ಚಿಕ್ಕಮಗಳೂರು | 40 ಜನರಿರುವ ಕಾಡಂಚಿನ ಗ್ರಾಮಕ್ಕೆ ರಸ್ತೆಯೇ ಇಲ್ಲ; ವೃದ್ಧರು, ರೋಗಿಗಳನ್ನು ಹೆಗಲ ಮೇಲೆ ಹೊರುವ ದುಃಸ್ಥಿತಿ

Date:

ಆರೋಗ್ಯ ಸಮಸ್ಯೆಯಿಂದ ತೀವ್ರ ಅಸ್ವಸ್ಥರಾಗಿದ್ದ ವೃದ್ಧೆ ಶೇಷಮ್ಮ(70) ಎಂಬುವವರನ್ನು ಆಸ್ಪತ್ರೆಗೆ ಸೇರಿಸಲು ಜೋಳಿಗೆಯಲ್ಲಿ ಹೊತ್ತು ತಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸಾ ತಾಲೂಕಿನ ಸಂಸೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಈಚಲಹೊಳೆ ಗಿರಿಜನ ಕಾಲೋನಿಯಲ್ಲಿ ಸಮರ್ಪಕ ರಸ್ತೆ ಇಲ್ಲದೆ ಸ್ಥಳೀಯ ನಿವಾಸಿಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮುಖ್ಯರಸ್ತೆಗೆ ಬರಲು ಸಮರ್ಪಕ ರಸ್ತೆ ಇಲ್ಲದ ಕಾರಣ ವಯಸ್ಸಾದವರನ್ನು ಆಸ್ಪತ್ರೆಗೆ ಕರೆತರಲು ಜೋಳಿಗೆಯಲ್ಲಿ ಹೊತ್ತು ತರುವ ಪರಿಸ್ಥಿತಿ ಎದುರಾಗಿದೆ.

ಈಚಲಹೊಳೆ ಗಿರಿಜನ ಕಾಲೋನಿಯಲ್ಲಿ 10 ರಿಂದ 12 ಕುಟುಂಬಗಳು ವಾಸವಿದ್ದು, ಅಲ್ಲಿನ ಜನರು ವೃದ್ದೆಯನ್ನು ಜೋಳಿಗೆಯಲ್ಲಿ ಹೊತ್ತು ತಂದು ಕಳಸ ಆಸ್ಪತ್ರೆಗೆ ಸೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಿರಿಜನ ಕುಟುಂಬಗಳು ವಾಸವಾಗಿರುವ ಈಚಲಹೊಳೆ ಕಾಲೋನಿ ಕಳಕೋಡದಿಂದ 3 ಕಿಮೀ ದೂರದಲ್ಲಿದೆ. ಈ ಕಾಲೋನಿಗೆ ಈಗಲೂ ರಸ್ತೆ ಸಂಪರ್ಕವಿಲ್ಲ. ಗಿರಿಜನರು ಅನಾರೋಗ್ಯದಂತಹ ಸ್ಥಿತಿಯಲ್ಲಿ ರೋಗಿಗಳನ್ನು ಕಳಕೋಡವರೆಗೂ ಜೋಳಿಗೆಯಲ್ಲೇ ಹೊತ್ತು ತರಬೇಕಾದ ಪರಿಸ್ಥಿದೆ ಇದೆ.

ಗಿರಿಜನ ಕಾಲೋನಿ ನಿವಾಸಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕಳಕೋಡದಿಂದ ಈಚಲಹೊಳೆಗೆ ಸಂಪರ್ಕ ರಸ್ತೆ ಕಲ್ಪಿಸಬೇಕೆಂಬ ಗಿರಿಜನರ ಬೇಡಿಕೆ ದಶಕಗಳಿಂದ ಅರಣ್ಯರೋಧನ ಆಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನದ ನಡುವೆ ಪ್ರಸ್ತಾಪಿತ ರಸ್ತೆಯ ಅರ್ಧ ಕಿಮೀ ಹಾದು ಹೋಗುವುದರಿಂದ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯವರು ತಡೆ ಒಡ್ಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ‘ಡಿಸಿ ಮನ್ನಾ ಭೂಮಿ’ಯಲ್ಲಿ ಅಕ್ರಮ ಕಟ್ಟಡ ತೆರವಿಗೆ ದಸಂಸ ಆಗ್ರಹ

“ನ್ಯಾಷನಲ್ ಪಾರ್ಕ್ ಹೆಸರಿನಲ್ಲಿ ನಮಗೆ ಅರಣ್ಯ ಇಲಾಖೆಯವರು ಕಿರುಕುಳ ಕೊಡುತ್ತಿದ್ದಾರೆ. ನಮಗೆ ಈವರೆಗೆ ಯಾವುದೇ ಮೂಲಭೂತ ಸೌಕರ್ಯವೂ ದೊರೆತಿಲ್ಲ. ಹಿಂದಿನ ಶಾಸಕರಿಗೆ ಮನವಿ ಕೊಟ್ಟಿದ್ದೆವು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಇಂದಿನ ಸ್ಥಿತಿ ನೋಡಿ ಈಗಿನ ಶಾಸಕರಾದರೂ ರಸ್ತೆ ಮಾಡಿಸಿಕೊಡಬೇಕು. ಆದಷ್ಟು ಬೇಗ ಇಲ್ಲಿನ ಸಮಸ್ಯೆ ಬಗೆಹರಿಸಬೇಕು” ಎಂದು ಸ್ಥಳೀಯ ಗಿರಿಜನರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...