ಸೌಜನ್ಯ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಮರುತನಿಖೆ ನಡೆಸಬೇಕೆಂದು ಆಗ್ರಹಿಸಿ ಎಲ್ಲ ಪ್ರಗತಿಪರ ಸಂಘಟನೆಗಳೊಂದಿಗೆ ನವೆಂಬರ್ 3ರಂದು ಚಿಕ್ಕಮಗಳೂರಿನ ಅಡ್ಯಂತಾಯ ರಂಗ ಮಂದಿರದಲ್ಲಿ ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಾಗರಿಕ ಒಕ್ಕೂಟದ ಕಾರ್ಯದರ್ಶಿ ಜಗದೀಶ್ ಚಕ್ರವರ್ತಿ ಹೇಳಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾರ್ಯಕ್ರಮ ಯಾವುದೇ ರಾಜಕೀಯ ಪ್ರೇರಿತವಲ್ಲ. ಯಾವುದೇ ಜಾತಿ, ಧರ್ಮ, ವ್ಯಕ್ತಿ, ಕ್ಷೇತ್ರಕ್ಕೆ ಅಪಮಾನ ಮಾಡುವ ಉದ್ದೇಶವಿಲ್ಲ. ಇದು ಕೇವಲ ಒಂದು ಹೆಣ್ಣುಮಗುವಿಗೆ ಆಗಿರುವ ಅನ್ಯಾಯದ ವಿರುದ್ಧದ ಹೋರಾಟವಷ್ಟೇ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ, ಬೆಳ್ತಂಗಡಿ ಪ್ರಗತಿಪರ ಚಿಂತಕ ಪ್ರಸನ್ನರವಿ, ಗಿರೀಶ್ ಮಟ್ಟೆಣ್ಣನವರ್, ನಾಗರಿಕ ವೇದಿಕೆ ಅಧ್ಯಕ್ಷ ಪ್ರಶಾತ್ ಪೂಜಾರಿ ಭಾಗವಹಿಸುವರು. ಎಲ್ಲ ಪ್ರಗತಿಪರ ಸಂಘಟನೆಗಳು ಸಭೆಗೆ ಬೆಂಬಲ ಸೂಚಿಸಿವೆ” ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ; 104 ಮೈಲ್ ಕೆಳಭಾಗದ ರೈತರಿಗೆ ನೀರೊದಗಿಸಲು ವಿಫಲ
ಸುದ್ದಿಗೋಷ್ಠಿಯಲ್ಲಿ ನಾಗರೀಕ ಒಕ್ಕೂಟದ ಉಪಾಧ್ಯಕ್ಷ ಬಿನ್ನಡಿ ಜಯಪಾಲ್, ಖಜಾಂಚಿ ಡಿ.ಎಂ ಪ್ರವೀಣ್, ಕರವೇ ಉಪಾಧ್ಯಕ್ಷ ಯಾಕೂಬ್, ಕಾರ್ಯದರ್ಶಿ ಶಿವಾನಂದ ಇದ್ದರು.




