ಚಿಕ್ಕಮಗಳೂರು l ಕನಕದಾಸರು ಒಂದು ಜಾತಿಗೆ ಸೀಮಿತರಲ್ಲ: ಶಾಸಕ ಜಿ ಎಚ್ ಶ್ರೀನಿವಾಸ್

Date:

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಂಯುಕ್ತ ಆಶ್ರಯದಲ್ಲಿ ತರೀಕೆರೆ ಪಟ್ಟಣದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಭಕ್ತ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮ ನಡೆಸಲಾಯಿತು.

ಕನಕದಾಸರು, ಮಡಿವಾಳ ಮಾಚಿದೇವ, ಬಸವಣ್ಣನವರು ವಾಲ್ಮೀಕಿಯವರು ಸಮಾಜದ ಸುಧಾರಕರಾಗಿದ್ದಾರೆ. ಅವರು ಯಾವುದೇ ಜಾತಿಗೆ ಸೀಮಿತರಾಗಿಲ್ಲ ಎಂದು ಶಾಸಕ ಜಿ ಎಚ್ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನಕದಾಸರು ಕೀರ್ತನೆಗಳ ಮೂಲಕ ಸಮಾಜದಲ್ಲಿ ಸಮಾನತೆಗಾಗಿ ಹೋರಾಟ ಮಾಡಿದ್ದಾರೆ. ಕೀರ್ತನೆಗಳ ಮೂಲಕ  ಸಮ ಸಮಾಜ ನಿರ್ಮಾಣದ ಗುರಿ ಹೊಂದಿದ್ದರು ಎಂದು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಪುರಸಭಾ ಅಧ್ಯಕ್ಷರಾದ ವಸಂತಕುಮಾರ್ ಕವಾಲಿ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನಕದಾಸರು ಭಕ್ತಿಯ ಮಾರ್ಗದಲ್ಲಿ ಸಮಾಜ ಸುಧಾರಣೆಗೆ ತೊಡಗಿದರು. ಮಡಿವಂತಿಕೆ ಮನಸ್ಸಿನಲ್ಲಿರಬೇಕು. ಶಿಕ್ಷಣ ಮತ್ತು ಆಧ್ಯಾತ್ಮಿಕ ಜ್ಞಾನದ ಅರಿವಿನ ಬಗ್ಗೆ ಮಹತ್ವ ನೀಡಿದ್ದಾರೆ. ಅವರ ಕೀರ್ತನೆಗಳು, ಆದರ್ಶಗಳು ಸಮಾಜದ ಬದಲಾವಣೆಯನ್ನು ಬಯಸಿದೆ ಎಂದು ಉಪ ವಿಭಾಗ ಅಧಿಕಾರಿ ಡಾ. ಕೆ ಜೆ ಕಾಂತರಾಜ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುರುಬ ಸಂಘ 1944 ರಿಂದ ಸಂಘಟಿತವಾಗಿದೆ. ದಿವಂಗತ ನಾಗಪ್ಪ, ಪರಮೇಶ್ವರಪ್ಪ, ಟಿ.ಹೆಚ್ ಶಿವಶಂಕರಪ್ಪ, ಹಾಗೂ ಎರಡು ಬಾರಿ ಜಿಎಚ್ ಶ್ರೀನಿವಾಸ್ ಅವರು ಶಾಸಕರಾಗಿದ್ದಾರೆ. ಹೀಗೆ ನಾಲ್ಕು ಜನರು ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸಂಘವು ಸಮಾಜ ಸೇವೆಯೊಂದಿಗೆ ಶಿಕ್ಷಣಕ್ಕೆ ಆದ್ಯತೆ ಕೊಟ್ಟಿದೆ ಎಂದು ಕುರುಬ ಸಮಾಜದ ತಾಲೂಕು ಅಧ್ಯಕ್ಷರಾದ ಟಿ ಎಸ್ ರಮೇಶ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಮೂಡಿಗೆರೆ l ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕ ಕೆರೆಗೆ ಬಿದ್ದು ಸಾವು

ಈ ವೇಳೆ ಪುರಸಭಾ ಉಪಾಧ್ಯಕ್ಷರಾದ ಗಿರಿಜಾ ಪ್ರಕಾಶ್, ಎಂ ನರೇಂದ್ರ, ಡಾ. ಭರತ್ ಅಂಚೆ, ಲಕ್ಷ್ಮಿದೇವಮ್ಮ ಮಾತನಾಡಿದರು. ನವೀನ್ ಕುಮಾರ್ ಉಪನ್ಯಾಸ ನೀಡಿದರು.

ಇದೆ ಸಂದರ್ಭದಲ್ಲಿ ಡಾ. ಶಿವಶಂಕರ್, ಡಾ. ದ್ರಾಕ್ಷಿಯಾನಿ, ಎಂ ನರೇಂದ್ರ, ಲಕ್ಷ್ಮೀದೇವಮ್ಮ, ಭಾಗ್ಯಮ್ಮ, ಧನ್ಯಶ್ರೀ, ಟಿ ಜಿ ಮಂಜುನಾಥ್, ಆರ್ ದೇವಾನಂದ, ಟಿ ವಿ ಶಿವಶಂಕರಪ್ಪ, ವೇದಿಕೆಯಲ್ಲಿ ಪೊಲೀಸ್ ಅಧಿಕಾರಿ ಹಾಲುಮೂರ್ತಿರಾವ್, ತಹಶೀಲ್ದಾರ್ ವಿಶ್ವಜಿತ್ ಮೆಹತಾ, ಪೊಲೀಸ್ ನಿರೀಕ್ಷಿಕರಾದ ರಾಮಚಂದ್ರನಯ್ಕ್, ಪುರಸಭೆ ಮುಖ್ಯಧಿಕಾರಿ ಎಚ್ ಪ್ರಶಾಂತ್, ಗಂಗಾಧರ್, ಇ ಓ. ಡಾ. ದೇವೇಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಪುರಸಭಾ ಸದಸ್ಯರಾದ ಟಿಜಿ ಶಶಾಂಕ್, ಚೇತನ್, ಗೀತಾ ಗಿರಿರಾಜ್, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಯ್ಯ, ದರ್ಶನ್ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...