ಚಿಕ್ಕಮಗಳೂರು | ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಸಂಕೇತಿಕಾ ಉಪವಾಸ ಧರಣಿ

Date:

ಚಿಕ್ಕಮಗಳೂರು ಜಿಲ್ಲೆಯ ಅಗಳಗಂಡಿ ಗ್ರಾಮ ಪಂಚಾಯಿತಿಯ ಹೆಗ್ಗಾರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಹುಲ್ತಾಳ್, ನಕೃಗೋಳಿ, ಹಾಗೂ ಬಂಗಾಡಿ ಈ ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾಡೋಳಗೆ ಗಿಡ ನೆಡುವ ಯೋಜನೆಯನ್ನು ವಿರೋಧಿಸಿ ಆ ಗ್ರಾಮದ ಗ್ರಾಮಸ್ಥರು ಶನಿವಾರ ಉಪವಾಸ ಸತ್ಯಗ್ರಹ ಮಾಡಿದ್ದಾರೆ.

ಅರಣ್ಯ ಇಲಾಖೆಯಿಂದ ಈ ಹಿಂದೇ ಗಿಡ ನೆಡಲು ಮುಂದದಾಗ ಪ್ರತಿಭಟನೆಯನ್ನು ನೆಡೆಸಲಾಗಿತ್ತು. ನಂತರವೂ ಮತ್ತೆ ಕಾಡೋಳಗೆ ಗಿಡ ನೆಡಲು ಗುಂಡಿ ತೊಡಲು ಮುಂದಾದಾಗ ಶುಕ್ರವಾರ ಗ್ರಾಮಸ್ಥರು ತಡೆಯಲು ಹೋದಾಗ ಹೋದಾಗ ಫಾರೆಸ್ಟ್ರ ಹಾಗೂ ಊರಿನ ಗ್ರಾಮಸ್ಥರು ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಕುರಿತು ಉಪವಾಸ ಸತ್ಯಾಗ್ರಹ ಮಾಡಲು  ಸುತ್ತಮುತ್ತಲಿನ ಗ್ರಾಮಸ್ಥರು ಮುಂದಾಗಿ, ಸಂಕೇತಿಕಾ ಉಪವಾಸ ಧರಣಿ ಮಾಡಿ ಈ ಸಭೆಯಲ್ಲಿ ಈ ನಿರ್ಣಯವನ್ನು ಚರ್ಚಿಸಲಾಯಿತು.

ಮಲೆನಾಡಲ್ಲಿ ಇಂತಹ ಯೋಜನೆಗಳು ಅವೈಜ್ಞಾನಿಕ ವಾಗಿದ್ದು,ಅನಾದಿಕಾಲದಿಂದಲೂ ಕಾಡಿನ ನಡುವೆ ಹಾಗೂ ಕಾಡನ್ನು ಉಳಿಸುತ್ತ,ಇಲ್ಲೇ ಇದ್ದು ಬದುಕನ್ನು ಕಟ್ಟಿ ಜೀವನ ಮಾಡಿಕೊಂಡು ಬರುತ್ತಿರುವ ಈ ಹೊತ್ತಿನಲ್ಲಿ ಇಂತಹ ಯೋಜನೆಯನ್ನು ಜಾರಿ ತಂದು ಮಲೆನಾಡಿಗರ ಹಾಗೂ ಅದಿವಾಸಿ ಜನರ ನಿದ್ದೆ ಕೆಡಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಮಲೆನಾಡಿನ ಜನರು ನಾಗರ ಬನ, ದೇವರ ಬನ, ಸೊಪ್ಪಿನ ಹಾಡ್ಯಾ ಹಾಗೂ ಒಳಹಕ್ಲು ಎಂದು ಮನೆ ಸುತ್ತಮುತ್ತಲಿನ  ಕಾಡು ಗುಡ್ಡಗಳನ್ನು ರಕ್ಷಿಸಿಕೊಂಡು ಬಂದಿದ್ದು ಇತ್ತೀಚಿನ ದಿನಗಳಲ್ಲಿ ಸೆಕ್ಷನ್ 4(1), ಕಾಯ್ದೆಯಡಿ ತಂದು ಈ ಎಲ್ಲಾ ಕಾಡು ಗುಡ್ಡಗಳನ್ನು   ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಳ್ಳುತ್ತ ಜನರ ಬದುಕನ್ನು ಕಿತ್ತುಕೊಳ್ಳುತ್ತಿದೆ. ನಾವು ಶತಮಾನದಿಂದಲೂ ಹುಟ್ಟಿಬೆಳೆದ ಕಾಡಲ್ಲಿ  ಅದಿವಾಸಿ ರೈತರು ಬದುಕನ್ನು ಕಟ್ಟಿಕೊಂಡಿದ್ದರು, ಕನಿಷ್ಠ ಬದುಕನ್ನು ಕಟ್ಟಿಕೊಳ್ಳಲು ಮಾಡಿಕೊಂಡಿದ್ದ ಸಾಗುವಳಿ ಭೂಮಿಗೆ ಹಕ್ಕುಪತ್ರವನ್ನು ಈ ಕಾಯ್ದೆಗಳಿಂದ ಕೊಡಲಾಗುತ್ತಿಲ್ಲ. ತಕ್ಷಣ ಈ ರೀತಿಯ ಯೋಜನೆ ಕೈ ಬಿಟ್ಟು ಇಲ್ಲಿನ ಮೂಲನಿವಾಸಿಗಳಿಗೆ ಸಾಗುವಳಿ ಭೂಮಿಗೆ ಮತ್ತು ವಾಸಿಸುವ ಮನೆಗೆ ಹಕ್ಕುಪತ್ರವನ್ನು ನೀಡುವುದರೊಂದಿಗೆ ನೈಸರ್ಗಿಕವಾಗಿರುವ ಮಲೆನಾಡಿನ ಗುಡ್ಡ, ಕಾಡುಗಳನ್ನು ಅಲ್ಲಿನ ಜನರು ಹಿಂದೆ ಹೇಗೆ ರಕ್ಷಣೆ ಮಾಡಿಕೊಂಡು ಬಂದಿದ್ದರೋ ಹಾಗೆ ಅ ಹಕ್ಕು ಅಲ್ಲಿನ ಜನರಿಗೆ ನೀಡಬೇಕು ಎಂದು ಗ್ರಾಮಸ್ಥರು ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲಾಖೆಯ ಬೇರೆ ಬೇರೆ ಜನಪರ ಪರಿಸರ ಯೋಜನೆಗೆ ಇಲ್ಲಿನ ಜನರ ಸಹಕಾರ ಇರುತ್ತೆ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು. ಮುಂದಿನ ದಿನಗಳಲ್ಲಿ ಈ ರೀತಿಯ ಕಾಡುಪ್ರದೇಶದಲ್ಲಿ ಗಿಡ ನೆಡುವ ಯೋಜನೆಯನ್ನು ಮಲೆನಾಡಿನ ರೈತರೊಂದಿಗೆ ಸೇರಿ ವಿರೋಧಿಸುತ್ತೇವೆ.  ಸ್ಥಗಿತಗೊಳಿಸಿರುವ ಈ ಕಾಮಗಾರಿಯನ್ನು ಇವತ್ತು ನಿಲ್ಲಿಸಿದ್ದರು ಮುಂದೆ ಶಾಶ್ವತವಾಗಿ ನಿಲ್ಲಿಸಬೇಕು. ತಪ್ಪಿದಲ್ಲಿ ಹತ್ತಾರು ಮಲೆನಾಡಿಗರೊಂದಿಗೆ ಹೋರಾಟವನ್ನು ತೀರ್ವ ಗೊಳಿಸುವುದೆಂದು ನಿರ್ಣಯಿಸಲಾಯಿತು ಎಂದು ಉಲ್ತಾಳ್ ನಿವಾಸಿ ತಿಳಿಸದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅರಣ್ಯ ಇಲಾಖೆ ಗಿಡ ನೆಡುವ ಯೋಜನೆ; ಖಂಡಿಸಿ ನಾಳೆ ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ

ಈ ವೇಳೆ ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗಡಿಕಲ್, ಕರ್ನಾಟಕ ಜನಶಕ್ತಿಯ ಮಹಿಳಾ ಮುನ್ನಡೆ ರಾಧ ಹಾಗಲಗಂಚಿ,ಪರಿಸರವಾದಿ ಗುರುಮೂರ್ತಿ ಜೋಗಿಬೈಲು, ಸುಲೋಚನಾ ಹುಲ್ತಾಳ್, ಲೀಲಾವತಿ, ಸುಶೀಲ,ಹೇಮಾ,ರಾಜೇಶ್,ವಿನಯ್, ಕೃಪ, ಹರೀಶ್ ಹಾಗೂ ಗೋಪಾಲಗೌಡ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...