ಚಿಕ್ಕಮಗಳೂರು | ರೈತ, ದಲಿತ, ಆದಿವಾಸಿಗಳ ಬೃಹತ್‌ ಸಮಾವೇಶ

Date:

  • ʼಜನರ ಏಳಿಗೆಗೆ ದುಡಿಯುವವರಿಗೆ ಮತ ನೀಡಬೇಕುʼ
  • ʼಮತ ಮಾರಿಕೊಳ್ಳುವವರನ್ನು ಬಹಿಷ್ಕಾರ ಮಾಡಬೇಕುʼ

ಬಡಜನರು ಸೂರಿಗಾಗಿ ಮತ್ತು ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ರಾಜಕಾರಣಿಗಳು ಹಣ ಮತ್ತು ತೋಳ್ಬಲದಿಂದ ಇವತ್ತು ಅಧಿಕಾರಕ್ಕೆ ಬರುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಮುಖಾಮುಖಿಯಾಗಿ ಚರ್ಚೆಸುವ ಉದ್ದೇಶದಿಂದ ‘ಮಲೆನಾಡಿಗರ ಬೃಹತ್ ಆಗ್ರಹ ಸಮಾವೇಶ’ ಆಯೋಜಿಸಿದ್ದೆವು. ಆದರೆ, ಅವರು ಬಂದಿಲ್ಲ. ಜನರಿಗೆ ಮುಖ ತೋರಿಸಲು ಅವರಿಗೆ ಯೋಗ್ಯತೆಯಿಲ್ಲ ಎಂದು ಸಮಾವೇಶದ ಉಸ್ತುವಾರಿ ಗೌಸ್‌ ಮೊಹಿದ್ದೀನ್ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ರೈತ, ದಲಿತ, ಆದಿವಾಸಿ ಸಂಘಟನೆಗಳ ಮುಖಂಡರು ‘ಮಲೆನಾಡಿಗರ ಬೃಹತ್ ಆಗ್ರಹ ಸಮಾವೇಶ’ ಆಯೋಜಿಸಿದ್ದರು. ಸಮಾವೇಶದಲ್ಲಿ ಗೌಸ್‌ ಮೊಹಿದ್ದೀನ್ ಮಾತನಾಡಿದರು. “ಪ್ರಸ್ತುತದಲ್ಲಿ ಪ್ರಭುತ್ವವು ಮೂಲಭೂತವಾದಿಯಾಗಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಎಷ್ಟು ಜನಕ್ಕೆ ಭೂಮಿ ಕೊಟ್ಟಿದ್ದೀರಿ, ಎಷ್ಟು ಜನಕ್ಕೆ ಮನೆ, ನಿವೇಶನ ಕೊಟ್ಟಿದ್ದೀರಿ ಎಂದು ನಾವೆಲ್ಲರೂ ಎಲ್ಲ ಪಕ್ಷದವರಿಗೆ ಪ್ರಶ್ನೆ ಮಾಡಬೇಕು. ಅದನ್ನು ಪ್ರಮಾಣಿಕವಾಗಿ ಯಾರು ಜಾರಿ ಮಾಡುತ್ತಾರೆಂದು ಅನಿಸುತ್ತದೋ ಅವರಿಗೆ ಮಾತ್ರ ನಾವು ಮತ ನೀಡಬೇಕು. ಜನರ ಏಳಿಗೆಗಾಗಿ ಯಾರು ದುಡಿಯುತ್ತಾರೋ ಅವರಿಗೆ ಮತ ನೀಡಬೇಕು” ಎಂದು ಎಚ್ಚರಿಕೆ ನೀಡಿದರು.

“ಬದುಕು, ನೆಮ್ಮದಿಯ ನಾಳೆಗಾಗಿ ಹಕ್ಕುಪತ್ರ ಇಲ್ಲದೆ ಮಲೆನಾಡಿನ ಜನರು ತತ್ತರಿಸಿ ಹೋಗುತ್ತಿದ್ದಾರೆ. ಭೂಮಿ ಇಲ್ಲದೆ ಜೀವನ ನಡೆಸಲು ಕಷ್ಟಕರವಾಗಿದೆ” ಎಂದು ವೆಂಕಟೇಶ್‌ ಹಾಗಲಗಂಚಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಮ್‌ ಆದ್ಮಿ ಪಕ್ಷದ ಸುಂದರೇಶ್‌ ಗೌಡ್ರು ಮಾತನಾಡಿ, “ಭಾರತದಲ್ಲಿ ಹುಟ್ಟಿದ ಪ್ರತಿ ಮಗುವಿಗೂ ದೆಹಲಿಯಲ್ಲಿ ಸಿಗುವಂತಹ ಉಚಿತ ಆರೋಗ್ಯ, ಶಿಕ್ಷಣ, ಬದುಕಿಗೆ ಆಶ್ರಯ ಸಿಗಬೇಕು. ನಮ್ಮ ಪಕ್ಷ ಇದಕ್ಕೆ ಶೇ.100ರಷ್ಟು ಭರವಸೆ ಕೊಡುತ್ತದೆ” ಎಂದು ಹೇಳಿದರು.

“ಭ್ರಷ್ಟಾಚಾರಕ್ಕೆ ತೊಡಗಿರುವ ಪಕ್ಷಗಳನ್ನು ಮುಟ್ಟುಗೋಲು ಹಾಕುತ್ತೇವೆ. ಮತದಾನದ ಹಕ್ಕನ್ನು ಸಂವಿಧಾನ ನೀಡಿದೆ. ಸಂವಿಧಾನದ ಉಳಿಯಬೇಕೆಂದರೆ, ಮತದಾನ ಬಹಿಷ್ಕಾರ ಮಾಡಬಾರದು. ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು” ಎಂದು ಹೇಳಿದರು.

“ಅರಣ್ಯ ಹಕ್ಕು ಕಾಯಿದೆಯಲ್ಲಿ ಭೂಮಿ, ವಿದ್ಯುತ್‌, ನೀರು, ಕೃಷಿ ಅಳವಡಿಸಿದ್ದರೆ ಅದನ್ನು ಸ್ಥಳದಿಂದ ರವಾನಿಸುವಂತಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕುದುರೆಮುಖ ರಾಷ್ಟ್ರೀಯ ಯೋಜನೆ ಹೊರತು ಪಡಿಸಿ ಸ್ವತಂತ್ರ್ಯ ಪೂರ್ವ ಜನಸಂಖ್ಯೆ 35 ಕೋಟಿ ದಾಟಿದೆ. ಜನರಿಗೆ ಆಹಾರ ಕೊರತೆ ಹೆಚ್ಚಾಗಿದೆ. ಹಾಗಾಗಿ ಭೂಮಿ ಮಂಜೂರು ಮಾಡಬೇಕು. ಜನರಿಗೆ ಬದುಕು ಕಟ್ಟಿಕೊಳ್ಳುವುದಕ್ಕೆ ಕೃಷಿ, ತೋಟಗಾರಿಕೆ ಬೆಳೆಗೆ ಜಾಗ ಕೊಟ್ಟಿರುವಂತಹ ಹಲವು ಉದಾಹರಣೆಗಳಿವೆ” ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಪ್ರಾಣಿ-ಪಕ್ಷಿಗಳಿಂದ ಬೆಳೆ ರಕ್ಷಿಸಲು ಮೈಕ್‌ ಮೊರೆಹೋದ ರೈತರು

ಜನರಿಗೆ ಅನ್ನ ಕೊಡಕೆ ಆಗುತ್ತ, ರೈತನ ಮನೆ ಹಾಳು ಮಾಡುವಂತಹ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಯಾವುದೇ ಸರ್ಕಾರ ಆಗಿರಬಹುದು. ನಾವು ಕೆಲಸ ನಡೆಸುತ್ತಾ ಇರುವಾಗ ಅರ್ಧ ಕೆಲಸ ಮುಗಿಸಿದ ನಂತರ ಅರಣ್ಯ ಇಲಾಖೆಯವರು ತಡೆಯಿಡುತ್ತಾರೆ. ಮುಂದಿನ ದಿನಗಳಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬಗೆಹರಿಸುತ್ತೇನೆ” ಎಂದು ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...