ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನಲ್ಲಿ ನಡೆದಿದೆ.
ಮೋಟಾರ್ ಸೈಕಲ್ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮಹಮ್ಮದ್ ಫತಾವುಲ್ಲ ಮತ್ತು ಪ್ರವೀಣ್ ಎಂಬ ಇಬ್ಬರು ಆರೋಪಿಗಳು. 2025ರ ಫೆಬ್ರವರಿ 18ರಂದು ಮುತ್ತಿನಕೊಪ್ಪದಿಂದ ಲಕ್ಕಿನಕೊಪ್ಪದ್ದಲ್ಲಿ ಖಚಿತ ಮಾಹಿತಿ ಪಡೆದ ನರಸಿಂಹರಾಜಪುರ ಪೊಲೀಸರು ದಾಳಿ ನಡೆಸಿ, ಸುಮಾರು 104 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿ, ನರಸಿಂಹರಾಜಪುರದ ಘನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜನವರಿ 6, 2026 ರಂದು ತಲಾ 6 ತಿಂಗಳ ಕಠಿಣ ಜೈಲು ಶಿಕ್ಷೆ ಹಾಗೂ 5,000 ರೂಪಾಯಿಗಳ ದಂಡ ವಿಧಿಸಿ ಆದೇಶಿಸಿದೆ. ಶಿಕ್ಷೆಯ ಜೊತೆಗೆ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ಅನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ವಶಪಡಿಸಿಕೊಂಡ ಗಾಂಜಾವನ್ನು ಕಾನೂನುಬದ್ಧವಾಗಿ ವಿಲೇವಾರಿ ಮಾಡಲು ನ್ಯಾಯಾಲಯವು ಸೂಚಿಸಿದೆ.
ಇದನ್ನೂ ಓದಿದ್ದೀರಾ?ಕಳಸ | ಜನವಿರೋಧಿ ಅರಣ್ಯ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ
ಕಾರ್ಯಾಚರಣೆಯಲ್ಲಿ ಪಿಎಸ್ಐ ನಿರಂಜನ್ ಗೌಡ ಬಿ.ಎಸ್ ದಾಳಿ ನಡೆಸಿದ್ದರೆ, ಪಿಎಸ್ಐ ಜ್ಯೋತಿ ಎನ್.ಎ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಗದಿಗೆಪ್ಪ ಜಿ. ನೇಕರ್ ವಾದ ಮಂಡಿಸಿದ್ದು, ಪೊಲೀಸ್ ಸಿಬ್ಬಂದಿಗಳಾದ ಆಸಿಫ್ ಎನ್.ಯು, ಪರಮೇಶ, ನವೀನ್ ಮತ್ತು ಸೋಮೇಶ ಅವರು ತನಿಖೆ ಹಾಗೂ ನ್ಯಾಯಾಲಯದ ಕರ್ತವ್ಯದಲ್ಲಿ ಸಹಕರಿಸಿದ್ದಾರೆ ಎನ್ನಲಾಗಿದೆ.





