ಚಿಕ್ಕಮಗಳೂರು ನಗರದ ಆದ್ರಿಕಾ ಹೋಟೆಲ್ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ಆರ್ಥಿಕ ಅಭಿವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಗೂ ನೆರವಾಗುತ್ತದೆ ಹಾಗೆಯೇ, ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಕಾಸಿಯಾ ಸೇರಿದಂತೆ ವಿವಿಧ ಕೈಗಾರಿಕಾ ಸಂಸ್ಥೆಗಳ ಸಮಸ್ಯೆಗಳನ್ನು ಸರ್ಕಾರದ ಇತಿಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಉದ್ದಿಮೆದಾರರಿಗೆ ರಫ್ತು ಕುರಿತು ತರಬೇತಿ ಸಹ ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಭಾರ ಜಂಟಿ ನಿರ್ದೇಶಕ ಸಿ.ಎಂ.ಮಹೇಶ್ ಕುಮಾರ್ ಹೇಳಿದರು.
ಸರ್ಕಾರ ಕೈಗಾರಿಕೆಗೆ ಸಂಬಂಧಿಸಿದ ವಿವಿಧ ಚಟುವಟಿಕೆ ಕೈಗೊಳ್ಳುವುದರಿಂದ ಯುವಕರು ಉದ್ಯಮ ಸ್ಥಾಪಿಸಲು ಒಂದು ಉತ್ತಮ ಅವಕಾಶವಾಗುತ್ತದೆ. ರೈತರು, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು. ಸರ್ಕಾರದಿಂದ ಸಣ್ಣ ಗುಡಿ ಕೈಗಾರಿಕೆ ಸ್ಥಾಪಿಸಲು ಸಬ್ಸಿಡಿ ವ್ಯವಸ್ಥೆ ಇದ್ದು, ಇದರ ಸೌಲಭ್ಯ ಪಡೆದು ನಿರುದ್ಯೋಗಿಗಳಿಗೆ ಕೆಲಸವನ್ನು ನೀಡಬೇಕು ಎಂದು ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l 2.50 ಲಕ್ಷ ನಗದು ಕಳ್ಳತನ; ಸಿಸಿ ಕ್ಯಾಮರದಲ್ಲಿ ಸೆರೆ
ಈ ವೇಳೆ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಮಹೇಶ್ ಎಚ್.ಎನ್., ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ಶ್ರೀಪ್ರಸಾದ್ ಕೃಷ್ಣತ್ ಶೇಟ್, ಜಿಲ್ಲಾ ಪಂಚಾಯಿತಿ ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕ ಎನ್.ಚಂದ್ರಶೇಖರ್, ಕೆಎಸ್ಎಫ್ಸಿ ಶಾಖಾ ವ್ಯವಸ್ಥಾಪಕಿ ಪ್ರಮೀಳಾ ಎಚ್, ಜಂಟಿ ಕಾರ್ಯದರ್ಶಿ ದಿನೇಶ್ ಕುಮಾರ್ ವಿ, ಪ್ಯಾನಲ್ ಅಧ್ಯಕ್ಷ ಸುಭಾಷ್ ಚಂದ್ರ ಭಟ್, ವಿದ್ಯಾರ್ಥಿಗಳು ಹಾಗೂ ಇನ್ನಿತರರಿದ್ದರು.





