ಚಿಕ್ಕಮಗಳೂರು | ತಿಂಗಳಿಂದ ಧರಣಿ, ಸ್ಥಳಕ್ಕೆ ಬಾರದ ಅಧಿಕಾರಿಗಳು; HDFC ಬ್ಯಾಂಕ್ ಮುಷ್ಕರ; ದಸಂಸ ಆಗ್ರಹ

Date:

ಚಿಕ್ಕಮಗಳೂರು ನಗರ ಸಮೀಪದ ಗೌಡನಹಳ್ಳಿ ವಾಸಿ ಮಂಜುನಾಥ್ ಎಂಬುವವರಿಗೆ ಸೇರಿದ ಜೆ.ಸಿ.ಬಿಯನ್ನು ಹೆಚ್.ಡಿ.ಎಫ್.ಸಿ ಬ್ಯಾಂಕ್ ಸೀಜ್ ಮಾಡಿ ಅಕ್ರಮ ಮಾರಾಟ ಮಾಡಿದ್ದು, ಓರ್ವ ಬಡ ಪ. ಜಾತಿಯ ಕುಟುಂಬಕ್ಕೆ ನಷ್ಟ ಉಂಟು ಮಾಡಿರುವುದನ್ನು ದಲಿತ, ಜನಪರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತೇವೆಂದು ಮಂಗಳವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. 

ನಗರದ ಎಂ.ಜಿ ರಸ್ತೆಯ ಹೆಚ್.ಡಿ.ಎಫ್.ಸಿ ಬ್ಯಾಂಕ್ ಎದುರು ಸುಮಾರು ಒಂದು ತಿಂಗಳಿಂದ ನೊಂದವರು ಮತ್ತು ಹೋರಾಟಗಾರರು ಹಗಲು-ರಾತ್ರಿ ಧರಣಿ ಮಾಡಲಾಗುತ್ತಿದ್ದರು ಸಹ ಯಾವುದೇ ಅಧಿಕಾರಿಗಳಿಂದಾಗಲೀ, ಮತ್ತು ಇಲಾಖೆಗಳಿಂದಾಗಲೀ ಹಾಗೂ ಜನ ಪ್ರತಿನಿಧಿಗಳಿಂದಾಗಲೀ ನ್ಯಾಯ ದೊರಕಿರುವುದಿಲ್ಲ. ಮಂಜುನಾಥ್ ಒಳ್ಳೆ ರೀತಿ ಬದುಕು ಕಟ್ಟಿಕೊಳ್ಳುವ ಕನಸ್ಸು ಕಟ್ಟಿಕೊಂಡು ಸಾಲ ಮಾಡಿ 7ಲಕ್ಷ ಮುಂಗಡ ಹಣವನ್ನು ಬ್ಯಾಂಕ್‌ಗೆ ಪಾವತಿಸಿ, ಸುಮಾರು 17 ತಿಂಗಳ ಕಂತುಗಳನ್ನು ಒಟ್ಟು 18 ಲಕ್ಷ ಜೆ.ಸಿ.ಬಿ ಖರೀದಿಗಾಗಿ ಭರಿಸಿದ್ದಾರೆ. ಕೇವಲ 2 ಕಂತು ಹಣ ಕಟ್ಟಿದ ಕಾರಣ ಬ್ಯಾಂಕ್‌ನವರು ಏಕಾ ಏಕಿ ನೊಟೀಸ್ ನೀಡದೆ, ಜೆ.ಸಿ.ಬಿಯನ್ನು ಸೀಜ್ ಮಾಡಿ ಅಕ್ರಮ ಮಾರಾಟ ಮಾಡಿರುತ್ತಾರೆ. 33 ಲಕ್ಷ ಬೆಲೆಬಾಳುವ ಕೇವಲ ಒಂದುವರೆ ವರ್ಷದ ಜೆ.ಸಿ.ಬಿಯನ್ನು ಕೇವಲ 22 ಲಕ್ಷ ರೂ.ಗಳಿಗೆ ಬೇರೆಯವರಿಗೆ ಮಾರಾಟ ಮಾಡಿದ್ದು, ಆರ್.ಬಿ.ಐ ನಿಯಮಗಳನ್ನು ಉಲ್ಲಂಘಿಸಿ, ಮಂಜುನಾಥ್ ಕುಟುಂಬಕ್ಕೆ ಜೆ.ಸಿ.ಬಿ ಮತ್ತು ಹಣವನ್ನೂ ಸಹ ಇಲ್ಲದಂತೆ ಮಾಡಿ ಸಾಲದ ಸುಳಿಗೆ ಸಿಲುಕಿಸಿದ್ದಾರೆ. ಆರ್ಥಿಕ ದುಸ್ಥಿತಿಗೆ ಕಾರಣರಾಗಿರುವ ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಾನ್ಯತೆಯನ್ನು ಒತ್ತಾಯಿಸುತ್ತದೆ. ಈ ಕೂಡಲೇ ರದ್ದುಪಡಿಸುವಂತೆ ಒಕ್ಕೂಟದಿಂದ ತಿಳಿಸಿದರು.

ಕಳೆದ 1 ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದರೂ ಹೋರಾಟಗಾರರ ಮನಸ್ಥಿತಿಯನ್ನು ನಿರ್ಲ್ಯಕ್ಷಿಸುತ್ತಿರುವ ಜಿಲ್ಲಾಡಳಿತ, ಬ್ಯಾಂಕ್ ಅಧಿಕಾರಿಗಳು, ಪೊಲೀಸ್ ಇಲಾಖೆ, ಜನ ಪ್ರತಿನಿಧಿಗಳ ನಡೆಯನ್ನು ತೀವ್ರವಾಗಿ ಖಂಡಿಸಿ, ದಿನಾಂಕ : 02/03/2026 ರಂದು ಒಕ್ಕೂಟ ಸಭೆ ಸೇರಿ ವಿವಿಧ ರೀತಿಯ ವಿಭಿನ್ನ ಮಾಧರಿಯ ಹೋರಾಟವನ್ನು ರೂಪಿಸಲು ತೀರ್ಮಾನಿಸಿದೆ. ದಿನಾಂಕ 04/03/2026 ರಂದು ಬೆಳಿಗ್ಗೆ 11:00 ಗಂಟೆಗೆ ನಗರದ ಹನುಮಂತಪ್ಪ ವೃತ್ತದಿಂದ ಮೆರವಣೆಗೆಯಲ್ಲಿ ಹೆಚ್.ಡಿ.ಎಫ್.ಸಿ ಬ್ಯಾಂಕ್ ಆಡಳಿತ ಮಂಡಳಿಯವರ ಪ್ರತಿಕೃತಿಯನ್ನು ಶವಯಾತ್ರೆ ಮೂಲಕ ಹೆಚ್.ಡಿ.ಎಫ್.ಸಿ ಬ್ಯಾಂಕ್ ಮುಂಭಾಗಕ್ಕೆ ತಂದು ಅನಿರ್ಧಿಷ್ಟ ಅವಧಿ ಮುಷ್ಕರದಲ್ಲಿ ಇರಿಸಲಾಗುತ್ತದೆ. ಅನಿರ್ಧಿಷ್ಟ ಅವಧಿಯವರೆಗೆ ಧರಣಿ ಮುಂದುವರೆಯುತ್ತದೆ. ಜಿಲ್ಲಾ ಉಸ್ತುವಾರಿ ಕಛೇರಿ ಮುಂದೆ, ಚಿಕ್ಕಮಗಳೂರು ಶಾಸಕರ ಮನೆಯ ಮುಂದೆ ಮತ್ತು ಮೂಡಿಗೆರೆ ಶಾಸಕರ ಮನೆಯ ಮುಂದೆ ಅನಿರ್ಧಿಷ್ಟ ಅವಧಿ ಮುಷ್ಕರ, ತಮಟೆ ಚಳುವಳಿ, ಕರಪತ್ರ ಚಳುವಳಿ, ಪಂಜಿನ ಮೆರವಣಿಗೆ ಹಾಗೂ ಅರೆಬೆತ್ತಲೆ ಚಳುವಳಿ ಮಾಡಲು ಒಕ್ಕೂಟದ ಸಭೆಯು ನಿರ್ಧರಿಸಿದ್ದೇವೆಂದು ದಸಂಸ ಮುಖಂಡ ಮರ್ಲೆ ಅಣ್ಣಯ್ಯ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾನೂನು ದಾಖಲೆಗಳಂತೆಯೇ ಉರುಸು ಆಚರಣೆ ನಡೆಯಬೇಕು; ಸೈಯದ್ ಫಕ್ರುದ್ದೀನ್ ಶಾ ಖಾದ್ರಿ

ಬಡ ರೈತನ ಆರ್ಥಿಕ ದಿವಾಳಿಗೆ ಕಾರಣರಾಗಿರುವ ಹೆಚ್.ಡಿ.ಎಫ್.ಸಿ ಬ್ಯಾಂಕ್ ಆಡಳಿತ ಮಂಡಳಿ ಅಧಿಕಾರಿಗಳು, ನೊಂದವರಿಗೆ ಜೆ.ಸಿ.ಬಿ ಕೊಡುವರೆಗೂ ಅನಿರ್ಧಿಷ್ಟ ಅವಧಿ ಮುಷ್ಕರ ಮಾಡಿ, ನೊಂದವರಿಗೆ ನ್ಯಾಯ ಕೊಡಿಸಲು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಬೆಂಬಲವಾಗಿರಲು ತೀರ್ಮಾನಿಸಿದೆ ಎಂದಿದ್ದಾರೆ. ಈ ವೇಳೆ ದಸಂಸ ಮುಖಂಡ ಮರ್ಲೆ ಅಣ್ಣಯ್ಯ, ಶ್ರೀನಿವಾಸ್, ಕೃಷ್ಣಮೂರ್ತಿ, ಎದ್ದೇಳು ಕರ್ನಾಟಕ ಟಿ.ಎಲ್ ಗಣೇಶ್, ಮಂಜುನಾಥ್, ಬೋರಮ್ಮ, ನಿವೃತ್ತ ನೌಕರರ ಸಂಘದ ಮುಖಂಡರು, ಹಾಗೂ ಇನ್ನಿತರ ಉಪಸಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...