ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

Date:

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ ವತಿಯಿಂದ ಮನೆಯಂಗಳದಿ ಶ್ರಾವಣ ಸಂಜೆ ಕಾರ್ಯಕ್ರಮವನ್ನು ಆಯೋಜಿಸಿದರು.

ಸಾಹಿತಿ ಮನಸುಳಿ ಮೋಹನ್‌ ಮಾತನಾಡಿ ” ಸಮಾಜ ದಲ್ಲಿನ ಅಂಕು-ಡೊಂಕು, ಮೌಡ್ಯ, ಜಾತಿ-ಧರ್ಮಗಳ ನಡುವಿನ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ. ಪ್ರಪಂಚದ ಯಾವ ಭಾಗದಲ್ಲಾದರೂ ಆಯಾ ಭಾಷೆ ಹಾಗೂ ಭಾವನೆಗಳ ಮೂಲಕ ಸಮಾಜದ ಸಾಮರಸ್ಯ, ಸೌಹಾರ್ಧತೆಯಿಂದ ದಾರ್ಶನಿಕರು ಮತ್ತು ಶರಣರು ಕಂಡಂತಹ ಸಮ ಸಮಾಜದ ನಿರ್ಮಾಣ ಮಾಡುವಲ್ಲಿ ಸಾಹಿತ್ಯ ಕ್ಷೇತ್ರದಿಂದ ಸೇವೆ ಸಲ್ಲಿಸಬೇಕು. ಸಾಹಿತ್ಯ ಅಕ್ಷರಸ್ಥ ಮತ್ತು ಅನಕ್ಷರಸ್ಥರಲ್ಲಿ ಯಾರಾದರೊಬ್ಬರ ಮೇಲೆ ಪ್ರಭಾವ ಬೀರಬೇಕು” ಎಂದು ತಿಳಿಸಿದರು.

” ಸಾಹಿತ್ಯ ಎನ್ನುವುದು ಒಂದು ನ್ಯಾಯಯುತ ಬದುಕು. ಅದು ಓದು-ಬರಹದ ಮೂಲಕ ಆಗುವಂತಿಲ್ಲ. ಮಾನವ ಆದರ್ಶವಾಗಿ ಬದುಕುವುದೇ ಒಂದು ಬೃಹತ್ ಗ್ರಂಥ. ಸಾಕಷ್ಟು ದಾರ್ಶನಿಕರ ಜೀವನ ಸಾಧನೆಯೇ ಒಂದು ಸಾಹಿತ್ಯ. ಇದನ್ನು ಕನ್ನಡ ಸಾಹಿತ್ಯ ಪರಿಷತ್ತು ಶ್ರವಣ ಸಂಜೆ ಕಾರ್ಯಕ್ರಮದಿಂದ ಸಮಾಜದಲ್ಲಿ ಮರೆಮಾಚಲ್ಪಟ್ಟ ಎಷ್ಟೋ ಜನರನ್ನು ಹೊರತರಬಹುದಾದ ಪರಿಕಲ್ಪನೆಯಾಗಿದೆ. ವ್ಯವಸ್ಥೆಯಲ್ಲಿ ಭ್ರಮೆಗಳನ್ನು ತೊಡೆದುಹಾಕಿ ವಾಸ್ತವ ನೆಲೆಗಟ್ಟಿಗೆ ತರಲು ರಾಜಕೀಯ, ಸಾಮಾಜಿಕ, ಶೈಕ್ಷಣಿಕದಂತಹ ಪ್ರತಿಯೊಂದು ಕ್ಷೇತ್ರಕ್ಕೂ ಸಾಹಿತ್ಯದ ಮಾರ್ಗದರ್ಶನ ಅಗತ್ಯವಿದೆ” ಎಂದು ಸಾಹಿತಿ ಮನಸುಳಿ ಮೋಹನ್‌ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ಕನ್ನಡ ಸಾಹಿತ್ಯದ ಚಟುವಟಿಕೆಗಳು ನಂದಾದೀಪದಂತೆ ಬೆಳಗಿ ಉತ್ತಮ ಸಮಾಜ ನಿರ್ಮಾಣ ಮಾಡಲಿ ಎಂದು ಮನಸ್ಸು ಪ್ರತಿಷ್ಠಾನದ ಅಧ್ಯಕ್ಷ ಟಿ.ಆ‌ರ್. ಶ್ರೀಧರ್ ಮಾಹಿತಿ ನೀಡಿದರು. ಈ ವೇಳೆ ಕಸಾಪ ಜಿಲ್ಲಾ ಮಹಿಳಾ ಪ್ರಧಾನ ಸಂಚಾಲಕಿ ಎಂ.ಎಸ್. ವಿಶಾಲಾಕ್ಷಮ್ಮ, ಕಸಾಪ ತಾಲ್ಲೂಕು ಅಧ್ಯಕ್ಷ ನವೀನ್ ಪೆನ್ನಯ್ಯ, ಜಿಲ್ಲಾ ಪ್ರಧಾನ ಸಂಚಾಲಕ ಇಮ್ರಾನ್ ಅಹ್ಮದ್ ಬೇಗ್, ಶಿಕ್ಷಕ ಟಿ. ನಾಗರಾಜ, ಬಿ.ಎಸ್. ಭಗವಾನ್, ಶಿವಣ್ಣ, ರವಿ ದಳವಾಯಿ, ಪತ್ರಕರ್ತ ಹೆದ್ದೂರು ಶಿವಣ್ಣ, ಬಿ.ಎಂ. ಮಲ್ಲಿಕಾರ್ಜುನ, ಶಿಕ್ಷಕ ರಂಗನಾಥ್, ಕಡೂರು ಪ್ರಶಾಂತ್, ಸಿದ್ರಾಮಯ್ಯ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...