ಚಿಕ್ಕಮಗಳೂರು l ಡಿಸೆಂಬರ್ 7ರಂದು ತೇಜಸ್ವಿ ಪ್ರತಿಷ್ಠಾನದಲ್ಲಿ ಪುಸ್ತಕ ಪರಿಷೆ

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಡಿಸೆಂಬರ್ 7ರಂದು ಶನಿವಾರ ಪುಸ್ತಕ ಪರಿಷೆ ಕಾರ್ಯಕ್ರಮ ನಡೆಯಲಿದೆ. 

ಶನಿವಾರ ಬೆಳಿಗ್ಗೆ 9.30ಕ್ಕೆ ಪುಸ್ತಕ ಪರಿಷೆ ಪ್ರಾರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ವಿವಿಧ ಸಂವಾದಗಳು ನಡೆಯಲಿವೆ. ಪುಸ್ತಕ ಪ್ರಕಟಣೆ ಸವಾಲುಗಳು ಮತ್ತು ಸಾಧ್ಯತೆಗಳ ಕುರಿತು ಸಂವಾದ ನಡೆಯಲಿದ್ದು, ಲೇಖಕರಿಗೆ ಉಪಯುಕ್ತ ಕಾರ್ಯಕ್ರಮ ಇದಾಗಿದೆ. ರಾಜ್ಯದ ವಿವಿಧ ಪ್ರಕಾಶನ ಸಂಸ್ಥೆಗಳ ಪ್ರಕಾಶಕರು, ಲೇಖಕರು ಸಂವಾದಲ್ಲಿ ವಿಷಯ ಮಂಡನೆ ಮಾಡಲಿದ್ದು, ಪುಸ್ತಕ ಪ್ರಕಟಣೆ ಮಾಡುವ ಆಸಕ್ತಿ ಹೊಂದಿರುವ ಲೇಖಕರಿಗೆ ಉಪಯುಕ್ತ ಕಾರ್ಯಕ್ರಮ ಇದಾಗಿದೆ. ಇದಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣ ಸೇರಿದಂತೆ ಬರಹದ ಹೊಸ ಮಾದ್ಯಮ ಸಾಧ್ಯತೆಗಳ ಬಗ್ಗೆ ಉಪಯುಕ್ತ ಚರ್ಚೆ ನಡೆಯಲಿದೆ. 

ಪ್ರಸ್ತುತ ಸಂದರ್ಭಕ್ಕೆ ಅನ್ವಯವಾಗುವಂತಹ ಬರಹದ ಆಶಯಗಳು, ಹೊಸ ತಲೆಮಾರಿನ ಸಾಹಿತ್ಯಕ ಜವಾಬ್ದಾರಿಯ ಕುರಿತು ಸಂವಾದ ನಡೆಯಲಿದ್ದು, ಸಾಹಿತ್ಯ ವಲಯಕ್ಕೆ ಉಪಯುಕ್ತ ಕಾರ್ಯಕ್ರಮ ಇದಾಗಲಿದೆ. ಪುಸ್ತಕ ಪ್ರಕಟಣೆ ಮಾರುಕಟ್ಟೆ ಕುರಿತ ಸಂವಾದಲ್ಲಿ ಪ್ರಕಾಶಕ ಆ‌ರ್ ಜಿ ನಾಗರಾಜ್, ಹರಿವು ಬುಕ್ಸ್‌ನ ಪ್ರಕಾಶಕ ರತೀಶ್ ಬಿ ಆರ್, ಮಿಂಚುಳ್ಳಿ ಪ್ರಕಾಶನದ ಸೂರ್ಯಕೀರ್ತಿ ಭಾಗವಹಿಸಲಿದ್ದಾರೆ. ಬರಹದ ಹೊಸ ಮಾಧ್ಯಮ ಸಂವಾದದಲ್ಲಿ ಪ್ರತಿಲಿಪಿ ಕನ್ನಡ ವಿಭಾಗದ ನಿರ್ವಾಹಕರಾದ ಅಕ್ಷಯ್ ಬಾಳೆಗೆರೆ, ಚಿತ್ರಕತೆ ಬರಹಗಾರರು, ಪತ್ರಕರ್ತ ವಿಕಾಸ್ ನೇಗಿಲೋಣ, ಮುಂಬೈ ಯುವ ಕನ್ನಡದ ಸಾಂಸ್ಕೃತಿಕ ಸಂಘಟಕ ಕುನಾಲ್ ಕನ್ನಡಿಗ ಅವರು ಭಾಗವಹಿಸಲಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ವಾಕಿಂಗ್‌ ಹೋಗುತ್ತೇನೆಂದು ಹೇಳಿ ಹೋಗಿದ್ದ ವೈದ್ಯ ನಿಗೂಢ ಸಾವು

ಬರಹದ ಆಶಯ, ಹೊಸ ತಲೆಮಾರಿನ ಸಾಹಿತ್ಯಿಕ ಜವಾಬ್ದಾರಿಗಳು ಕುರಿತ ಸಂವಾದದಲ್ಲಿ ವಿಮರ್ಶಕರಾದ ಡಾ ಎಚ್ ಎಸ್ ಸತ್ಯನಾರಾಯಣ, ಕವಯತ್ರಿ ಭಾಗ್ಯಜ್ಯೋತಿ ಹಿರೇಮಠ, ಲೇಖಕ ಜಯರಾಮಾಚಾರಿ ಭಾಗವಹಿಸಲಿದ್ದಾರೆ.

ಪುಸ್ತಕ ಪರಿಷೆ ಕಾರ್ಯಕ್ರಮದಲ್ಲಿ 100 ಮಂದಿ ಲೇಖಕರಿಗೆ ಮಾತ್ರ ಅವಕಾಶವಿದ್ದು, ₹500 ಪಾವತಿಸಿ ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8277589859, 9663098873 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...