ಚಿಕ್ಕಮಗಳೂರು | ವಿಡಿಯೋ ಮಾಡಲು ಹೋದಾಗ ದುರಂತ: ಎತ್ತಿನಗಾಡಿ ಹರಿದು ವ್ಯಕ್ತಿ ಸಾವು 

Date:

ಎತ್ತಿನಗಾಡಿ ಮೆರವಣಿಗೆಯ ವಿಡಿಯೋ ಮಾಡಲು ಹೋಗಿ ಎತ್ತಿನಗಾಡಿಯ ಅಡಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಅಂತರಘಟ್ಟ ಗಡೀಹಳ್ಳಿ ಗ್ರಾಮದ ಬಳಿ ನಡೆದಿದೆ.

ಗಡೀಹಳ್ಳಿ ಗ್ರಾಮದ ರವಿ (40) ಎಂಬಾತ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗಡಿಹಳ್ಳಿ ಗ್ರಾಮದಿಂದ ಅಂತರಘಟೆಗೆ ಎತ್ತಿನಗಾಡಿ ಓಡಿಸುವಾಗ ರಸ್ತೆ ಮಧ್ಯೆ ನಿಂತು ಮೆರವಣಿಗೆಯ ವಿಡಿಯೋ ಮಾಡುತ್ತಿದ್ದ ರವಿ ಮೇಲೆ ಎತ್ತಿನಗಾಡಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಡೂರು ತಾಲೂಕಿನ ದುರ್ಗಾಂಬ ಜಾತ್ರೆಗೆ ಎತ್ತಿನ ಗಾಡಿಗಳ ಮೂಲಕ ಭಕ್ತಾದಿಗಳು ಸಾಮಾನ್ಯವಾಗಿದ್ದು, ಈ ಜಾತ್ರೆಗೆ ಎತ್ತಿನ ಗಾಡಿಯ ಮೂಲಕ ಭಕ್ತಾಧಿಗಳು ಬರುವುದು ವಿಶೇಷ. ಐತಿಹಾಸಿಕ ಅಂತರಘಟ್ಟ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಪ್ರತಿ ವರ್ಷ ನಡೆಯುತ್ತದೆ. ಅದೇ ರೀತಿಯಲ್ಲಿ ಈ ವರ್ಷ ಜಾತ್ರಾ ಮಹೋತ್ಸವದ ಅಂಗವಾಗಿ ಎತ್ತಿನಗಾಡಿ ಓಡಿಸುವ ಸಂಪ್ರದಾಯವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ʼಸೂಸಲವಾನಿʼ ಗ್ರಾಮದ ರಸ್ತೆಗಿಲ್ಲ ಡಾಂಬರು ಭಾಗ್ಯ; ಗ್ರಾಮಸ್ಥರ ಅಳಲು ಕೇಳೋರೆ ಇಲ್ಲ

ಜಾತ್ರೆಯು ಪ್ರಾರಂಭವಾಗುವ ತಿಂಗಳ ಮುಂಚೆ ಭಕ್ತಾಧಿಗಳು ಲಕ್ಷ ಲಕ್ಷ ರೂಪಾಯಿ ಕೊಟ್ಟು ಹೊಸ ಎತ್ತುಗಳನ್ನು ಕೊಂಡುಕೊಂಡು, ಎತ್ತಿನಗಾಡಿಯನ್ನು ಸಿಂಗರಿಸಿ ಜಾತ್ರೆಗೆ ಇತರೆ ಎತ್ತಿನ ಗಾಡಿಗಳೊಂದಿಗೆ ನಾಮುಂದು ತಾಮುಂದೆಂದು ಹೋಗುವರು ಹೀಗೆ ಅಜ್ಜಂಪುರ ತಾಲ್ಲೂಕು ಗಡೀಹಳ್ಳಿಗ್ರಾಮದಲ್ಲೂ ಜಾತ್ರೆಗೆ ಪ್ರತಿವರ್ಷ ಎತ್ತಿನಗಾಡಿ ಹೋಡುವುದು ಸಾಮಾನ್ಯವಾಗಿದ್ದು ಜಾತ್ರೆಗೆ ಹೊರಡುವ ಮುನ್ನ ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ಎತ್ತಿನ ಗಾಡಿಗಳು ಹೋಗಿ ಪೊಜೆ ಮಾಡಿಸಿಕೊಂಡು ಅಲ್ಲಿಂದ ಬರುವಾಗ ಗಡಿಹಳ್ಳಿ ಗ್ರಾಮದಲ್ಲಿಯೇ ಅದೇ ಗ್ರಾಮದ ಮೃತ ರವಿ ಗಾಡಿಯ ಜೊತೆ ಓಡಿಬರುವಾಗ ಪಕ್ಕದಲ್ಲಿನ ಇನ್ನೊಂದು ಎತ್ತಿನಗಾಡಿಯ ನೊಗ ತಾಗಿ ಕೆಳಗೆ ಬಿದ್ದಿದ್ದು, ಆ ಗಾಡಿಯು ಅವನ ಮೇಲೆ ಹರಿದಿದ್ದು, ಗಂಭೀರ ಗಾಯಗೊಂಡಿದ್ದ ಅವರು ಸಾವನಪ್ಪಿದ್ದಾರೆ. ಘಟನೆಯ ದೃಶ್ಯವು ಮೊಬೈಲ್‌ನಲ್ಲಿ ಸೆರೆಯಾಗಿದೆ.

ಮೃತನಿಗೆ ಒಂದು ಹೆಣ್ಣು, ಒಂದು ಗಂಡು ಮಗುವಿದೆ ಎಂದು ತಿಳಿದು ಬಂದಿದೆ. ಈ ಕುರಿತು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...