ಚಿಕ್ಕಮಗಳೂರು l ಅಕ್ರಮ ಅರಣ್ಯ ಭೂ ಮಂಜೂರು ಆರೋಪ; ತಹಶೀಲ್ದಾರ್ ಪೂರ್ಣಿಮ ಅಮಾನತು

Date:

ಅರಣ್ಯ ಜಮೀನನ್ನು ಸರ್ಕಾರದ ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಭೂ ಮಂಜೂರಾತಿ ಮಾಡಿರುವ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಸಿ.ಎಸ್ ಪೂರ್ಣಿಮ ಅವರನ್ನು ಅಮಾನತು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ವಲಯದಲ್ಲಿ ಅಧಿಸೂಚಿತ ಅರಣ್ಯ ಪ್ರದೇಶವಾದ ರಂಗೇನಹಳ್ಳಿ ಗ್ರಾಮದ ಸರ್ವೆ ನಂ.4ರಲ್ಲಿ ಒಟ್ಟು 12.33 ಎಕರೆ ಅರಣ್ಯ ಜಮೀನನ್ನು ಕೇಂದ್ರ ಸರ್ಕಾರದ ಅನುಮತಿ ಪಡೆಯದೇ ಪೂರ್ಣಿಮ ಅವರು ಮಂಜೂರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರನ್ನು ಅಮಾನತು ಮಾಡಲಾಗಿದೆ.

“ಅರಣ್ಯ ಜಮೀನನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿ ದುರ್ನಡತೆ/ಕರ್ತವ್ಯ ಲೋಪವೆಸಗಿರುವ ಆಪಾದಿತ ಅಧಿಕಾರಿ ವಿರುದ್ಧ ‘Van (Sanrakshan Evam Samvardhan) Adhiniyam-1980’ರ ಸೆಕ್ಷನ್ 8(3B) ಮತ್ತು ‘Van (Sanrakshan Evam Samvardhan) Rules-2023’ರನಿಯಮ 15 ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕಾಯ್ದೆ-1963 ಅಡಿಯಲ್ಲಿ ದೂರು ದಾಖಲಿಸಲಾಗಿದೆ” ಎಂದು ವಲಯ ಅರಣ್ಯಾಧಿಕಾರಿ ಈದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 01 03 17 43 27 72 439a3fec0400f8974d35eed09a31f914

“ಪ್ರಕರಣದಲ್ಲಿ ತರೀಕೆರೆಯ ಹಿಂದಿನ ತಹಶೀಲ್ದಾರ್ (ಈಗ ನಿವೃತ್ತರಾಗಿದ್ದಾರೆ) ಎನ್.ಟಿ ಧರ್ಮೋಜಿರಾವ್ ಮತ್ತು ಪೂರ್ಣಿಮ ಅವರು ಭಾಗಿಯಾಗಿದ್ದಾರೆ. ಸರ್ಕಾರದ ಅರಣ್ಯ ಭೂಮಿಯನ್ನು ಪರಭಾರೆ ಮಾಡಲು ನಿರ್ಬಂಧವಿದ್ದರೂ, ಅವರು ಅನಧಿಕೃತವಾಗಿ ಭೂ ಮಂಜೂರಾತಿ ಮಾಡಿರುವುದು ದೃಢಪಟ್ಟಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

“ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ಸರ್ಕಾರದ ಭೂಮಿಯನ್ನು ಸಂರಕ್ಷಿಸುವುದರ ಬದಲು ಫಲಾನುಭವಿಗಳಿಂದ ಬಾಹ್ಯ ಪ್ರತಿಫಲಾಪೇಕ್ಷೆ ಪಡೆಯುವ ಉದ್ದೇಶದಿಂದ, ಸರ್ಕಾರದ ಭೂಮಿಯನ್ನು ಅನಧಿಕೃತವಾಗಿ ಮಂಜೂರು ಮಾಡಿ ಕರ್ನಾಟಕ ನಾಗರೀಕ ಸೇವಾ (ನಡತೆ)ನಿಯಮಗಳು-2021ರ ನಿಯಮ (3)ರ ಉಪ ನಿಯಮ-(1)(2)(3)(5)(6) & (7)ನ್ನು ಉಲ್ಲಂಘಿಸಿದ್ದಾರೆ. ಕರ್ತವ್ಯ ಲೋಪವೆಸಗಿ ಸರ್ಕಾರಿ ನೌಕರನಿಗೆ ತಕ್ಕದಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ, ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ ಹೆಚ್.ಜಿ ಅವರು ಆದೇಶ ಹೊರಡಿಸಿದ್ದಾರೆ” ಎಂದು ಅರಣ್ಯ ಅಧಿಕಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...