ಚಿಕ್ಕಮಗಳೂರು | ಮಲೆನಾಡಿನಲ್ಲಿ ಅಪರೂಪಕ್ಕೆ ಪತ್ತೆಯಾದ ರಕ್ತಗನ್ನಡಿ ಹಾವು

Date:

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸ ಕಲ್ಮಕ್ಕಿ ಗ್ರಾಮದ ನಿವಾಸಿ ಸ್ನೇಕ್ ರಿಜ್ವಾನ್ ಅವರ ಮನೆಯ ಬಳಿ ಅಪರೂಪದ ರಕ್ತಗನ್ನಡಿ ಹಾವು ಕಾಣಿಸಿಕೊಂಡಿದೆ.

ರಕ್ತಗನ್ನಡಿ ಹಾವು ವಿಷಕಾರಿ ಹಾವುಗಳಲ್ಲಿ ಒಂದಾಗಿದ್ದು, ಉರಗ ತಜ್ಞರೊಬ್ಬರ ಮನೆಯಂಗಳದಲ್ಲಿ, ಹಾವನ್ನು ನೋಡಿದ ಅವರ ಪತ್ನಿ ಪತಿಗೆ ತಿಳಿಸಿದ್ದಾರೆ. ಇದನ್ನು ಗಮನಿಸಿದ ರಿಜ್ವಾನ್ ಹಾವನ್ನು ಜೋಪಾನವಾಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ರಿಜ್ವಾನ್, “ಇದು ಅಪರೂಪದ ಮತ್ತು ವಿಷಕಾರಿ ಹಾವುಗಳಲ್ಲಿ ಒಂದಾದ ಕೋರಲ್ ಸ್ನೇಕ್, ಹವಳದ ಹಾವು ಎಂದು ಗುರುತಿಸಿಕೊಂಡಿದೆ. ಮಲೆನಾಡಲ್ಲಿ ಹಪ್ಪಟೆ ಹಾವು ಹಾಗೂ ರಕ್ತಗನ್ನಡಿ ಹಾವು ಎಂದೇ ಪ್ರಚಲಿತದಲ್ಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಕ್ತಗನ್ನಡಿ ಹಾವು ಅತ್ಯಂತ ವಿಷಕಾರಿ. ಆದರೆ ಈ ಹಾವು ಕಚ್ಚಿ ಸತ್ತವರ ಪ್ರಕರಣ ಕಡಿಮೆ. ಇದರ ಹಲ್ಲುಗಳು ಮುಂಭಾಗದಲ್ಲಿ ತುಸು ಹೆಚ್ಚೇ ಬಾಗಿರುವ ಕಾರಣ ಇದು ಕಚ್ಚುವ ಸಂದರ್ಭದಲ್ಲಿ ವಿಷ ದೇಹಕ್ಕೆ ಸೇರುವುದು ಕಡಿಮೆ. ಪಶ್ಚಿಮಘಟ್ಟದಲ್ಲಿ ಈ ಹಾವು ಕಂಡು ಬರುತ್ತವೆ. ವಿಶೇಷವೆಂದರೆ ಹಾವಿನ ಕೆಳಭಾಗ ಕೆಂಪು ಬಣ್ಣದಲ್ಲಿದ್ದು ಗಮನ ಸೆಳೆಯುತ್ತವೆ” ಎಂದು ಸ್ನೇಕ್ ರಿಜ್ವಾನ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪುರಸಭೆ ಅಧಿಕಾರಿಗಳ ಏಕಾಏಕಿ ದಾಳಿ; ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ

ಸ್ನೇಕ್ ರಿಜ್ವಾನ್ ಅವರು ಸಾವಿರಕ್ಕೂ ಹೆಚ್ಚು ಹಾವುಗಳನ್ನು ಹಿಡಿದಿದ್ದಾರೆ ಇವರು ಎಲ್ಲ ತರಹದ ಹಾವುಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹೆಬ್ಬಾವು, ಕಾಳಿಂಗ ಸರ್ಪ, ನಾಗರಹಾವು, ಕನ್ನಡಿಯ ಹಾವು ಸೇರಿದಂತೆ ಇನ್ನೂ ಇತರ ಹಾವುಗಳನ್ನು ಹಿಡಿದು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಕಾಡಿಗೆ ಬಿಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...