ಚಿಕ್ಕಮಗಳೂರು l ಧರ್ಮಸ್ಥಳ ಪ್ರಕರಣ: ನ್ಯಾಯಯುತ ತನಿಖೆ, ಸಾಕ್ಷಿದಾರನಿಗೆ ಸೂಕ್ತ ರಕ್ಷಣೆ ಕೊಡಬೇಕು; ಕರ್ನಾಟಕ ಜನಶಕ್ತಿ ಆಗ್ರಹ

Date:

ಧರ್ಮಸ್ಥಳದ ಪ್ರಕರಣ ಎಸ್.ಐ.ಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಲೀ, ನೊಂದವರಿಗೆ ನ್ಯಾಯ ಸಿಗಬೇಕೆಂದು ಚಿಕ್ಕಮಗಳೂರು ನಗರದಲ್ಲಿ ಕರ್ನಾಟಕ ಜನಶಕ್ತಿ ವತಿಯಿಂದ ಬುಧವಾರ ಪತ್ರಿಕಾಗೋಷ್ಠಿ ನಡೆಸಲಾಗಿದೆ.

ಧರ್ಮಸ್ಥಳದಲ್ಲಿ 2012 ರಲ್ಲಿ ನಡೆದ ಸೌಜನ್ಯ ಎಂಬ ಹುಡುಗಿಯ ಮೇಲಿನ ಬರ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತು ವೇದವಲ್ಲಿ, ಪದ್ಮಲತಾ, ಅನನ್ಯಭಟ್ ಪ್ರಕರಣ ಮತ್ತು ನಾರಾಯಣ, ಯಮುನ, ಮತ್ತು ಇನ್ನಿತರ ಮಹಿಳೆಯರ ನಾಪತ್ತೆ ಇವೆಲ್ಲರೂ ಒಳಗೊಂಡಂತೆ ಈಗ ತನಿಖೆಗಾಗಿ ಎಸ್.ಐ.ಟಿ ವಿಶೇಷ ತನಿಖಾ ತಂಡ ರಚನೆಯಾಗಿದೆ. 

ಹಾಗೆಯೇ, ನೂರಾರು ಶವವನ್ನು ಹೂತು ಹಾಕಿದ್ದೇನೆ ಎಂದು ಸಾಕ್ಷಿ ಹೇಳಲು ಮುಂದಾಗಿರುವ ವ್ಯಕ್ತಿಗೆ ಸೂಕ್ತ ರಕ್ಷಣೆ ಕೊಡಬೇಕು. ಹಾಗೆಯೇ, ಈ ಕೊಲೆಗಳನ್ನು ಮಾಡಿದ್ಯಾರೂ ಅನ್ನುವುದು ಕೂಡಾ ಬಹಳ ಮುಖ್ಯವಾಗಿದೆ. ಅದಲ್ಲದೆ ಆ ವ್ಯಕ್ತಿ ಧರ್ಮಸ್ಥಳದ ಉದ್ಯೋಗಿ ಆಗಿದ್ದೆ ಎಂಬುದರ ಬಗ್ಗೆ ಗುರುತಿನ ಚೀಟಿ ಮತ್ತು ಆಧಾರ್‌ಕಾರ್ಡ್ ಇರುವುದಾಗಿ ಹೇಳಿಕೆ ನೀಡುರವ ಬಗ್ಗೆ ಎಲ್ಲಾ ಮಾಧ್ಯಮಗಳು ಪ್ರಚಾರ ಮಾಡಿದೆ. ಆದ್ದರಿಂದ ಆ ವ್ಯಕ್ತಿಗೆ ಜೀವಕ್ಕೆ ಅಪಾಯ ಇರುವುದು ಕಂಡು ಬರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಲ್ಲದೆ ಧರ್ಮಸ್ಥಳ ಒಂದು ದೊಡ್ಡ ಧಾರ್ಮಿಕ ಸ್ಥಳವಾಗಿದ್ದು, ಹಾಗೂ ಅದರ ನಿಯಂತ್ರಣದಲ್ಲಿ ಸಾಕಷ್ಟು ಶಿಕ್ಷಣ ಕೇಂದ್ರ ಸಹ ಇರುತ್ತದೆ. ಅತ್ಯಾಚಾರ, ಕೊಲೆ ಎಲ್ಲವೂ ಸುದ್ದಿ ಆದಾಗ ಬರುವ ಭಕ್ತಾಧಿಗಳಿಗೂ ಅಲ್ಲಿಯ ಶಿಕ್ಷಣಕ್ಕಾಗಿ ಬರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಕೂಡಾ ಭಯ ಆತಂಕ ಪಡುತ್ತಾರೆ ಎಂದು ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿಯ ಸದಸ್ಯರಾದ ಗೌಸ್ ಮೋಹದ್ದಿನ್ ತಿಳಿಸಿದರು.

ಈ ತನಿಖೆಯು ಅತ್ಯಂತ ತ್ವರಿತವಾಗಿ ಮತ್ತು ನಿಷ್ಪಕ್ಷಪಾತವಾಗಿ ನಡೆದು, ಸತ್ಯ ಜನರಿಗೆ ಗೊತ್ತಾಗಬೇಕಾಗಿದೆ. ಮತ್ತು ಯಾವುದೇ ಸಾಕ್ಷಿ ನಾಶವಾಗದಂತೆ  ಡಾ. ಪ್ರಣವ್ ಮೆಹಾಂತಿ (ಐ.ಪಿ.ಎಸ್) ಅವರ ನೇತೃತ್ವದಲ್ಲಿ ನಡೆಯುವ ವಿಶೇಷ ತಂಡದ ತನಿಖಾ ವರಧಿ ಆದಷ್ಟು ಬೇಗ ಬಂದು ನೊಂದವರಿಗೆ ಕಾನೂನುಬದ್ದ ಶಿಕ್ಷೆಯಾಗಬೇಕೆಂದು ಹಾಗೂ ಕೊಲೆಗಟುಕರಿಗೆ ಕಾನೂನು ಶಿಕ್ಷೆಯಾಗಬೇಕೆಂದು ತನಿಖಾ ತಂಡಕ್ಕೆ ಹಾಗೂ ಸರ್ಕಾರಕ್ಕೆ ಒತ್ತಾಯ ಪೂರ್ವಕ ಆಗ್ರಹ ಮನವಿ ಮಾಡುತ್ತೇವೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆಯ ಗೌಸ್ ಮೋಹದ್ದಿನ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

ಈ ಸಂದರ್ಭದಲ್ಲಿ ಕರ್ನಾಟಕ ಜನಶಕ್ತಿ ಸಂಘಟನೆಯ ವೀಣಾ, ಸಂದೀಪ್, ಅಶೋಕ್, ಎದ್ದೇಳು ಕರ್ನಾಟಕ ಸಂಘಟನೆಯ ಮುಖಂಡರಾದ ಗಣೇಶ್, ಅರುಣ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...