ಚಿಕ್ಕಮಗಳೂರು | ಭೂ ಹಗರಣ ಪ್ರಕರಣ; ಗಂಭೀರವಾಗಿ ಪರಿಗಣಿಸಿದ ಸರ್ಕಾರ

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತು ಕಡೂರು ತಾಲೂಕುಗಳಲ್ಲಿ ನಡೆದಿರುವ ಅಕ್ರಮ ಭೂ ಮಂಜೂರಾತಿ ಪ್ರಕರಣವನ್ನು ಯಾವುದೇ ಒತ್ತಡಗಳಿಗೆ ಮಣಿಯದೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಎರಡೂ ತಾಲೂಕುಗಳಲ್ಲಿ ನೀತಿ ನಿಯಮಗಳನ್ನು ಮೀರಿ ಕಾನೂನುಬಾಹಿರವಾಗಿ ಸುಮಾರು 6,000ಕ್ಕೂ ಅಧಿಕ ಎಕರೆ ಭೂಮಿ ಮಂಜೂರು ಆಗಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ಅವರು ನೀಡಿದ್ದು, ” ಅಂಕಿ ಅಂಶ ದಾಖಲೆಗಳನ್ನು ಪರಿಗಣಿಸಿ ತನಿಖೆ ನಡೆಸುತ್ತಿದ್ದು, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಮೂಡಿಗೆರೆ ತಾಲೂಕಿನಲ್ಲಿ 2000 ಪ್ರಕರಣ ಬೆಳಕಿಗೆ ಬಂದಿದ್ದು, ಅದರಲ್ಲಿ 1320 ಪ್ರಕರಣಗಳಲ್ಲಿ 3700 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಭೂ ಮಂಜೂರು ಮಾಡಲಾಗಿದೆ. ಎರಡನೇ ಹಂತದಲ್ಲಿ ಅನುಮಾನಚೆಂದು ಪರಿಗಣಿಸಿರುವ 640 ಪ್ರಕರಣಗಳಲ್ಲಿ 1,500 ಎಕರೆ ಭೂಮಿ ಮಂಜೂರಾಗಿದೆ. ಇದರಲ್ಲಿ ಸ್ವಲ್ಪ ಏರಿಳಿತಗಳು ಆಗುವ ಸಾಧ್ಯತೆ ಇದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಡೂರು ತಾಲೂಕಿನಲ್ಲಿ 2240 ಪ್ರಕರಣ ಬೆಳಕಿಗೆ ಬಂದಿದ್ದು, 1,030 ಪ್ರಕರಣಗಳಲ್ಲಿ 2,500 ಎಕರೆ ಭೂಮಿ ಅಕ್ರಮವಾಗಿ ಮಂಜೂರು ಆಗಿದ್ದು, ಇದರಲ್ಲಿ ಅರಣ್ಯ ಭೂಮಿಯೂ ಸೇರಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲಿಂಗಸೂಗೂರು ಪುರಸಭೆಯ ನಾಲ್ವರ ಸದಸ್ಯತ್ವ ಅನರ್ಹ; ಜಿಲ್ಲಾಧಿಕಾರಿ ಆದೇಶ

“ಎರಡನೇ ಹಂತದಲ್ಲಿ 961 ಅನುಮಾನಾಸ್ಪದ ಪ್ರಕರಣವೆಂದು ಗುರುತಿಸಲಾಗಿದೆ. ಅರ್ಜಿ ಸಲ್ಲಿಸದೆ, ಸಮಿತಿ ಒಪ್ಪಿಗೆ ಪಡೆಯದೆ ಸರ್ಕಾರಿ ಗೋಮಾಳ ಸೇರಿದಂತೆ ಭೂಮಿಯನ್ನು ಮಂಜೂರು ಮಾಡಿದ್ದು, ಕೆಲವು ಪ್ರಕರಣಗಳಲ್ಲಿ ಕಡತಗಳೇ ಇಲ್ಲ. ತನಿಖೆಯ ಪ್ರಗತಿಯನ್ನು ಪ್ರತಿದಿನ ತಾವೇ ಖುದ್ದಾಗಿ ಪರಿಶೀಲಿಸುತ್ತಿದ್ದು, ಕಂದಾಯ ಆಯುಕ್ತರು ಭೇಟಿ ನೀಡಿ ವರದಿಯನ್ನು ಪಡೆಯಲಾಗಿದೆ” ಎಂದರು.

“20 ದಿನದಲ್ಲಿ ಸ್ಪಷ್ಟವಾದ ವರದಿ ಸಲ್ಲಿಕೆ ಆಗುವ ಸಾಧ್ಯತೆಗಳಿವೆ. ಬಡವರಿಗೆ ತೊಂದರೆ ಇಲ್ಲ. ಭೂ ಒತ್ತುವರಿಗೆ ಸಂಬಂಧಿಸಿದಂತೆ ಅನುಮಾನಾಸ್ಪದ ಪ್ರಕರಣಗಳಲ್ಲಿ ಬಡವರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...