ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ, ಕೊಪ್ಪ, ಕಳಸ, ಮೂಡಿಗೆರೆ, ನರಸಿಂಹರಾಜಪುರ, ತರೀಕೆರೆ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.
ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಅಂಗನವಾಡಿ ಹಾಗೂ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಆದರೇ, ಕಾಲೇಜು ವಿದ್ಯಾರ್ಥಿಗಳಿಗೂ ಮಳೆಯ ನಡುವೆ ತರಗತಿಗೆ ತೆರಳಲು ತೊಂದರೆ ಆಗುತ್ತಿರುವುದರಿಂದ ಕಾಲೇಜು ಮಕ್ಕಳಿಗೂ ರಜೆ ನೀಡಬೇಕಾಗಿದೆ ಎಂದು ಕಾಲೇಜು ವಿದ್ಯಾರ್ಥಿಗಳು ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಧಾರಾಕಾರ ಮಳೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ
ಮಳೆಯಿಂದ ಕೆರೆ ಕಟ್ಟೆಗಳು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ.ಕಾಲೇಜಿಗೆ ಹೋಗಬೇಕಾದರೆ ಅದನ್ನೆಲ್ಲ ದಾಟಿಕೊಂಡು ಹೋಗಬೇಕಾಗಿದೆ. ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ,ಇದನ್ನೂ ಗಮನಿಸಿ ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದು ಕಾಲೇಜ್ ವಿದ್ಯಾರ್ಥಿಗಳು ಈದಿನ. ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.





