ಚಿಕ್ಕಮಗಳೂರು l ಯಾವುದೇ ಅವೈಜ್ಞಾನಿಕ ವರದಿ, ಕಾಯ್ದೆ ಜಾರಿ ಮಾಡಬಾರದು: ಕೆ ಎಲ್ ಅಶೋಕ್ 

Date:

ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾದುದು. ಅಸಾಂವಿಧಾನಿಕ ವರದಿ. ಅವುಗಳನ್ನು ಸಂಪೂರ್ಣ ರದ್ದು ಮಾಡಬೇಕು ಎಂದು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ ಎಲ್ ಅಶೋಕ್ ಒತ್ತಾಯಿಸಿದರು.

ಚಿಕ್ಕಮಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ಎದ್ದೇಳು ಕರ್ನಾಟಕ ವತಿಯಿಂದ ಆಯೋಜಿಸಲಾಗಿದ್ದ ಜನದನಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಸೆಕ್ಷನ್ 4 ಅಥವಾ 17 ಡೀಮ್ಸ್ ಮುಳ್ಳಯ್ಯನಗಿರಿ ಹೆಸರಿನಲ್ಲಿ ಒಕ್ಕಲೆಬ್ಬಿಸುತ್ತಿದ್ದಾರೆ. ಅರಣ್ಯ ಇಲಾಖೆಗೆ ಸೇರಿದೆ ಎಂದು ತೆರವುಗೊಳಿಸುತ್ತಾರೆ. ಪರ್ಯಾಯವಾಗಿ ಭೂಮಿ ನೀಡಬೇಕು, ಇಲ್ಲವಾದರೆ ಅರಣ್ಯ ಇಲಾಖೆಯ ಅರಣ್ಯ ಹಕ್ಕು ಕಾಯ್ದೆಯಡಿ ಭೂ ಸಾಗುವಳಿ ಮಾಡಲು ಹಕ್ಕು ಪತ್ರ ನೀಡಬೇಕು. ಕಸ್ತೂರಿ ರಂಗನ್ ವರದಿಯಂತೆ ಯಾವುದೇ ಅವೈಜ್ಞಾನಿಕ ಅಸಾಂವಿಧಾನಿಕ ವರದಿಯಾಗಲೀ, ಕಾಯ್ದೆಯಾಗಲೀ, ಅವುಗಳನ್ನು ಸಂಪೂರ್ಣ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಪೊರೇಟರ್ ನೀತಿಗಳಿಂದ ರೈತರು, ಕಾರ್ಮಿಕರು, ಹಳ್ಳಿಪಟ್ಟಣಗಳಲ್ಲಿ ವಾಸ ಮಾಡುವ ಬಡವರು ದಿನವಿಡೀ ದುಡಿದು ಬಂದು ನೆಮ್ಮದಿಯಿಂದ ವಿಶ್ರಾಂತಿ ಪಡೆಯಲು ಒಂದು ಸೂರಿನಗೂ  ಪರದಾಡುತ್ತಿದ್ದಾರೆ. ಸೂರಿಗಾಗಿ 94(ಸಿ) ಅಡಿಯಲ್ಲಿ ಅರ್ಜಿ ಸಲ್ಲಿಸಿದರೂ ಇನ್ನು ಹಕ್ಕುಪತ್ರ ಸಿಗಲಿಲ್ಲ ಎಂದು ಕರ್ನಾಟಕ ಜನಶಕ್ತಿ ಮುಖಂಡರಾದ ಗೌಸ್ ಮೊಹಿಯುದ್ದೀನ್ ತಿಳಿಸಿದರು.

ವಸತಿ ಹಾಗೂ ಭೂಮಿ ಇಲ್ಲದೆ ರಾಜ್ಯದಲ್ಲಿ ಅದೆಷ್ಟೋ ಕುಟುಂಬದವರು ವಂಚಿತರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಕಂದಾಯ ಸಚಿವರು ಕೃಷ್ಣಬೈರೇಗೌಡ ಅವರು ಗೊಂದಲವಿರುವ ಭೂಮಿಯ ಕುರಿತು ದಾಖಲೆಗಳನ್ನ ಒದಗಿಸಲು ಆಡಳಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ 50 ಲಕ್ಷಕ್ಕಿಂತ ಅರ್ಜಿಗಳು ಹಕ್ಕುಪತ್ರ ಇಲ್ಲದೆ ವಂಚಿತರಾಗಿದ್ದಾರೆ ಎಂದು ಭೂಮಿ ವಸತಿ ವಂಚಿತರ ಸಮಿತಿ ಮುಖಂಡ ಮರಿಯಪ್ಪ ಅವರು ತಿಳಿಸಿದರು.

ಸರ್ಕಾರದಿಂದ ಸೂರಿಲ್ಲದೆ ವಾಸ ಮಾಡುವ ಎಲ್ಲ ಬಡವರಿಗೆ 94ಸಿ ಮತ್ತು 94ಸಿಸಿ ಅಡಿಯಲ್ಲಿ ಕೂಡಲೇ ಹಕ್ಕುಪತ್ರ ನೀಡಬೇಕು. ಹಾಗೆಯೇ ಫಾರಂ ನಂ. 50, 53, 57 ರಲ್ಲಿ ಅರ್ಜಿ ನೀಡಿರುವ ಬಡವರನ್ನು ಅಂದರೆ ಭೂಮಿ ಇಲ್ಲದೆ ಇರುವವರನ್ನು ಗುರುತಿಸಿ ಭೂಮಿ ನೀಡಬೇಕು. ಹಾಗೆಯೇ ನಾವು ನಿರಂತರ ಹೋರಾಟ ಮತ್ತು ಬೀದಿಗಿಳಿದರೆ ಮಾತ್ರ ನಾವು ನಮ್ಮ ಹಕ್ಕನ್ನು ಪಡೆಯಲು ಸಾಧ್ಯ ಎಂದು ಭೂಮಿ ವಸತಿ ವಂಚಿತರ ಸಮಿತಿ ಮುಖಂಡ ಸಿದ್ದರಾಜು ತಿಳಿಸಿದರು.

ಅರಣ್ಯ ಇಲಾಖೆಯವರು ನೂರಾರು ಎಕರೆ ಒತ್ತುವರಿ ಮಾಡಿದವರನ್ನು ತೆರವುಗೊಳಿಸಿಲ್ಲ, ಅಂಗೈ ಅಗಲದಷ್ಟು ಬಡವರು ಜಾಗವನ್ನೂ ತೆರವುಗೊಳಿಸುತ್ತಾರೆ. ಖಾಲಿ ಇರುವ ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿ ವಾಸ ಮಾಡುವ ಜನರನ್ನು ಸರ್ಕಾರದ ಹೆಸರಿನಲ್ಲಿ ಏಕಾ ಏಕಿ ಆಡಳಿತಾಧಿಕಾರಿಗಳು ಗುಡಿಸಲುಗಳನ್ನು ಧ್ವಂಸಗೊಳಿಸುತ್ತಾರೆ. ಸರ್ಕಾರಿ ಕಚೇರಿಗೆ ಅಲೆದು ಕಾಲಿಗೆ ಹಾಕಿರುವ ಚಪ್ಪಲಿ ಸವೆಯುತ್ತಿದೆಯೇ ಹೊರತು ಕೆಲಸ ಆಗುತ್ತಿಲ್ಲ ಎಂದು ಎದ್ದೇಳು ಕರ್ನಾಟಕ ಸದಸ್ಯೆ ಎಸ್.ಜಿ ಗಿರಿಜಾ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

ಜನದನಿ ಸಮಾವೇಶದಲ್ಲಿಎದ್ದೇಳು ಕರ್ನಾಟಕ ಕಾರ್ಯಕರ್ತರು, ಭೂಮಿ ಹಾಗೂ ವಸತಿ ವಂಚಿತರು, ಹಲವು ಸಂಘಟನೆಯ ಮುಖಂಡರು ಹಾಗೂ ಸ್ಥಳೀಯ ಜನರು ಉಪಸ್ಥಿತಿಯಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...