ಚಿಕ್ಕಮಗಳೂರು | ಅರಣ್ಯ ಒತ್ತುವರಿ ಕಾಯ್ದೆ, ಮಹಿಳಾ ಹಕ್ಕು ಕುರಿತ ಕಾನೂನು ಅರಿವು ಕಾರ್ಯಕ್ರಮ ರದ್ದು; ಇದರ ಹಿಂದಿನ ರಹಸ್ಯವೇನು?

Date:

ಅರಣ್ಯ ಒತ್ತುವರಿ ಕಾಯ್ದೆ, ಮಹಿಳೆಯ ಮೇಲಾಗುತ್ತಿರುವ ದೌರ್ಜನ್ಯ, ಲೈಂಗಿಕ ಕಿರುಕುಳಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ವಿಷಯವಾಗಿ ಮಹಿಳೆಯರು ಹೆಚ್ಚು ಕಾನೂನು ಹಾಗೂ ಮಹಿಳಾ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ಚಿಕ್ಕಮಗಳೂರು ಜಿಲ್ಲೆ ಮಲೆನಾಡಿನಲ್ಲಿ ಅದೆಷ್ಟೋ ಸಮಸ್ಯೆಗಳು ಸರಮಲೆಯಾಗೆ ಉಳಿದಿವೆ. ಇತ್ತೀಚಿಗೆ ಮಲೆನಾಡಿನಲ್ಲಿ ಒತ್ತುವರಿ ತೆರವು, ಕಸ್ತೂರಿ ರಂಗನ್, ಮಾಧವ ಗಾಡ್ಗೀಳ್ ವರದಿಯಂತಹ ಅನೇಕ ಸಮಸ್ಯೆಗಳು ಮಾರ್ಪಾಡಾಗುತ್ತಿವೆ.
ಇಲ್ಲಿ ಬದುಕುತ್ತಿರುವ ಜನರು ದಿನಕ್ಕೊಂದು ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಈವರೆಗೆ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಸಿಕ್ಕಿಲ್ಲ.

ಸಮಸ್ಯೆಗಳನ್ನು ಪ್ರಶ್ನಿಸಿದರೆ ಯಾವುದೇ ತಪ್ಪು ಮಾಡದೇ ಇದ್ದರೂ ಅವರ ವಿರುದ್ಧ ಕೇಸ್ ದಾಖಲಿಸುತ್ತಾರೆ. ಯಾವ ಸೆಕ್ಷನ್‌ಗೆ ಏನೆಲ್ಲಾ ಹಕ್ಕು ಹಾಗೂ ಮಾಹಿತಿಗಳಿವೆಯೆಂದು ಈವರೆಗೆ ಹೆಚ್ಚಿನ ಮಾಹಿತಿ ತಿಳಿದಿಲ್ಲ. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಾನೂನು ಅರಿವು ರದ್ದು 1

ಕಳೆದ ವಾರ ಅರಣ್ಯ ಕಾಯ್ದೆಗಳು ಮತ್ತು ಮಹಿಳಾ ಹಕ್ಕುಗಳ ಕುರಿತು ಒಂದು ‘ಕಾನೂನು ಅರಿವುʼ ಕಾರ್ಯಕ್ರಮ
ಮಾಡಬೇಕೆಂದು ಸುತ್ತಮುತ್ತಲಿನ ಜನರು ಯೋಚಿಸಿ ಕೊಪ್ಪ ತಾಲೂಕಿನ ಅಗಳಗಂಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗಲಗಂಡಿ ಗ್ರಾಮ ಪಂಚಾಯತಿ ಒಳಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮಲೆನಾಡು ಉಳಿಸಿ ಅಭಿಯಾನದವರು ಕಾರ್ಯಕ್ರಮ ಕೈಗೊಂಡಿದ್ದರು.

ಕಾನೂನು ಅರಿವು ಮೂಡಿಸುವುದಕ್ಕೆ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ವಿ ಹನುಮಂತಪ್ಪನವರು ಕಾರ್ಯಕ್ರಮಕ್ಕೆ ಬರುತ್ತೇನೆಂದು ಹೇಳಿದ್ದರು. ಹಾಗಾಗಿ ಸುತ್ತಮುತ್ತಲಿನ ಗ್ರಾಮದ ಜನರು ಕೂಲಿ ನಾಲಿ ಬಿಟ್ಟು ಕಾನೂನು ಅರಿವು ತಿಳಿಯಬೇಕೆಂದು ದೂರದ ಊರುಗಳಿಂದ ಕಾರ್ಯಕ್ರಮ ಏರ್ಪಡಿಸಿರುವ ಜಾಗಕ್ಕೆ ಬಂದಿದ್ದರು. ಆದರೆ ಅಧಿಕಾರಿಗಳ ವರ್ಗದಿಂದ ಕಾರ್ಯಕ್ರಮ ರದ್ದಾಗಿದೆ. ರದ್ದಾಗುವುದಕ್ಕೆ ಕಾರಣ ಏನೆಂಬುದು ತಿಳಿದಿಲ್ಲ.

ಕಾನೂನು ಅರಿವು ರದ್ದು 2

ಒಂದು ದಿನ ಕೂಲಿ ಹೋಗದಿದ್ದರೆ ಹೊಟ್ಟೆ ತುಂಬಿಸಿಕೊಳ್ಳುವುದಕ್ಕೂ ಕಷ್ಟವಾಗುತ್ತದೆ. ಹಾಗಿದ್ದರೂ ಕೂಡಾ ಅಲ್ಲಿನ ಕೂಲಿ ಕಾರ್ಮಿಕರು ಕಾನೂನು ಅರಿವು ತಿಳಿದುಕೊಳ್ಳಲು ಬಂದಿದ್ದರು. ಕಾರ್ಯಕ್ರಮ ರದ್ದಾಗಿರುವುದನ್ನು ಕೇಳಿ ಬೇಸರಗೊಂಡು ಮರಳಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಆತಂಕ ಸೃಷ್ಟಿಸಿದ್ದ ಸೆನ್ಸಾರ್ ಸೂಟ್‌ಕೇಸ್; ಲಘು ಸ್ಫೋಟದ ಮೂಲಕ ನಾಶ

“ಕಾರ್ಯಕ್ರಮ ರದ್ದಾಗಿರುವುದರ ಹಿಂದೆ ಕಾಣದ ಕೈಗಳ ಕೆಲಸ ನಡೆದಿದೆ. ಇಲ್ಲಿ ನೆಮ್ಮದಿಯಿಂದ ಬದುಕುತ್ತಿರುವ ಜನರ ಮಧ್ಯೆ ರಾಜಕೀಯ ತರುವುದು ಸರಿಯಿಲ್ಲ. ರಾಜಕೀಯ ನಡೆಸಿ ಅಧಿಕಾರಿಗಳನ್ನು ಕುಗ್ಗಿಸುವ ಕೆಲಸಗಳು ನಡೆಯುತ್ತಿವೆ. ಅಧಿಕಾರಿ ವರ್ಗ ಹಾಗೂ ಎಲ್ಲ ಇಲಾಖೆಯವರು ಮುಂಚೂಣಿಯಲ್ಲಿ ನಿಂತು ಕಾನೂನು ಅರಿವು ಕಾರ್ಯಕ್ರಮ ನಡೆಸಬೇಕು. ಆದರೆ ಇಲ್ಲಿ ಅಧಿಕಾರಿಗಳಿಂದ ಜನರಿಗೆ ಯಾವುದೇ ಸಹಕಾರ ದೊರೆಯುತ್ತಿಲ್ಲ” ಎಂದು ಸುತ್ತಮುತ್ತಲಿನ ಹಾಗೂ ಕಾರ್ಯಕ್ರಮಕ್ಕೆ ಆಗಮಿಸಿದ್ದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...