ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

Date:

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು ಪಡೆದಿತ್ತು. ಅದೇ ರೀತಿಯಲ್ಲಿ ನಕ್ಸಲರು ಶರಣಾದಾಗ ಪುನರ್ವಸತಿ ಪ್ಯಾಕೇಜ್‌ ಜೊತೆಗೆ ಮಲೆನಾಡು ಅಭಿವೃದ್ಧಿಯಾಗಬೇಕೆಂಬ ಸಿಎಂ ಬಳ್ಳಿ ನಕ್ಸಲರು ಬೇಡಿಕೆ ಇಟ್ಟಿದ್ದರು. ಆ ಬೇಡಿಕೆಯನ್ನು ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆಂದು ₹ 7 ಕೋಟಿ 12 ಲಕ್ಷ ಹಣವನ್ನು ಬಿಡುಗಡೆ ಮಾಡಿದೆ.

2002ರಿಂದ ಸುಮಾರು 20 ವರ್ಷಗಳ ಕಾಲ ಕಾಫಿನಾಡಿನ ಶೃಂಗೇರಿ, ಕೊಪ್ಪ, ಮೂಡಿಗೆರೆ, ಕಳಸ ಭಾಗಗಳಲ್ಲಿ ನಕ್ಸಲ್ ಚಟುವಟಿಕೆಗಳು ಉತ್ತುಂಗದಲ್ಲಿದ್ದವು. ಎ.ಎನ್‌.ಎಫ್. ಸಿಬ್ಬಂದಿ ಗನ್‌ ಹಿಡಿದು ಕಾಡಲ್ಲಿ ಹುಡುಕಾಡುವುದು, ಶಸ್ತ್ರಸಜ್ಜಿತ ಪೊಲೀಸರ ಕ್ಯಾಂಪ್‌ಗಳು ಸರ್ವೇ ಸಾಮಾನ್ಯವಾಗಿದ್ದವು. ನಕ್ಸಲರ ಹೋರಾಟದ ಉದ್ದೇಶ ಮಲೆನಾಡಿನ ಕುಗ್ರಾಮಗಳ ಅಭಿವೃದ್ಧಿಗೆ ಆಗಿದ್ದರೂ, ಆ ಸಮಯದಲ್ಲಿ ಅದನ್ನು ಅರಿಯದ ಸರ್ಕಾರಗಳು ಈಗ ನಕ್ಸಲರು ಶರಣಾದ ನಂತರ ಅಭಿವೃದ್ಧಿಗೆ ಮುಂದಾಗಿದೆ. ಈ ಹಣವನ್ನು ಕಾಡಂಚಿನ ಕುಗ್ರಾಮಗಳ ರಸ್ತೆ, ನೀರು, ವಿದ್ಯುತ್, ಕಾಲುಸಂಕ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಒದಗಿಸಲು ಬಳಸಲಾಗುವುದು ಅಂತ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಸ್ವಾತಂತ್ರ್ಯ ಬಂದು 75 ವರ್ಷ ಆದರೂ ಮಲೆನಾಡಿನ ಎಷ್ಟೋ ಗ್ರಾಮಗಳು ಮೂಲಭೂತ ಸೌಕರ್ಯವನ್ನು ನೋಡುವ ಸಮಯ ಈಗ ಬಂದಿದೆ. ಆದರೆ, ನಕ್ಸಲರು ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದ್ದಾಗಲೇ ಸರ್ಕಾರಗಳು ಕಾಡಂಚಿನ ಕುಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿದ್ದರೆ, ನಕ್ಸಲರು ಹಾಗೂ ಪೊಲೀಸರ ನಡುವಿನ ಸಂಘರ್ಷಕ್ಕೆ ಬ್ರೇಕ್ ಹಾಕಬಹುದಾಗಿತ್ತು. ನಕ್ಸಲರನ್ನು ಹುಡುಕಲು ಮತ್ತು ಸೆರೆ ಹಿಡಿಯಲು ಕೋಟ್ಯಾಂತರ ರೂಪಾಯಿ ವ್ಯಯ ಮಾಡಿದ್ದ ಸರ್ಕಾರಗಳು, ಅವರು ಮುಖ್ಯವಾಹಿನಿಗೆ ಬರುವಾಗಲೂ ಲಕ್ಷಾಂತರ ರೂಪಾಯಿ ಪ್ಯಾಕೇಜ್ ನೀಡಿದೆ. ಈಗ ಬಿಡುಗಡೆಯಾಗಿರುವ ₹ 7 ಕೋಟಿ 12 ಲಕ್ಷ ಹಣದಲ್ಲಿ ವಿವರವಾದ ಯೋಜನಾ ವರದಿ ತಯಾರಿಸಿ ಅಭಿವೃದ್ಧಿಗೆ ಮುಂದಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

10-20 ವರ್ಷಗಳ ಹಿಂದೆಯೇ ಸರ್ಕಾರಗಳು ಮಾಡಿದ್ದರೇ ಬಹುಶಃ ಮಲೆನಾಡಿನಲ್ಲಿ ನಕ್ಸಲಿಜಂ ಹುಟ್ಟುತ್ತಿರಲಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಒಟ್ಟಾರೆಯಾಗಿ, ಮಲೆನಾಡಿನ ನಕ್ಸಲ್ ಪೀಡಿತ ಕುಗ್ರಾಮಗಳು ಹಾಗೂ ಕಾಡಂಚಿನ ಗ್ರಾಮಗಳಿಗೆ ಅಭಿವೃದ್ಧಿ ಭಾಗ್ಯ ಸಿಕ್ಕಿದ್ದು, 75 ವರ್ಷಗಳ ಬಳಿಕ ಅನೇಕ ಗ್ರಾಮಗಳು ರಸ್ತೆ, ಕಾಲುಸಂಕ, ಶುದ್ಧ ನೀರು, ಚರಂಡಿ, ಕರೆಂಟ್ ವ್ಯವಸ್ಥೆ ಹಾಗೂ ಇನ್ನಿತರ ಅಭಿವೃದ್ಧಿಗಳು ಮಾಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...