ಬಡವರನ್ನು ಬಿಟ್ಟು, ನೂರಾರು ಎಕರೆಯ ಭೂ ಮಾಲೀಕರನ್ನು ಒಕ್ಕಲೆಬ್ಬಿಸಿ: ಸರ್ಕಾರಕ್ಕೆ ಹೋರಾಟಗಾರರ ಆಗ್ರಹ

Date:

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಡವರು ಜೀವನಕ್ಕಾಗಿ ಬದುಕಿಗಾಗಿ ಒಂದು ಹಾಗೂ ಎರಡು ಎಕರೆ ಭೂಮಿ ಸಾಗುವಳಿ ಮಾಡಿ ಬದುಕನ್ನು ಕಟ್ಟಿಕೊಂಡಿರುವ ಕುಟುಂಬಗಳನ್ನು ಅದೆಷ್ಟೋ ಇದೆ. ಸುಮಾರು 30-40 ವರ್ಷಗಳಿಂದ ಆ ಜಾಗದಲ್ಲಿ ವಾಸವಿದ್ದು ಕಷ್ಟಪಟ್ಟು ಕಾಫಿ, ಅಡಿಕೆ, ಬಾಳೆ ಗಿಡಗಳನ್ನು ಬೆಳೆಸಿ ಜೀವನವನ್ನು ನಡೆಸುತ್ತಿದ್ದರು. ಇದರಲ್ಲಿ ಸಣ್ಣ, ಮದ್ಯಮ ಹಾಗೂ ದೊಡ್ಡ ರೈತರನ್ನು ಮಲೆನಾಡಿನ ಭಾಗದಲ್ಲಿ ನೋಡಬಹುದು.

ಇನ್ನೂ ಕೂಡ ಕೆಲವರಿಗೆ ಸರಿಯಾದ ಸೂರು ಕೂಡ ಇಲ್ಲ. ಅದೇ ರೀತಿಯಲ್ಲಿ ಸೂರು ಇದ್ದವರಿಗೆ ಹಕ್ಕುಪತ್ರಗಳಿಲ್ಲ. ಆ ಹಕ್ಕು ಪತ್ರಗಳಿಗೋಸ್ಕರ ಅದೆಷ್ಟೋ ಹೋರಾಟ ಹಾಗೂ ಅಲೆದಾಟ ಮಾಡಿದರೂ ಜನರ ಬದುಕಿಗೆ ಅವರದೇ ಸ್ವತ್ತು ಎಂದು ಹೇಳಿಕೊಳ್ಳುವುದಕ್ಕೂ ಒಂದು ಪತ್ರ ಕೂಡ ಈವರೆಗೆ ಸಿಕ್ಕಿಲ್ಲ.

ತಾವು ಬೆಳೆದ ಗಿಡ, ಮರಗಳನ್ನು ಮಕ್ಕಳಂತೆ ಪಾಲನೆ ಪೋಷಣೆ ಮಾಡಿ ಗಿಡಗಳನ್ನು ಬೆಳೆಸುತ್ತಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ಒತ್ತುವರಿ ತೆರವುಗೊಳಿಸುವ ಆದೇಶವು ಅವರ ಜೀವನವನ್ನೇ ಬುಡಮೇಲುಗೊಳಿಸಿದೆ. ಆದೇಶದ ಪ್ರಕಾರ ಕಂದಾಯ ಹಾಗೂ ಅರಣ್ಯ ಇಲಾಖೆಯವರು ಭೂ ಒತ್ತುವರಿ ತೆರವುಗೊಳಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಒತ್ತುವರಿ

“ಒತ್ತುವರಿ ತೆರವುಗೊಳಿಸುತ್ತೇವೆಂದು ಯಾವುದೇ ತಿಳುವಳಿಕೆ ಪತ್ರವಿಲ್ಲದೆ ಜನರನ್ನು ಒಕ್ಕಲೆಬ್ಬಿಸಿ ಅವರ ಬದುಕನ್ನು ಕಿತ್ತುಕೊಂಡು ಬೀದಿಗೆ ಬೀಳಿಸುತ್ತಿದ್ದಾರೆ” ಎಂದು ಜನಶಕ್ತಿ ಸಂಘಟನೆಯ ಗೌಸ್ ಮೊಹಿದ್ದೀನ್ ಅವರು ಈ ದಿನ.ಕಾಮ್ ಜೊತೆ ತಿಳಿಸಿದ್ದಾರೆ.

“ಒತ್ತುವರಿ ಹೆಸರಿನಲ್ಲಿ ಬಡವರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಈಗಾಗಲೇ ನೂರಾರು ಎಕರೆ ಭೂಮಿಯನ್ನು ಹೊಂದಿರುವ ಭೂ ಮಾಲೀಕರು ಅತಿಕ್ರಮೇಣ ಮಾಡಿಕೊಂಡಿದ್ದರೂ, ಅವರ ವಿರುದ್ಧ ಕ್ರಮವಿಲ್ಲ. ಭೂ ಮಾಲೀಕರಿಗೆ ಗುತ್ತಿಗೆ ಆಧಾರದ ಮೇಲೆ ಭೂಮಿ ನೀಡಲು ಹೊರಟಿರುವ ಸರ್ಕಾರದ ನಿಲುವು ಖಂಡನೀಯ. ಮೊದಲು ಭೂ ಮಾಲೀಕರ ಜಾಗವನ್ನು ತೆರವುಗೊಳಿಸಬೇಕೇ ಹೊರತು ಬಡವರದ್ದಲ್ಲ. ಇದೊಂದು ಮಲತಾಯಿ ಧೋರಣೆಯಾಗಿದೆ. ಪರಿಸರ ರಕ್ಷಣೆ ಮತ್ತು ವಿಕೋಪಕ್ಕೆ ಬಡವರು ಮಾಡಿದ ಸೂರು ಅಥವಾ 1-2 ಎಕರೆ ಭೂಮಿ ಮಾಡಿರುವವರು ಕಾರಣರಲ್ಲ” ಎಂದು ಜನಶಕ್ತಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕೆ. ಎಲ್ ಅಶೋಕ್ ಈ ದಿನ.ಕಾಮ್ಗೆ ಮಾಹಿತಿ ನೀಡಿದ್ದಾರೆ.

ನೂರಾರು ಸಾವಿರಾರು ಎಕರೆ ಒತ್ತುವರಿ ಮಾಡಿದ ಭೂ ಮಾಲೀಕರು, ಕಾರ್ಪೋರೆಟ್ ಕಂಪನಿಗಳು, ಗಣಿಗಾರಿಕೆಗಳು ಹೊರತು ಬದುಕಿಗಾಗಿ ಸೂರು, ತುಂಡು ಭೂಮಿಯನ್ನು ಸಾಗುವಳಿ ಮಾಡಿದ ಕಡುಬಡವರಲ್ಲ. ಒಂದು ವೇಳೆ ಬಡವರು ಸಾಗುವಳಿ ಮಾಡಿದ ಭೂಮಿ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವುದಾರೆ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಸಾಗುವಳಿದಾರರಿಗೆ ಗುತ್ತಿಗೆ ಆಧಾರದಲ್ಲಿ ಭೂಮಿ ನೀಡಬೇಕು. ಕಂದಾಯ ಇಲಾಖೆ ಅಥವಾ ಅರಣ್ಯ ಇಲಾಖೆ, ಇನ್ನು ಮುಂದೆ ಒತ್ತುವರಿ ತೆರವು ಹೆಸರಿನಲ್ಲಿ ಬಡವರ ಭೂಮಿ ತೆರವು ಮಾಡಬಾರದು ಎಂದು ಚಿಕ್ಕಮಗಳೂರಿನ ರೈತರಾದ ವೆಂಕಟೇಶ್ ಹಾಗಲಗಂಚಿಯವರು ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು ವಿಶ್ವವಿದ್ಯಾನಿಲಯದ ಅಂಕಪಟ್ಟಿ ಸಮಸ್ಯೆಗೆ ತೆರೆ ಎಳೆದ ಸ್ಪೀಕರ್ ಯು ಟಿ ಖಾದರ್: ವಿದ್ಯಾರ್ಥಿಗಳು ನಿರಾಳ

ಇದೇ ರೀತಿಯಲ್ಲಿ ಭೂ ಒತ್ತುವರಿ ತೆರವುಗೂಳಿಸಿದರೆ ಸಾವಿರಾರು ಕುಟುಂಬಗಳು ಬೀದಿ ಪಾಲಾಗುತ್ತಾರೆ. ಇದಕ್ಕೆ ಯಾರು ಹೊಣೆ? ಸರ್ಕಾರ ಗಮನದಲ್ಲಿ ತೆಗೆದುಕೊಂಡು ಭೂಮಿ ಒತ್ತುವರಿ ತೆರವು ಮಾಡಿಸುವುದಕ್ಕಿಂತ ಮೊದಲೇ ಅಲ್ಲಿ ಬದುಕುತ್ತಿರುವ ಕಡು ಬಡಜನರು, ಸೂರು ಕಟ್ಟಿಕೊಂಡವರು ಹಾಗೂ ಎರಡು ಎಕರೆ ಜಾಗ ಮಾಡಿ ಬದುಕುತ್ತಿರುವ ಜನರು ಮತ್ತು ರೈತರ ಬಗ್ಗೆ ಕಾಳಜಿ ವಹಿಸಿ ಅವರಿಗೊಂದು ಬದುಕು ಕಟ್ಟಿಕೊಡಬೇಕೆಂದು ಪಶ್ಚಿಮ ಘಟ್ಟಗಳಲ್ಲಿ ವಾಸಿಸುತ್ತಿರುವ ಜನರು ಈ ದಿನ.ಕಾಮ್ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...