ಚಿಕ್ಕಮಗಳೂರು l ಭ್ರಷ್ಟಾಚಾರ ಆರೋಪ: ಶಾಸಕ ಟಿ.ಡಿ ರಾಜೇಗೌಡ, ಪತ್ನಿ, ಮಗನಿಗೆ ಲೋಕಾಯುಕ್ತರಿಂದ ಎಫ್‌ಐಆ‌ರ್ ದಾಖಲು

Date:

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ಎಫ್‌ಐಆ‌ರ್ ದಾಖಲಿಸಿದ್ದಾರೆ.

‘ಟಿ.ಡಿ. ರಾಜೇಗೌಡ ಅವರು ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಸರ್ಕಾರಕ್ಕೆ, ಮತ್ತು ಆದಾಯ ತೆರಿಗೆ ತನಿಖೆ ನಡೆಸಬೇಕು’ ಎಂದು ಕೊಪ್ಪ ನಿವಾಸಿ ದಿನೇಶ್ ಎಚ್.ಕೆ ದೂರಿನಲ್ಲಿ ಮನವಿ ಮಾಡಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಆದೇಶದಂತೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ ಸೆ.16ರಂದು ಆದೇಶ ನೀಡಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿತ್ತು.’ರಾಜೇಗೌಡ ಅವರ ಕುಟುಂಬ ಸದಸ್ಯರು ತಮ್ಮ ಆದಾಯ ಮೂಲಗಳಿಗೆ ತಾಳೆಯಾಗದಷ್ಟು ಆಸ್ತಿ ಸಂಪಾದಿಸಿದ್ದಾರೆ. ಅವರ ಪಾಲುದಾರಿಕೆ ಸಂಸ್ಥೆಯಾದ ಮೆ.ಶಬಾನಾ ರಂಜಾನ್‌ ವ್ಯವಹಾರಗಳು ಸಾಕ್ಷಿ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.1984ರಲ್ಲಿ ಸ್ಥಾಪಿತವಾದ ಈ ಸಂಸ್ಥೆಯಲ್ಲಿ ಪ್ರಾಥಮಿಕವಾಗಿ ಹಾಜಿ ಔರಂಗಜೇಬ್ ಮತ್ತು ಇತರರು ಪಾಲುದಾರರಾಗಿದ್ದರು. ನಂತರ 1992ರಲ್ಲಿ ಎಸ್.ವಿ. ಗಂಗಯ ಹೆಗೆ, ವಿ.ಜಿ. ಸಿದಾರ್ಥ ಹಾಗೂ ಮಾಳವಿಕಾ ಸಂಸ್ಥೆಗೆ ಪಾಲುದಾರರಾದರು. ಈ ಸಂಸ್ಥೆಯ ಮೂಲಕ ಅವರು 266 ಎಕರೆ ಕಾಫಿ ತೋಟ ಖರೀದಿಸಿದ್ದರು. 1993ರಲ್ಲಿ ಮೂಲ ಪಾಲುದಾರರು ಸಂಸ್ಥೆಯಿಂದ ಹಿಂದೆ ಸರಿದರು. ನಂತರ, ಕಂಪನಿಯು ತೋಟ ಅಡಮಾನವಿಟ್ಟು ಬ್ಯಾಂಕ್‌ಗಳಿಂದ ಸಾಲ ಪಡೆದುಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರಲ್ಲಿ ಸಿದ್ಧಾರ್ಥ ಹಾಗೂ ಗಂಗಯ್ಯ ಹೆಗ್ಡೆ ಅವರ ಮರಣದ ನಂತರ, ಶಾಸಕ ರಾಜೇಗೌಡರ ಪತ್ನಿ ಡಿ.ಕೆ. ಪುಷ್ಪಾ ಅವರನ್ನು ಶೇ 48ರಷ್ಟು ಪಾಲುದಾರರನ್ನಾಗಿ ಸೇರಿಸಲಾಯಿತು. ಕೆಲವು ತಿಂಗಳ ನಂತರ ಶಾಸಕರ ಪುತ್ರ ರಾಜ್‌ ದೇವ್ ಟಿ.ಆರ್. ಸಹ ಪಾಲುದಾರರಾದರು. ಸ್ಟ್ಯಾಂಡರ್ಡ್ ಚಾರ್ಟಡ್್ರ ಬ್ಯಾಂಕ್‌ಗೆ ₹55.75 ಕೋಟಿ, ಬ್ಯಾಂಕ್‌ ಆಫ್‌ ಬರೋಡಾಗೆ ₹66 ಕೋಟಿ ಹಾಗೂ ಕರ್ನಾಟಕ ಬ್ಯಾಂಕ್‌ಗೆ ₹81.95 ಲಕ್ಷ ಪಾವತಿಸಲಾಗಿದೆ. ಆದರೆ, ಲೋಕಾಯುಕ್ತಕ್ಕೆ ರಾಜೇಗೌಡರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ವಾರ್ಷಿಕ ಆದಾಯ ಕೇವಲ ₹40 ಲಕ್ಷ ಎಂದು ಘೋಷಿಸಿದ್ದಾರೆ’ ಎಂಬುದು ದೂರುದಾರರ ವಾದ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬಾನು ಮುಷ್ತಾಕ್ : ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ;ಎಂ.ಪಿ ಕುಮಾರಸ್ವಾಮಿ

ಈ ದಾಖಲೆಗಳನ್ನು ಲೋಕಾಯುಕ್ತರಿಗೆ ಸಲ್ಲಿಸಿದ್ದ ದಿನೇಶ್ ಅವರು, ತನಿಖೆ ನಡೆಸುವಂತೆ ಈ ಹಿಂದೆಯೇ ದೂರು ಸಲ್ಲಿಸಿದ್ದರು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಆರೋಪಗಳು ನಿರಾಧಾರ ಎಂದು 2023ರಲ್ಲಿ ವರದಿ ನೀಡಿದ್ದರು. ದೂರುದಾರರು ಇದನ್ನು ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಲೋಕಾಯುಕ್ತ ಪೊಲೀಸರು ಮತ್ತೊಮ್ಮೆ ಎಫ್‌ಐಆ‌ರ್ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...