ಹೊಸ ವರ್ಷದ ಆಚರಣೆಗೆ ಕಾಫಿನಾಡ ಜಿಲ್ಲಾಡಳಿತ ಹೈ ಅಲರ್ಟ್, ಮುಂಜಾಗೃತ ಕ್ರಮವಾಗಿ ಕಾಫಿನಾಡ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧವೆಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅದೇಶಿಸಿದ್ದಾರೆ.

ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆ ಗುಡ್ಡ, ಜಲಪಾತಗಳು ಸೇರಿ 22 ಪ್ರವಾಸಿ ತಾಣಗಳಿಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ ನಿರ್ಬಂಧ ಎಲ್ಲಾ ಪ್ರವಾಸಿ ತಾಣ ಹಾಗೂ ಮಾರ್ಗದಲ್ಲಿ ಬಿಗ್ ಪೊಲೀಸ್ ಭದ್ರತೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಕುಡಿದ ಮತ್ತಿನಲ್ಲಿದ್ದಾಗ ಯಾವುದೇ ಅನಾಹುತ ಸಂಭವಿಸಬಾರದು, ಎಂಬುದಕ್ಕೆ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಮನವಿ ಮೇರೆಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.





