ಚಿಕ್ಕಮಗಳೂರು l ಜ. 7ರಂದು 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ

Date:

ಚಿಕ್ಕಮಗಳೂರು ಜಿಲ್ಲೆಯಲ್ಲಿ 2008ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ( ಶೌರ್ಯ ) ದಿನದ ಕಾರ್ಯಕ್ರಮವನ್ನು ಜನವರಿ 7ರಂದು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಎಲ್ಲರೂ ತಪ್ಪದೇ ಭಾಗವಹಿಸಬೇಕೆಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಸಮಿತಿಯಿಂದ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು.

ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ ಏಕೆ ಆಚರಿಸುತ್ತಾರೆ: ಭಾರತದ ಚರಿತ್ರೆಯಲ್ಲಿ ಬ್ರಿಟಿಷ್ ಪೂರ್ವ ಮತ್ತು ಬ್ರಿಟಿಷ್ ಕಾಲದಲ್ಲಿ ಸಮಾನತೆ ಮತ್ತು ಸ್ವಾಭಿಮಾನಕ್ಕಾಗಿ ಅನೇಕ ಹೋರಾಟಗಳು ನಡೆದಿವೆ. ಅತ್ಯಂತ ಮಹತ್ವವಾದಗಳಲ್ಲಿ ಕೋರೇಗಾಂವ್ ಒಂದಾಗಿದೆ. ಸುಮಾರು 200 ವರ್ಷಗಳ ಹಿಂದೆ ಪೇಶ್ವೇಗಳ ಕಾಲದಲ್ಲಿ ಮನಸ್ಸೃತಿಗೆ ಪ್ರಕಾರ ಅಸ್ಪೃಶ್ಯರು ದಾರಿಯಲ್ಲಿ ನಡೆದುಕೊಂಡು ಹೋಗಬೇಕಾದರೆ ಅವರ ನೆರಳು ಬ್ರಾಹ್ಮಣರ ಮೇಲೆ ಬೀಳಬಾರದು , ದಾರಿಯಲ್ಲಿ ಉಗುಳಬಾರದು, ಸಂಜೆ ಮತ್ತು ಬೆಳಗ್ಗೆ ಊರಿನ ಒಳಗೆ ಬರುವಂತೆ ಇರಲಿಲ್ಲ ಆ ಸಮಯದಲ್ಲಿ ನೆರಳು ತುಂಬಾ ಉದ್ದವಾಗಿರುತ್ತದೆನೆರಳು ತುಂಬಾ ಉದ್ದವಾಗಿರುತ್ತದೆ. ಇದು ಆ ಕಾಲಘಟ್ಟದ ಕರಾಳ ವ್ಯವಸ್ಥೆಗೆ ಉದಾಹರಣೆಯಾಗಿತ್ತು. 

31/12/1917 ರಂದು ಪುಣೆಯಿಂದ ಮದ್ದು ಗುಂಡುಗಳೊಂದಿಗೆ ಹೊರಟ ಬಾಂಬೆ ರೆಜಿಮೆಂಟ್ ಸೈನ್ಯವು ಸತತ ಹನ್ನೆರಡು ಗಂಟೆಗಳ ನಡಿಗೆಯೊಂದಿಗೆ ಭೀಮ ನದಿ ತೀರದ ಕೋರೆಗಾಂವ್  ಸ್ಥಳದಲ್ಲಿ ಮದ್ದು ಗುಂಡುಗಳ ಸಿಡಿತದೊಂದಿಗೆ ಯುದ್ಧ ಆರಂಭವಾಗಿ ನೂರಾರು ಪೇಶ್ವ ಸೈನಿಕರು ಹತ್ತರಾದರು. ಇಡೀ ರಾತ್ರಿ ನಡೆದ ಯುದ್ಧದಲ್ಲಿ ಪೇಶ್ವೆಗಳ 28,000 ಸೈನಿಕರು ಮರಣ ಹೊಂದುತ್ತಾರೆ 171 ರೆಜಿಮೆಂಟ್ ಸೈನಿಕರ ಬಲಿದಾನದೊಂದಿಗೆ ಜನವರಿ 1, 1818ರಂದು ಬೆಳಗ್ಗೆ ಭೀಮ ನದಿಯಲ್ಲಿ ಸ್ನಾನ ಮಾಡಿ ವಿಜಯೋತ್ಸವ ಆಚರಿಸುತ್ತಾರೆ ಈ ಐತಿಹಾಸಿಕ ಹೋರಾಟಕ್ಕೆ ಸ್ವಾಭಿಮಾನ ಹೋರಾಟದ ನೆನಪಿಗಾಗಿ ಪ್ರತಿ ವರ್ಷ ಜನವರಿ 1ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡದಿದ್ದರೇ ಸರ್ಕಾರ ವಿರುದ್ಧ ಹೋರಾಟದ ಎಚ್ಚರಿಕೆ; ಎಐಡಿಎಸ್ಓ

ಹಾಗೆಯೇ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನವರಿ 7 ರಂದು ಭೀಮಾ ಕೋರೆಗಾಂವ್ ವಿಜಯೋತ್ಸವಗಳನ್ನು ಅದ್ದೂರಿಯಿಂದ ಆಚರಿಸಲಾಗುತ್ತಿದೆ ಈ ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಚಿಕ್ಕಮಗಳೂರಿನ ಕ್ಷೇತ್ರ ಮೂಡಿಗೆರೆ ಕ್ಷೇತ್ರ ಶಾಸಕರು, 50 ಸಮಿತಿಯ ಒಕ್ಕೂಟದಿಂದ ಆಯೋಜಿಸಲಾಗಿದ್ದು, ಸಮಸ್ತ ನಾಗರಿಕರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ದಸಂಸ ಮುಖಂಡ ಮರ್ಲೆ ಅಣ್ಣಯ್ಯ ತಿಳಿಸಿದರು. ಈ ವೇಳೆ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಸಮಿತಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...