ಚಿಕ್ಕಮಗಳೂರು | ಕೊಳಚೆ ನಿವಾಸಿಗಳಿಗೆ ನಿವೇಶನ ನೀಡುವಂತೆ ಕರ್ನಾಟಕ ಜನಶಕ್ತಿ ಒತ್ತಾಯ

Date:

ಕೊಳಚೆ ನಿವಾಸಿಗಳಿಗೆ ನಿವೇಶನ ನೀಡುವಂತೆ ಭೂಮಿ ಹಾಗೂ ವಸತಿ ವಂಚಿತರು ಆಗ್ರಹಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ನಗರದ ಅಂಬೇಡ್ಕರ್ ವೃತ್ತದಿಂದ ಬಿ ಎಚ್ ರಸ್ತೆ ಮೂಲಕ ತಾಲೂಕು ಕಚೇರಿವರೆಗೂ ಕಾಲ್ನಡಿಗೆ ಜಾಥಾ ಮೂಲಕ ಪ್ರತಿಭಟನೆ ನಡೆಸಿದರು.

ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ಭೂಮಿ ಹಾಗೂ ವಸತಿ ವಂಚಿತರು ಪ್ರತಿಭಟನೆ ನಡೆಸಿದ್ದು, ಕಡೂರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

, “ಸುಮಾರು 2018ರಲ್ಲಿ ಕಡೂರು ಗ್ರಾಮದ ಸರ್ವೆ ನಂ.53 ವಾರ್ಡ್ ನಂಬರ್ 19ರ ಜಾಗದಲ್ಲಿ 40-50 ವರ್ಷಗಳಿಂದ ವಾಸವಾಗಿದ್ದ ಬಡ ಜನರನ್ನು ಏಕಾಏಕಿ ಖಾಲಿ ಮಾಡಿಸಿದ್ದು, ಜೆಸಿಬಿ ಯಂತ್ರಗಳನ್ನು ತಂದು ನೆಲಸಮ ಮಾಡಿದ್ದಾರೆ. ಅದರಲ್ಲಿ ಕೆಲವರಿಗೆ ಹಕ್ಕು ಪತ್ರಗಳಿದ್ದು, ಕಂದಾಯ ಕೂಡ ಪಾವತಿ ಮಾಡುತ್ತಿದ್ದಾರೆ. ಆದರೂ ಕೂಡಾ ಏಕಾಏಕಿ ಖುಲ್ಲಾ ಮಾಡಿ ಬದಲಿ ಪರ್ಯಾಯ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಇಷ್ಟು ವರ್ಷಗಳಾದರೂ ನಿವೇಶನ ನೀಡಲಿಲ್ಲ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ಇದ್ದ ಜಿಲ್ಲಾಧಿಕಾರಿಗೆ ಪ್ರತಿಭಟನೆ ಮಾಡುವ ಮೂಲಕ ಎಷ್ಟೋ ಬಾರಿ ಮನವಿ ಮಾಡಿದರೂ ಕೂಡಾ ಯಾವುದೇ ಅಧಿಕಾರಿಗಳು ಗಮನಹರಿಸಲಿಲ್ಲ. ಈವರೆಗೂ ಯಾವುದೇ ನಿವೇಶನ ನೀಡದೆ ಇರುವುದರಿಂದ ಅಲ್ಲಿ ವಾಸವಾಗಿದ್ದ ಎಲ್ಲ ಕುಟುಂಬಗಳೂ ಕೂಡ ಅತಂತ್ರ ಪರಿಸ್ಥಿತಿಯಲ್ಲಿ ಬದುಕು ನಡೆಸಬೇಕಾಗಿದೆ. ಕೂಲಿ ನಾಲಿ ಮಾಡಿ ಮನೆ ಬಾಡಿಗೆ ಕಟ್ಟಲು ಅಸಾಧ್ಯವಾಗಿದ್ದು, ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಕಷ್ಟಕರವಾಗಿದೆ. ಆದ್ದರಿಂದ ತಾವು ದಯಮಾಡಿ ಕೊಳಚೆ ಪ್ರದೇಶದಿಂದ ಖುಲ್ಲಾ ಮಾಡಿರುವ ಕುಟುಂಬಗಳಿಗೆ ಸರ್ವೆ ನಂ.53ರಲ್ಲಿ ನಿವೇಶನ ಕೊಡಬೇಕು” ಎಂದು ಒತ್ತಾಯಿಸಿದರು.

ಸರ್ವೆ ನಂ.53ರಲ್ಲಿ ನಿವೇಶನ ಕೊಡದಿದ್ದಲ್ಲಿ ಪರ್ಯಾಯವಾಗಿ ಸರ್ವೆ ನಂ.3ರಲ್ಲಿ ಖಾಲಿಯಿರುವ ಸರ್ಕಾರಿ ಜಾಗದಲ್ಲಿ ನಿವೇಶನ ಮಂಜೂರು ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಕೋಟಿ ವಿಮೆಗಾಗಿ ಸತ್ತಂತೆ ನಟನೆ; ನಾಪತ್ತೆಯಾಗಿದ್ದವ ಪೊಲೀಸರಿಗೆ ಸಿಕ್ಕಿದ್ದು ಹೇಗೆ?

ಪ್ರತಿಭಟನೆಯಲ್ಲಿ ದಸಂಸ ಮುಖಂಡ ಮಂಜುನಾಥ್, ಶ್ರೀಕಾಂತ್, ಕರ್ನಾಟಕ ಜನಶಕ್ತಿಯ ಗೌಸ್ ಮೊಹದ್ದೀನ್, ಮುನ್ನ, ರೈತ ಸಂಘದ ನಿರಂಜನ್ ಮೂರ್ತಿ ಸೇರಿದಂತೆ ಭೂಮಿ ಇಲ್ಲದ ಬಡಜನರು, ಸ್ಥಳೀಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...