬೆಲ್ಲಮ್ಮನವರ ಆರೋಗ್ಯ ವಿಚಾರಿಸಿದ್ದಾರೆ.

WhatsApp Image 2024 08 22 at 3.29.31 PM

“ಮನೆಯ ಮೇಲೆ ಮರ ಬಿದ್ದಿದ್ದರಿಂದ ಹಾನಿಗೊಳಗಾಗಿರುವ ಮೇಲ್ಛಾವಣಿಗೆ ಸರ್ಕಾರದಿಂದ ಪರಿಹಾರ ಧನವನ್ನು ಒದಗಿಸಿ ಕೊಡುವ ಭರವಸೆ ನೀಡಿದ್ದೇವೆ” ಎಂದು ತಹಶೀಲ್ದಾರ್ ದಯಾನಂದ್ ಈ ದಿನ.ಕಾಮ್ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

WhatsApp Image 2024 08 22 at 3.29.32 PM 2
WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...