ಚಿಕ್ಕಮಗಳೂರು l ಗ್ರಾ.ಪಂ. ಸದಸ್ಯನ ಹತ್ಯೆ ಪ್ರಕರಣ; ಪ್ರತೀ ದೂರು ದಾಖಲು

Date:

ಕಾಂಗ್ರೆಸ್ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ ವ್ಯಕ್ತಿಯಿಂದಲೇ ಮರು ಪ್ರಕರಣ ದಾಖಲು

ಈ ಕೊಲೆ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಮುಖ ಆರೋಪಿ ಸಂಜಯ್, ಇದೀಗ ಮೃತ ಗಣೇಶ್ ಸೇರಿದಂತೆ ಒಟ್ಟು ಎಂಟು ಜನರ ವಿರುದ್ಧ ದೂರು ದಾಖಲಿಸಲಾಗಿದೆ. ಸಂಜಯ್ ನೀಡಿದ ದೂರಿನಲ್ಲಿ ಮೃತ ಗಣೇಶ್‌, ಕತ್ತೆ ಸಂದೀಪ, ಕೋಳಿ ಅಂಗಡಿ ಅಪ್ಪು, ಚಂದು, ಅಭಿ, ಬಿಂದು, ರೋಷನ್ ಹಾಗೂ ಶ್ರೀಕಾಂತ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಆರಂಭದಲ್ಲಿ ದತ್ತಜಯಂತಿಯ ಬ್ಯಾನ‌ರ್ ಮತ್ತು ಬಂಟಿಂಗ್ಸ್‌ಗಳನ್ನು ತೆಗೆಯುವ ವಿಚಾರದಲ್ಲಿ ಗಲಾಟೆ ನಡೆದು ಈ ಕೊಲೆ ಸಂಭವಿಸಿದೆ ಎಂದು ಹೇಳಲಾಗಿತ್ತಾದರೂ, ಪೊಲೀಸರ ತನಿಖೆಯಲ್ಲಿ ಹಳೆಯ ವೈಷಮ್ಯವೇ ಈ ಘಟನೆಗೆ ಮುಖ್ಯ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸಧ್ಯಕ್ಕೆ ಹೇಳಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಹಿಳೆಯ ಮಾಂಗಲ್ಯ ಸರ ಕಳ್ಳತನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಟಿಂಗ್ಸ್‌ಗಳನ್ನು ಬಿಚ್ಚುವ ಸಂದರ್ಭದಲ್ಲಿ ಸಂಜಯ್, ಗಣೇಶ್ ಸ್ನೇಹಿತರನ್ನು ಮಾತನಾಡುವುದಕ್ಕೆ ಯತ್ನಿಸಿದಾಗ ಹಲ್ಲೆ ಆರಂಭವಾಗಿದೆ ಎಂಬ ಮಾತು ಕೇಳಿ ಬಂದಿದೆ ಮತ್ತೊಂದು ಹೇಳಿಕೆಯ ಪ್ರಕಾರ, ಸಂಜಯ್ ಗಣೇಶನ ಮುಖವನ್ನು ನೋಡಿದ್ದಕ್ಕೆ ಗಣೇಶ್‌ನಿಂದಲೇ ಹಲ್ಲೆ ಆರಂಭವಾಯಿತು ಎನ್ನಲಾಗಿದೆ. ಸದ್ಯಕ್ಕೆ ಈ ಘಟನೆ ಹಳೇ ವೈಷಮ್ಯದಿಂದಲೇ ಗಲಾಟೆ ಮತ್ತು ಕೊಲೆಯಲ್ಲಿ ಅಂತ್ಯವಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ. ಸದ್ಯ ಸಖರಾಯಪಟ್ಟಣ ಠಾಣೆಯಲ್ಲಿ ಮೃತ ಗಣೇಶ್ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆಯನ್ನು ಯಾರು ಮತ್ತು ಏಕೆ ಮಾಡಿದ್ದಾರೆ ಎಂಬ ಸತ್ಯಾಂಶವು ಪೊಲೀಸರ ನಿಷ್ಪಕ್ಷಪಾತ ತನಿಖೆಯಿಂದ ಹೊರಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...