ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆಯ ಎ.ಆರ್.ಕೃಷ್ಣಶಾಸ್ತ್ರಿ ಸಭಾ ಭವನದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮೂಡಿಗೆರೆ ಕ್ಷೇತ್ರದ ನಯನ ಮೊಟ್ಟಮ್ಮ ಉದ್ಘಾಟಿಸಿದರು.
ಮೂಢನಂಬಿಕೆಯಿಂದ ದೂರ ಉಳಿದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಪೌಷ್ಟಿಕ ಆಹಾರ ಸೇವನೆಯೊಂದಿಗೆ ಉತ್ತಮ ಜೀವನ ಪದ್ಧತಿ ಅಳವಡಿಸಿಕೊಳ್ಳಬೇಕು. ಬಾಣಂತಿಯರು, ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ ಪದ್ಧತಿಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಅರಿವು ಮೂಡಿಸುತ್ತಿದ್ದರೂ ಜನರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಬದಲಾವಣೆ ಆಗದೆ ಇರುವುದು ವಿಷಾದನೀಯ ಎಂದು ಕಾರ್ಯಕ್ರಮದಲ್ಲಿ ಶಾಸಕಿ ನಯನಾ ಮೋಟಮ್ಮ ಮಾತಾಡಿದರು.
‘ಪೌಷ್ಟಿಕ ಕರ್ನಾಟಕ’ ನಿರ್ಮಾಣದ ಸಂಕಲ್ಪದೊಂದಿಗೆ ಪೋಷಣ್ ಅಭಿಯಾನ ಯೋಜನೆ ರೂಪಿಸಲಾಗಿದೆ. ಭಾರತವನ್ನು ಕಾಡುತ್ತಿದ್ದ ಅಪೌಷ್ಟಿಕತೆಯನ್ನು ತೊಡೆದು ಹಾಕಲು 5 ಗುರಿಗಳನ್ನು ಹೊಂದಿದ್ದು, ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು, ಕಿಶೋರಿಯರಲ್ಲಿ ಅಪೌಷ್ಟಿಕತೆ ನಿವಾರಣೆ, ರಕ್ತಹೀನತೆ ತಡೆಗಟ್ಟುವಿಕೆ, ಕುಂಠಿತ ಬೆಳವಣಿಗೆ, ಜನನ ತೂಕ ಕಡಿಮೆಯಾಗುವ ಸಮಸ್ಯೆ ನಿವಾರಿಸಲು ಈ ಯೋಜನೆಗೆ ಚಾಲನೆ ನೀಡಲಾಗಿತ್ತು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ ತಿಳಿಸಿದರು. ಅಪೌಷ್ಟಿಕತೆ ನಿವಾರಣೆಗೆ ಜನರ ಸಹಭಾಗಿತ್ವ ಮುಖ್ಯಗಿದ್ದು, ಸಂಪನ್ಮೂಲ ವ್ಯಕ್ತಿಗಳು ನೀಡಿದ ಮಾಹಿತಿಯನ್ನು ಸಮುದಾಯಕ್ಕೆ ತಿಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ಸಲಹೆ ನೀಡಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ದೇವಿರಮ್ಮ ಬೆಟ್ಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ
ಈ ವೇಳೆ ಅಂಬಳೆ ಗ್ರಾ.ಪಂ.ಅಧ್ಯಕ್ಷೆ ಲಕ್ಷಮ್ಮ, ಮಲ್ಲಮ್ಮ, ವಿಜಯಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜೆ.ರೂಪಾಕುಮಾರಿ, ಅಂಬಳೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಎನ್.ಕೆ.ಶೋಭಾ, ಹಿರಿಯ ಮೇಲ್ವಿಚಾರಕಿ ಸಿ.ಎಂ.ಲೀಲಾವತಿ, ಪೋಷಣ್ ಅಭಿಯಾನದ ಯೋಜನಾ ಸಂಯೋಜಕಿ ಕೆ.ದಿವ್ಯಾ ಹಾಗೂ ಇನ್ನಿತರರಿದ್ದರು.





