ಚಿಕ್ಕಮಗಳೂರು | ಮನೆ ಮೇಲೆ ಉರುಳಿದ KSRTC ಬಸ್; 30 ಮಂದಿಗೆ ಗಾಯ

Date:

ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಮನೆ ಮೇಲೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಬಳಿ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 30 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಬಸ್‌, ಜಯಪುರ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್‌, ಜಯಪುರದ ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿದೆ.

ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ ಚಾಲಕ ವೆಂಕಪ್ಪ ಮತ್ತು ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಕೊಪ್ಪ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮನೆಯಲ್ಲಿದ್ದ ಶಾಂತಾ ಅವರಿಗೂ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್‌ ಬೆಂಗಳೂರು ಡಿಪೋಗೆ ಸೇರಿದ್ದು, ಬಸ್‌ನಲ್ಲಿ 45 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬಸ್‌ಅನ್ನು ವೇಗವಾಗಿ ಚಲಾಯಿಸುತ್ತಿದ್ದದ್ದೇ ಘಟನೆಗೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.

ಸ್ಥಳಕ್ಕೆ ಜಯಪುರ ಪೊಲೀಸ್ ಠಾಣೆಯ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...